Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಮೆಂತ್ಯ ಭಾತ್

ಸೋನಾಮಸೂರಿ ಅಕ್ಕಿ : ಅರ್ಧ ಕೆಜಿ
ಮೆಂತ್ಯ ಎರಡು ಚಮಚ
ಕ್ಯಾರೆಟ್: 100 ಗ್ರಾಂ
ಹುರುಳೀ ಕಾಯಿ : 100 ಗ್ರಾಂ
ದಪ್ಪ ಮೆಣಸಿನ ಕಾಯಿ: 1
ಶುಂಠಿ : ಹೆಬ್ಬೆರಳಿನಷ್ಟು
ಈರುಳ್ಳಿ : 2
ಎಣ್ಣೆ, ಉಪ್ಪು, ಗರಂ ಮಸಾಲೆ : 3-4 ಚಿಟಿಕೆ
ಹಸಿ ಮೆಣಸಿನ ಕಾಯಿ : 10 ರಿಂದ 12
ಖಾರ ಬೇಕಾದಷ್ಟು, ಸ್ವಲ್ಪ ಜೀರಿಗೆ
ಮಾಡುವ ವಿಧಾನ : ಅಕ್ಕಿಯನ್ನು ಚೆನ್ನಾಗಿ ತೊಳೆದಿಟ್ಟುಕೊಳ್ಳಿ. ತರಕಾರಿಗಳನ್ನು ಸಣ್ಣಗೆ ಉದ್ದಕ್ಕೆ ಹೆಚ್ಚಿಟ್ಟುಕೊಳ್ಳಿ. ತರಕಾರಿ ಹೋಳುಗಳ ಆಕಾರ ವಿಕಾರಗಳು ನಿಮ್ಮ ಕೌಶಲ್ಯ ಜಾಣ್ಮೆಗೆ ಬಿಟ್ಟದ್ದು. ಈರುಳ್ಳಿ, ಹಸಿಮೆಣಸಿನಕಾಯಿಯನ್ನು ಹಚ್ಚಿಕೊಂಡರೆ ಒಳ್ಳೆಯದು.
ಮೆಂತ್ಯಾ ಬಾತ್ ಮಾಡುವುದಕ್ಕೆ ಕುಕ್ಕರ್ ಬೇಡ. ದಪ್ಪ ತಳದ ಪಾತ್ರೆಯಾದರೆ ಚೆನ್ನಾಗಿರುತ್ತದೆ. ಮೊದಲು ಅರ್ಧಬಟ್ಟಲು ಎಣ್ಣೆ ಹಾಕಿ ಕಾಯಿಸಿ. ನಂತರ ಜೀರಿಗೆ, ಮೆಂತ್ಯಹಾಕಿ.
ಬೆಳ್ಳುಳ್ಳಿ- ಶುಂಠಿ ಅರೆದು ಬೇಯುತ್ತಿರುವ ಮಿಶ್ರಣಕ್ಕೆ ಸೇರಿಸಿ. ಅರ್ಧ ನಿಮಿಷಕ್ಕೆಲ್ಲ ಘಂ ಅಂತ ಪರಿಮಳ ಬರುತ್ತದೆ. ಅಂದರೆ ಬೆಳ್ಳುಳ್ಳಿ ಮಿಶ್ರಣ ಚೆನ್ನಾಗಿ ಬೆಂದಿದೆ ಎಂಬ ಸಂಕೇತ. ಈಗ ಈರುಳ್ಳಿ, ಮೆಣಸಿನ ಕಾಯಿ ಹಾಕಿ ಬಾಡಿಸಿ ತರಕಾರಿ ಬಟಾಣಿ ಸುರಿಯಿರಿ. ಆಗಾಗ ಮಿಶ್ರಣವನ್ನು ಚೆನ್ನಾಗಿ ಮಗುಚುತ್ತಿರಬೇಕು. ಬೆಂಕಿ ತೀರಾ ಜೋರಾಗಿದ್ದರೆ ಬಾತ್ ತಳ ಹಿಡಿಯುತ್ತದೆ. ಈಗ ಉರಿ ಆರಿಸಿ ಪಾತ್ರೆಗೆ ಪ್ಲೇಟ್ ಮುಚ್ಚಿಟ್ಟು ಹಬೆಯಲ್ಲಿ ಬೇಯಲು ಬಿಡಿ.
ಹಬೆಯ ನೀರು ಬಸಿದು 5-6 ನಿಮಿಷಕ್ಕೆ ತೊಳೆದ ಅಕ್ಕಿ ಹಾಕಿ ಮತ್ತೆ ಮಗುಚಿ. ಒಂದು ಕಪ್ ಅಕ್ಕಿಗೆ ಎರಡೂವರೆ ಕಪ್ನಂತೆ ನೀರು ಹಾಕಿ ಮಗುಚಿ, ಪ್ಲೇಟ್ ಮುಚ್ಚಿಟ್ಟು ಬೇಯಿಸಿ. ಅಕ್ಕಿ ಬೇಯುತ್ತಾ ಅನ್ನ ಅರಳಲು ಪ್ರಾರಂಭವಾದಾಗ ರುಚಿಗೆ ತಕ್ಕಷ್ಟು ಉಪ್ಪು , ಅಗತ್ಯವಿದ್ದರೆ ನಿಂಬೆ ರಸ, 2 ಚಮಚ ತುಪ್ಪ ಹಾಕಿ ಕೆದಕಿ ಮತ್ತೆ ಮುಚ್ಚಿ ಬೇಯಿಸಿ. ನೀರು ಇಂಗುತ್ತಿದ್ದಂತೆಯೇ ತಯಾರು.
ತುಪ್ಪ, ಮೆಂತ್ಯ, ಶುಂಠಿ, ಜೀರಿಗೆ...ಇದೆಲ್ಲ ಹಾಕುವುದರಿಂದ ಇದು ಹೊಟ್ಟೆಗೂ ತಂಪು. ಮೂಗರಳಿಸುವ ಪರಿಮಳದ ನಡುವೆ ಮೆಂತ್ಯದ ಕಹಿಯೂ ಮಾಯವಾಗಿರುತ್ತದೆ. ಇದಕ್ಕೆ ಹೆಚ್ಚು ತೆಂಗಿನ ಕಾಯಿ, ಎಣ್ಣೆ - ಹೆಚ್ಚು ಮಸಾಲೆ ಹಾಕದೇ ಇರುವುದರಿಂದ ಆರೋಗ್ಯಕ್ಕೂ ಉತ್ತಮ. ಸರಿ. ಶುರು ಮಾಡಿ ಅಡುಗೆ, ಆಲ್ ದ ಬೆಸ್ಟ್!



Click it and Unblock the Notifications
