Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮೆಂತ್ಯ ಭಾತ್

ಸೋನಾಮಸೂರಿ ಅಕ್ಕಿ : ಅರ್ಧ ಕೆಜಿ
ಮೆಂತ್ಯ ಎರಡು ಚಮಚ
ಕ್ಯಾರೆಟ್: 100 ಗ್ರಾಂ
ಹುರುಳೀ ಕಾಯಿ : 100 ಗ್ರಾಂ
ದಪ್ಪ ಮೆಣಸಿನ ಕಾಯಿ: 1
ಶುಂಠಿ : ಹೆಬ್ಬೆರಳಿನಷ್ಟು
ಈರುಳ್ಳಿ : 2
ಎಣ್ಣೆ, ಉಪ್ಪು, ಗರಂ ಮಸಾಲೆ : 3-4 ಚಿಟಿಕೆ
ಹಸಿ ಮೆಣಸಿನ ಕಾಯಿ : 10 ರಿಂದ 12
ಖಾರ ಬೇಕಾದಷ್ಟು, ಸ್ವಲ್ಪ ಜೀರಿಗೆ
ಮಾಡುವ ವಿಧಾನ : ಅಕ್ಕಿಯನ್ನು ಚೆನ್ನಾಗಿ ತೊಳೆದಿಟ್ಟುಕೊಳ್ಳಿ. ತರಕಾರಿಗಳನ್ನು ಸಣ್ಣಗೆ ಉದ್ದಕ್ಕೆ ಹೆಚ್ಚಿಟ್ಟುಕೊಳ್ಳಿ. ತರಕಾರಿ ಹೋಳುಗಳ ಆಕಾರ ವಿಕಾರಗಳು ನಿಮ್ಮ ಕೌಶಲ್ಯ ಜಾಣ್ಮೆಗೆ ಬಿಟ್ಟದ್ದು. ಈರುಳ್ಳಿ, ಹಸಿಮೆಣಸಿನಕಾಯಿಯನ್ನು ಹಚ್ಚಿಕೊಂಡರೆ ಒಳ್ಳೆಯದು.
ಮೆಂತ್ಯಾ ಬಾತ್ ಮಾಡುವುದಕ್ಕೆ ಕುಕ್ಕರ್ ಬೇಡ. ದಪ್ಪ ತಳದ ಪಾತ್ರೆಯಾದರೆ ಚೆನ್ನಾಗಿರುತ್ತದೆ. ಮೊದಲು ಅರ್ಧಬಟ್ಟಲು ಎಣ್ಣೆ ಹಾಕಿ ಕಾಯಿಸಿ. ನಂತರ ಜೀರಿಗೆ, ಮೆಂತ್ಯಹಾಕಿ.
ಬೆಳ್ಳುಳ್ಳಿ- ಶುಂಠಿ ಅರೆದು ಬೇಯುತ್ತಿರುವ ಮಿಶ್ರಣಕ್ಕೆ ಸೇರಿಸಿ. ಅರ್ಧ ನಿಮಿಷಕ್ಕೆಲ್ಲ ಘಂ ಅಂತ ಪರಿಮಳ ಬರುತ್ತದೆ. ಅಂದರೆ ಬೆಳ್ಳುಳ್ಳಿ ಮಿಶ್ರಣ ಚೆನ್ನಾಗಿ ಬೆಂದಿದೆ ಎಂಬ ಸಂಕೇತ. ಈಗ ಈರುಳ್ಳಿ, ಮೆಣಸಿನ ಕಾಯಿ ಹಾಕಿ ಬಾಡಿಸಿ ತರಕಾರಿ ಬಟಾಣಿ ಸುರಿಯಿರಿ. ಆಗಾಗ ಮಿಶ್ರಣವನ್ನು ಚೆನ್ನಾಗಿ ಮಗುಚುತ್ತಿರಬೇಕು. ಬೆಂಕಿ ತೀರಾ ಜೋರಾಗಿದ್ದರೆ ಬಾತ್ ತಳ ಹಿಡಿಯುತ್ತದೆ. ಈಗ ಉರಿ ಆರಿಸಿ ಪಾತ್ರೆಗೆ ಪ್ಲೇಟ್ ಮುಚ್ಚಿಟ್ಟು ಹಬೆಯಲ್ಲಿ ಬೇಯಲು ಬಿಡಿ.
ಹಬೆಯ ನೀರು ಬಸಿದು 5-6 ನಿಮಿಷಕ್ಕೆ ತೊಳೆದ ಅಕ್ಕಿ ಹಾಕಿ ಮತ್ತೆ ಮಗುಚಿ. ಒಂದು ಕಪ್ ಅಕ್ಕಿಗೆ ಎರಡೂವರೆ ಕಪ್ನಂತೆ ನೀರು ಹಾಕಿ ಮಗುಚಿ, ಪ್ಲೇಟ್ ಮುಚ್ಚಿಟ್ಟು ಬೇಯಿಸಿ. ಅಕ್ಕಿ ಬೇಯುತ್ತಾ ಅನ್ನ ಅರಳಲು ಪ್ರಾರಂಭವಾದಾಗ ರುಚಿಗೆ ತಕ್ಕಷ್ಟು ಉಪ್ಪು , ಅಗತ್ಯವಿದ್ದರೆ ನಿಂಬೆ ರಸ, 2 ಚಮಚ ತುಪ್ಪ ಹಾಕಿ ಕೆದಕಿ ಮತ್ತೆ ಮುಚ್ಚಿ ಬೇಯಿಸಿ. ನೀರು ಇಂಗುತ್ತಿದ್ದಂತೆಯೇ ತಯಾರು.
ತುಪ್ಪ, ಮೆಂತ್ಯ, ಶುಂಠಿ, ಜೀರಿಗೆ...ಇದೆಲ್ಲ ಹಾಕುವುದರಿಂದ ಇದು ಹೊಟ್ಟೆಗೂ ತಂಪು. ಮೂಗರಳಿಸುವ ಪರಿಮಳದ ನಡುವೆ ಮೆಂತ್ಯದ ಕಹಿಯೂ ಮಾಯವಾಗಿರುತ್ತದೆ. ಇದಕ್ಕೆ ಹೆಚ್ಚು ತೆಂಗಿನ ಕಾಯಿ, ಎಣ್ಣೆ - ಹೆಚ್ಚು ಮಸಾಲೆ ಹಾಕದೇ ಇರುವುದರಿಂದ ಆರೋಗ್ಯಕ್ಕೂ ಉತ್ತಮ. ಸರಿ. ಶುರು ಮಾಡಿ ಅಡುಗೆ, ಆಲ್ ದ ಬೆಸ್ಟ್!



Click it and Unblock the Notifications