Latest Updates
-
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ!
ಶಬರಿಮಲೆ ಅರಾವಣ ಪಾಯಸಂ ರೆಸಿಪಿ
ಶಬರಿಮಲೆ ಸ್ವಾಮಿ ಪ್ರಸಾದವೆಂದರೆ ಅರಾವಣಂ ಪಾಯಸಂ. ಮಲೆಗೆ ಮಾಲೆ ಹೋಗಿ ಬಂದವರು ಈ ಪ್ರಸಾದ ತಂದು ತಮ್ಮ ಆಪ್ತರಿಗೆ, ಸ್ನೇಹಿತರಿಗೆ ಹಂಚುತ್ತಾರೆ. ಆದ್ದರಿಂದ ಈ ಪಾಯಸಂ ರುಚಿ ಗೊತ್ತಿಲ್ಲ ಎನ್ನುವವರು ತುಂಬಾ ವಿರಳ.

ಒಂದು ಚಮಚ ಬಾಯಿಗೆ ಹಾಕಿದರೆ ಸಾಕು ಅದರ ರುಚಿ ಅದ್ಭುತ ಅನಿಸುವುದು. ಈ ಪಾಯಸ ಹೇಗೆ ತಯಾರಿಸಲಾಗುವುದು? ವರ್ಷದವರೆಗೆ ಇಟ್ಟರೂ ಇದು ಹಾಳಾಗಲ್ಲ, ಹಾಗಾಗಿ ಇದಕ್ಕೆ ಬಳಸುವ ಸಾಮಗ್ರಿ ಯಾವುದು ಎಂಬ ಪ್ರಶ್ನೆ ಹಲವರಲ್ಲಿದೆ.
ಅಯ್ಯಪ್ಪ ಸ್ವಾಮಿ ನೈವೇದ್ಯಕ್ಕೆ ಈ ಪಾಯಸ ಮಾಡ ಬಯಸುವುದಾದರೆ ಇಲ್ಲಿದೆ ರೆಸಿಪಿ ಟ್ರೈ ಮಾಡಿ, ಅದೇ ಅರಾವಣ ಪಾಯಸಂ ರುಚಿಯಲ್ಲಿಯೇ ಇರುತ್ತದೆ. ಬನ್ನಿ ಇದನ್ನು ಮಾಡುವುದು ಹೇಗೆ ಎಂದು ನೋಡೋಣ ಬನ್ನಿ:
Recipe By: Reena TK
Recipe Type: sweet
Serves: many
-
ಬೇಕಾಗುವ ಸಾಮಗ್ರಿ
1/4 ಕಪ್ ಮಟ್ಟಾ ರೈಸ್ (ಕೆಂಪು ಕುಚಲಕ್ಕಿ)
1/4 ಕಪ್ ತುಪ್ಪ
2 ಕಪ್ ನೀರು
1.5 ಕಪ್ ತುಪ್ಪ
2 ಚಮಚ ತೆಂಗಿನಕಾಯಿ ತುಂಡು
1/4 ಚಮಚ ಶುಂಠಿ ಪುಡಿ (ಚುಕ್ಕು)
3-4 ಹಸಿರು ಏಲಕ್ಕಿ
-
ಮಾಡುವ ವಿಧಾನ
* ಉರುಳಿ (ದಪ್ಪ ತಳವಿರುವ ತಾಮ್ರದ ಪಾತ್ರೆ) ಬಿಸಿ ಮಾಡಿ 1/4 ಕಪ್ ತುಪ್ಪ ಹಾಕಿ ಬಿಸಿ ಮಾಡಿ
* ಈಗ ಅದಕ್ಕೆ ಕತ್ತರಿಸಿದ ತೆಂಗಿನಕಾಯಿ ತುಂಡು ಹಾಕಿ ಅದರ ಬಣ್ಣ ಸ್ವಲ್ಪ ಕಂದು ಬಣ್ಣ ಬರುವವರೆಗೆ ಫ್ರೈ ಮಾಡಿ.
* ನಂತರ ಆ ತೆಂಗಿನ ಕಾಯಿ ತೆಗೆದು ಒಂದು ಬದಿಯಲ್ಲಿ ಇಡಿ
* ಈಗ ಅದೇ ತುಪ್ಪಕ್ಕೆ ಮಟ್ಟಾ ರೈಸ್ ಹಾಕಿ 5 ನಿಮಿಷ ಫ್ರೈ ಮಾಡಿ. ನಂತರ 2 ಕಪ್ ಹಾಕಿ ಬೇಯಿಸಿ.
* ಅದಕ್ಕೆ 3/4 ಕಪ್ ತುರಿದ ಬೆಲ್ಲ ಹಾಕಿ, ಬೆಲ್ಲ ಕರಗುವವರೆಗೆ ಬಿಡಿ.
* ಈಗ ಅದಕ್ಕೆ 3-4 ಜಜ್ಜಿದ ಏಲಕ್ಕಿ ಹಾಕಿ.
* ಅಕ್ಕಿಯಿಂದ ತುಪ್ಪ ಬಿಟ್ಟು ಮೇಲ್ಭಾಗದಲ್ಲಿ ತೇಲುವವರೆಗೆ ಬೇಯಿಸಿ. ಮಿಶ್ರಣ ಗಟ್ಟಿಯಾದಾಗ ಗ್ಯಾಸ್ ಆಫ್ ಮಾಡಿ.
* ನಂತರ ಫ್ರೈ ಮಾಡಿಟ್ಟ ತೆಂಗಿನಕಾಯಿ ಪೀಸ್ ಸೇರಿಸಿ, ನಂತರ ಚುಕ್ಕು ಪುಡಿ ಹಾಕಿ ಮಿಶ್ರ ಮಾಡಿ.
* ನಂತರ ದೇವರಿಗೆ ನೈವೇದ್ಯ ಅರ್ಪಿಸಿ, ಇದನ್ನು ಗಾಳಿಯಾಡದ ಡಬ್ಬದಲ್ಲಿ ಹಾಕಿಟ್ಟರೆ ತುಂಬಾ ಸಮಯದವರೆಗೆ ಬಳಸಬಹುದು.
- ಇದನ್ನು ಮಾಡಲು ನೀವು ಉರುಳಿ ಪಾತ್ರೆ ಬಳಸಬೇಕು. ಈ ಪಾತ್ರೆ ಕೇರಳದ ಮನೆಗಳಲ್ಲಿ ಇರುತ್ತದೆ, ಉರುಳಿ ಇಲ್ಲದಿದ್ದರೆ ದಪ್ಪ ತಳದ ಕಡಾಯಿ ಬಳಸಿ, ಆದರೆ ತಾಮ್ರದ ಕಡಾಯಿಯಲ್ಲಿ ಮಾಡಿದರೆ ರುಚಿ ಹೆಚ್ಚು
- ಕ್ಯಾಲೋರಿ: - 47ಕ್ಯಾ
- ಕೊಬ್ಬು: - 12 ಗ್ರಾಂ



Click it and Unblock the Notifications