Just In
- 1 hr ago ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- 2 hrs ago ಮೀನ ರಾಶಿಯಲ್ಲಿ ಬುಧ ವಕ್ರೀಯ ಚಲನೆ ಮಾಡುವಾಗ ಈ 5 ರಾಶಿಯವರು ವೃತ್ತಿ ಜೀವನದ ಬಗ್ಗೆ ಜಾಗ್ರತೆ
- 2 hrs ago ದಿನ ಭವಿಷ್ಯ ಮಾರ್ಚ್ 29: ಶುಕ್ರವಾರದ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
- 3 hrs ago ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
Don't Miss
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಬರಿಮಲೆ ಅರಾವಣ ಪಾಯಸಂ ರೆಸಿಪಿ
ಶಬರಿಮಲೆ ಸ್ವಾಮಿ ಪ್ರಸಾದವೆಂದರೆ ಅರಾವಣಂ ಪಾಯಸಂ. ಮಲೆಗೆ ಮಾಲೆ ಹೋಗಿ ಬಂದವರು ಈ ಪ್ರಸಾದ ತಂದು ತಮ್ಮ ಆಪ್ತರಿಗೆ, ಸ್ನೇಹಿತರಿಗೆ ಹಂಚುತ್ತಾರೆ. ಆದ್ದರಿಂದ ಈ ಪಾಯಸಂ ರುಚಿ ಗೊತ್ತಿಲ್ಲ ಎನ್ನುವವರು ತುಂಬಾ ವಿರಳ.
ಒಂದು ಚಮಚ ಬಾಯಿಗೆ ಹಾಕಿದರೆ ಸಾಕು ಅದರ ರುಚಿ ಅದ್ಭುತ ಅನಿಸುವುದು. ಈ ಪಾಯಸ ಹೇಗೆ ತಯಾರಿಸಲಾಗುವುದು? ವರ್ಷದವರೆಗೆ ಇಟ್ಟರೂ ಇದು ಹಾಳಾಗಲ್ಲ, ಹಾಗಾಗಿ ಇದಕ್ಕೆ ಬಳಸುವ ಸಾಮಗ್ರಿ ಯಾವುದು ಎಂಬ ಪ್ರಶ್ನೆ ಹಲವರಲ್ಲಿದೆ.
ಅಯ್ಯಪ್ಪ ಸ್ವಾಮಿ ನೈವೇದ್ಯಕ್ಕೆ ಈ ಪಾಯಸ ಮಾಡ ಬಯಸುವುದಾದರೆ ಇಲ್ಲಿದೆ ರೆಸಿಪಿ ಟ್ರೈ ಮಾಡಿ, ಅದೇ ಅರಾವಣ ಪಾಯಸಂ ರುಚಿಯಲ್ಲಿಯೇ ಇರುತ್ತದೆ. ಬನ್ನಿ ಇದನ್ನು ಮಾಡುವುದು ಹೇಗೆ ಎಂದು ನೋಡೋಣ ಬನ್ನಿ:
Recipe By: Reena TK
Recipe Type: sweet
Serves: many
-
ಬೇಕಾಗುವ ಸಾಮಗ್ರಿ
1/4 ಕಪ್ ಮಟ್ಟಾ ರೈಸ್ (ಕೆಂಪು ಕುಚಲಕ್ಕಿ)
1/4 ಕಪ್ ತುಪ್ಪ
2 ಕಪ್ ನೀರು
1.5 ಕಪ್ ತುಪ್ಪ
2 ಚಮಚ ತೆಂಗಿನಕಾಯಿ ತುಂಡು
1/4 ಚಮಚ ಶುಂಠಿ ಪುಡಿ (ಚುಕ್ಕು)
3-4 ಹಸಿರು ಏಲಕ್ಕಿ
-
ಮಾಡುವ ವಿಧಾನ
* ಉರುಳಿ (ದಪ್ಪ ತಳವಿರುವ ತಾಮ್ರದ ಪಾತ್ರೆ) ಬಿಸಿ ಮಾಡಿ 1/4 ಕಪ್ ತುಪ್ಪ ಹಾಕಿ ಬಿಸಿ ಮಾಡಿ
* ಈಗ ಅದಕ್ಕೆ ಕತ್ತರಿಸಿದ ತೆಂಗಿನಕಾಯಿ ತುಂಡು ಹಾಕಿ ಅದರ ಬಣ್ಣ ಸ್ವಲ್ಪ ಕಂದು ಬಣ್ಣ ಬರುವವರೆಗೆ ಫ್ರೈ ಮಾಡಿ.
* ನಂತರ ಆ ತೆಂಗಿನ ಕಾಯಿ ತೆಗೆದು ಒಂದು ಬದಿಯಲ್ಲಿ ಇಡಿ
* ಈಗ ಅದೇ ತುಪ್ಪಕ್ಕೆ ಮಟ್ಟಾ ರೈಸ್ ಹಾಕಿ 5 ನಿಮಿಷ ಫ್ರೈ ಮಾಡಿ. ನಂತರ 2 ಕಪ್ ಹಾಕಿ ಬೇಯಿಸಿ.
* ಅದಕ್ಕೆ 3/4 ಕಪ್ ತುರಿದ ಬೆಲ್ಲ ಹಾಕಿ, ಬೆಲ್ಲ ಕರಗುವವರೆಗೆ ಬಿಡಿ.
* ಈಗ ಅದಕ್ಕೆ 3-4 ಜಜ್ಜಿದ ಏಲಕ್ಕಿ ಹಾಕಿ.
* ಅಕ್ಕಿಯಿಂದ ತುಪ್ಪ ಬಿಟ್ಟು ಮೇಲ್ಭಾಗದಲ್ಲಿ ತೇಲುವವರೆಗೆ ಬೇಯಿಸಿ. ಮಿಶ್ರಣ ಗಟ್ಟಿಯಾದಾಗ ಗ್ಯಾಸ್ ಆಫ್ ಮಾಡಿ.
* ನಂತರ ಫ್ರೈ ಮಾಡಿಟ್ಟ ತೆಂಗಿನಕಾಯಿ ಪೀಸ್ ಸೇರಿಸಿ, ನಂತರ ಚುಕ್ಕು ಪುಡಿ ಹಾಕಿ ಮಿಶ್ರ ಮಾಡಿ.
* ನಂತರ ದೇವರಿಗೆ ನೈವೇದ್ಯ ಅರ್ಪಿಸಿ, ಇದನ್ನು ಗಾಳಿಯಾಡದ ಡಬ್ಬದಲ್ಲಿ ಹಾಕಿಟ್ಟರೆ ತುಂಬಾ ಸಮಯದವರೆಗೆ ಬಳಸಬಹುದು.
- ಇದನ್ನು ಮಾಡಲು ನೀವು ಉರುಳಿ ಪಾತ್ರೆ ಬಳಸಬೇಕು. ಈ ಪಾತ್ರೆ ಕೇರಳದ ಮನೆಗಳಲ್ಲಿ ಇರುತ್ತದೆ, ಉರುಳಿ ಇಲ್ಲದಿದ್ದರೆ ದಪ್ಪ ತಳದ ಕಡಾಯಿ ಬಳಸಿ, ಆದರೆ ತಾಮ್ರದ ಕಡಾಯಿಯಲ್ಲಿ ಮಾಡಿದರೆ ರುಚಿ ಹೆಚ್ಚು
- ಕ್ಯಾಲೋರಿ: - 47ಕ್ಯಾ
- ಕೊಬ್ಬು: - 12 ಗ್ರಾಂ