Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಶಬರಿಮಲೆ ಅರಾವಣ ಪಾಯಸಂ ರೆಸಿಪಿ
ಶಬರಿಮಲೆ ಸ್ವಾಮಿ ಪ್ರಸಾದವೆಂದರೆ ಅರಾವಣಂ ಪಾಯಸಂ. ಮಲೆಗೆ ಮಾಲೆ ಹೋಗಿ ಬಂದವರು ಈ ಪ್ರಸಾದ ತಂದು ತಮ್ಮ ಆಪ್ತರಿಗೆ, ಸ್ನೇಹಿತರಿಗೆ ಹಂಚುತ್ತಾರೆ. ಆದ್ದರಿಂದ ಈ ಪಾಯಸಂ ರುಚಿ ಗೊತ್ತಿಲ್ಲ ಎನ್ನುವವರು ತುಂಬಾ ವಿರಳ.

ಒಂದು ಚಮಚ ಬಾಯಿಗೆ ಹಾಕಿದರೆ ಸಾಕು ಅದರ ರುಚಿ ಅದ್ಭುತ ಅನಿಸುವುದು. ಈ ಪಾಯಸ ಹೇಗೆ ತಯಾರಿಸಲಾಗುವುದು? ವರ್ಷದವರೆಗೆ ಇಟ್ಟರೂ ಇದು ಹಾಳಾಗಲ್ಲ, ಹಾಗಾಗಿ ಇದಕ್ಕೆ ಬಳಸುವ ಸಾಮಗ್ರಿ ಯಾವುದು ಎಂಬ ಪ್ರಶ್ನೆ ಹಲವರಲ್ಲಿದೆ.
ಅಯ್ಯಪ್ಪ ಸ್ವಾಮಿ ನೈವೇದ್ಯಕ್ಕೆ ಈ ಪಾಯಸ ಮಾಡ ಬಯಸುವುದಾದರೆ ಇಲ್ಲಿದೆ ರೆಸಿಪಿ ಟ್ರೈ ಮಾಡಿ, ಅದೇ ಅರಾವಣ ಪಾಯಸಂ ರುಚಿಯಲ್ಲಿಯೇ ಇರುತ್ತದೆ. ಬನ್ನಿ ಇದನ್ನು ಮಾಡುವುದು ಹೇಗೆ ಎಂದು ನೋಡೋಣ ಬನ್ನಿ:
Recipe By: Reena TK
Recipe Type: sweet
Serves: many
-
ಬೇಕಾಗುವ ಸಾಮಗ್ರಿ
1/4 ಕಪ್ ಮಟ್ಟಾ ರೈಸ್ (ಕೆಂಪು ಕುಚಲಕ್ಕಿ)
1/4 ಕಪ್ ತುಪ್ಪ
2 ಕಪ್ ನೀರು
1.5 ಕಪ್ ತುಪ್ಪ
2 ಚಮಚ ತೆಂಗಿನಕಾಯಿ ತುಂಡು
1/4 ಚಮಚ ಶುಂಠಿ ಪುಡಿ (ಚುಕ್ಕು)
3-4 ಹಸಿರು ಏಲಕ್ಕಿ
-
ಮಾಡುವ ವಿಧಾನ
* ಉರುಳಿ (ದಪ್ಪ ತಳವಿರುವ ತಾಮ್ರದ ಪಾತ್ರೆ) ಬಿಸಿ ಮಾಡಿ 1/4 ಕಪ್ ತುಪ್ಪ ಹಾಕಿ ಬಿಸಿ ಮಾಡಿ
* ಈಗ ಅದಕ್ಕೆ ಕತ್ತರಿಸಿದ ತೆಂಗಿನಕಾಯಿ ತುಂಡು ಹಾಕಿ ಅದರ ಬಣ್ಣ ಸ್ವಲ್ಪ ಕಂದು ಬಣ್ಣ ಬರುವವರೆಗೆ ಫ್ರೈ ಮಾಡಿ.
* ನಂತರ ಆ ತೆಂಗಿನ ಕಾಯಿ ತೆಗೆದು ಒಂದು ಬದಿಯಲ್ಲಿ ಇಡಿ
* ಈಗ ಅದೇ ತುಪ್ಪಕ್ಕೆ ಮಟ್ಟಾ ರೈಸ್ ಹಾಕಿ 5 ನಿಮಿಷ ಫ್ರೈ ಮಾಡಿ. ನಂತರ 2 ಕಪ್ ಹಾಕಿ ಬೇಯಿಸಿ.
* ಅದಕ್ಕೆ 3/4 ಕಪ್ ತುರಿದ ಬೆಲ್ಲ ಹಾಕಿ, ಬೆಲ್ಲ ಕರಗುವವರೆಗೆ ಬಿಡಿ.
* ಈಗ ಅದಕ್ಕೆ 3-4 ಜಜ್ಜಿದ ಏಲಕ್ಕಿ ಹಾಕಿ.
* ಅಕ್ಕಿಯಿಂದ ತುಪ್ಪ ಬಿಟ್ಟು ಮೇಲ್ಭಾಗದಲ್ಲಿ ತೇಲುವವರೆಗೆ ಬೇಯಿಸಿ. ಮಿಶ್ರಣ ಗಟ್ಟಿಯಾದಾಗ ಗ್ಯಾಸ್ ಆಫ್ ಮಾಡಿ.
* ನಂತರ ಫ್ರೈ ಮಾಡಿಟ್ಟ ತೆಂಗಿನಕಾಯಿ ಪೀಸ್ ಸೇರಿಸಿ, ನಂತರ ಚುಕ್ಕು ಪುಡಿ ಹಾಕಿ ಮಿಶ್ರ ಮಾಡಿ.
* ನಂತರ ದೇವರಿಗೆ ನೈವೇದ್ಯ ಅರ್ಪಿಸಿ, ಇದನ್ನು ಗಾಳಿಯಾಡದ ಡಬ್ಬದಲ್ಲಿ ಹಾಕಿಟ್ಟರೆ ತುಂಬಾ ಸಮಯದವರೆಗೆ ಬಳಸಬಹುದು.
- ಇದನ್ನು ಮಾಡಲು ನೀವು ಉರುಳಿ ಪಾತ್ರೆ ಬಳಸಬೇಕು. ಈ ಪಾತ್ರೆ ಕೇರಳದ ಮನೆಗಳಲ್ಲಿ ಇರುತ್ತದೆ, ಉರುಳಿ ಇಲ್ಲದಿದ್ದರೆ ದಪ್ಪ ತಳದ ಕಡಾಯಿ ಬಳಸಿ, ಆದರೆ ತಾಮ್ರದ ಕಡಾಯಿಯಲ್ಲಿ ಮಾಡಿದರೆ ರುಚಿ ಹೆಚ್ಚು
- ಕ್ಯಾಲೋರಿ: - 47ಕ್ಯಾ
- ಕೊಬ್ಬು: - 12 ಗ್ರಾಂ



Click it and Unblock the Notifications
