Latest Updates
-
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ!
ಶಬರಿಮಲೆ ಅರಾವಣ ಪಾಯಸಂ ರೆಸಿಪಿ
ಶಬರಿಮಲೆ ಸ್ವಾಮಿ ಪ್ರಸಾದವೆಂದರೆ ಅರಾವಣಂ ಪಾಯಸಂ. ಮಲೆಗೆ ಮಾಲೆ ಹೋಗಿ ಬಂದವರು ಈ ಪ್ರಸಾದ ತಂದು ತಮ್ಮ ಆಪ್ತರಿಗೆ, ಸ್ನೇಹಿತರಿಗೆ ಹಂಚುತ್ತಾರೆ. ಆದ್ದರಿಂದ ಈ ಪಾಯಸಂ ರುಚಿ ಗೊತ್ತಿಲ್ಲ ಎನ್ನುವವರು ತುಂಬಾ ವಿರಳ.

ಒಂದು ಚಮಚ ಬಾಯಿಗೆ ಹಾಕಿದರೆ ಸಾಕು ಅದರ ರುಚಿ ಅದ್ಭುತ ಅನಿಸುವುದು. ಈ ಪಾಯಸ ಹೇಗೆ ತಯಾರಿಸಲಾಗುವುದು? ವರ್ಷದವರೆಗೆ ಇಟ್ಟರೂ ಇದು ಹಾಳಾಗಲ್ಲ, ಹಾಗಾಗಿ ಇದಕ್ಕೆ ಬಳಸುವ ಸಾಮಗ್ರಿ ಯಾವುದು ಎಂಬ ಪ್ರಶ್ನೆ ಹಲವರಲ್ಲಿದೆ.
ಅಯ್ಯಪ್ಪ ಸ್ವಾಮಿ ನೈವೇದ್ಯಕ್ಕೆ ಈ ಪಾಯಸ ಮಾಡ ಬಯಸುವುದಾದರೆ ಇಲ್ಲಿದೆ ರೆಸಿಪಿ ಟ್ರೈ ಮಾಡಿ, ಅದೇ ಅರಾವಣ ಪಾಯಸಂ ರುಚಿಯಲ್ಲಿಯೇ ಇರುತ್ತದೆ. ಬನ್ನಿ ಇದನ್ನು ಮಾಡುವುದು ಹೇಗೆ ಎಂದು ನೋಡೋಣ ಬನ್ನಿ:
Recipe By: Reena TK
Recipe Type: sweet
Serves: many
-
ಬೇಕಾಗುವ ಸಾಮಗ್ರಿ
1/4 ಕಪ್ ಮಟ್ಟಾ ರೈಸ್ (ಕೆಂಪು ಕುಚಲಕ್ಕಿ)
1/4 ಕಪ್ ತುಪ್ಪ
2 ಕಪ್ ನೀರು
1.5 ಕಪ್ ತುಪ್ಪ
2 ಚಮಚ ತೆಂಗಿನಕಾಯಿ ತುಂಡು
1/4 ಚಮಚ ಶುಂಠಿ ಪುಡಿ (ಚುಕ್ಕು)
3-4 ಹಸಿರು ಏಲಕ್ಕಿ
-
ಮಾಡುವ ವಿಧಾನ
* ಉರುಳಿ (ದಪ್ಪ ತಳವಿರುವ ತಾಮ್ರದ ಪಾತ್ರೆ) ಬಿಸಿ ಮಾಡಿ 1/4 ಕಪ್ ತುಪ್ಪ ಹಾಕಿ ಬಿಸಿ ಮಾಡಿ
* ಈಗ ಅದಕ್ಕೆ ಕತ್ತರಿಸಿದ ತೆಂಗಿನಕಾಯಿ ತುಂಡು ಹಾಕಿ ಅದರ ಬಣ್ಣ ಸ್ವಲ್ಪ ಕಂದು ಬಣ್ಣ ಬರುವವರೆಗೆ ಫ್ರೈ ಮಾಡಿ.
* ನಂತರ ಆ ತೆಂಗಿನ ಕಾಯಿ ತೆಗೆದು ಒಂದು ಬದಿಯಲ್ಲಿ ಇಡಿ
* ಈಗ ಅದೇ ತುಪ್ಪಕ್ಕೆ ಮಟ್ಟಾ ರೈಸ್ ಹಾಕಿ 5 ನಿಮಿಷ ಫ್ರೈ ಮಾಡಿ. ನಂತರ 2 ಕಪ್ ಹಾಕಿ ಬೇಯಿಸಿ.
* ಅದಕ್ಕೆ 3/4 ಕಪ್ ತುರಿದ ಬೆಲ್ಲ ಹಾಕಿ, ಬೆಲ್ಲ ಕರಗುವವರೆಗೆ ಬಿಡಿ.
* ಈಗ ಅದಕ್ಕೆ 3-4 ಜಜ್ಜಿದ ಏಲಕ್ಕಿ ಹಾಕಿ.
* ಅಕ್ಕಿಯಿಂದ ತುಪ್ಪ ಬಿಟ್ಟು ಮೇಲ್ಭಾಗದಲ್ಲಿ ತೇಲುವವರೆಗೆ ಬೇಯಿಸಿ. ಮಿಶ್ರಣ ಗಟ್ಟಿಯಾದಾಗ ಗ್ಯಾಸ್ ಆಫ್ ಮಾಡಿ.
* ನಂತರ ಫ್ರೈ ಮಾಡಿಟ್ಟ ತೆಂಗಿನಕಾಯಿ ಪೀಸ್ ಸೇರಿಸಿ, ನಂತರ ಚುಕ್ಕು ಪುಡಿ ಹಾಕಿ ಮಿಶ್ರ ಮಾಡಿ.
* ನಂತರ ದೇವರಿಗೆ ನೈವೇದ್ಯ ಅರ್ಪಿಸಿ, ಇದನ್ನು ಗಾಳಿಯಾಡದ ಡಬ್ಬದಲ್ಲಿ ಹಾಕಿಟ್ಟರೆ ತುಂಬಾ ಸಮಯದವರೆಗೆ ಬಳಸಬಹುದು.
- ಇದನ್ನು ಮಾಡಲು ನೀವು ಉರುಳಿ ಪಾತ್ರೆ ಬಳಸಬೇಕು. ಈ ಪಾತ್ರೆ ಕೇರಳದ ಮನೆಗಳಲ್ಲಿ ಇರುತ್ತದೆ, ಉರುಳಿ ಇಲ್ಲದಿದ್ದರೆ ದಪ್ಪ ತಳದ ಕಡಾಯಿ ಬಳಸಿ, ಆದರೆ ತಾಮ್ರದ ಕಡಾಯಿಯಲ್ಲಿ ಮಾಡಿದರೆ ರುಚಿ ಹೆಚ್ಚು
- ಕ್ಯಾಲೋರಿ: - 47ಕ್ಯಾ
- ಕೊಬ್ಬು: - 12 ಗ್ರಾಂ



Click it and Unblock the Notifications