Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಶಬರಿಮಲೆ ಅರಾವಣ ಪಾಯಸಂ ರೆಸಿಪಿ
ಶಬರಿಮಲೆ ಸ್ವಾಮಿ ಪ್ರಸಾದವೆಂದರೆ ಅರಾವಣಂ ಪಾಯಸಂ. ಮಲೆಗೆ ಮಾಲೆ ಹೋಗಿ ಬಂದವರು ಈ ಪ್ರಸಾದ ತಂದು ತಮ್ಮ ಆಪ್ತರಿಗೆ, ಸ್ನೇಹಿತರಿಗೆ ಹಂಚುತ್ತಾರೆ. ಆದ್ದರಿಂದ ಈ ಪಾಯಸಂ ರುಚಿ ಗೊತ್ತಿಲ್ಲ ಎನ್ನುವವರು ತುಂಬಾ ವಿರಳ.

ಒಂದು ಚಮಚ ಬಾಯಿಗೆ ಹಾಕಿದರೆ ಸಾಕು ಅದರ ರುಚಿ ಅದ್ಭುತ ಅನಿಸುವುದು. ಈ ಪಾಯಸ ಹೇಗೆ ತಯಾರಿಸಲಾಗುವುದು? ವರ್ಷದವರೆಗೆ ಇಟ್ಟರೂ ಇದು ಹಾಳಾಗಲ್ಲ, ಹಾಗಾಗಿ ಇದಕ್ಕೆ ಬಳಸುವ ಸಾಮಗ್ರಿ ಯಾವುದು ಎಂಬ ಪ್ರಶ್ನೆ ಹಲವರಲ್ಲಿದೆ.
ಅಯ್ಯಪ್ಪ ಸ್ವಾಮಿ ನೈವೇದ್ಯಕ್ಕೆ ಈ ಪಾಯಸ ಮಾಡ ಬಯಸುವುದಾದರೆ ಇಲ್ಲಿದೆ ರೆಸಿಪಿ ಟ್ರೈ ಮಾಡಿ, ಅದೇ ಅರಾವಣ ಪಾಯಸಂ ರುಚಿಯಲ್ಲಿಯೇ ಇರುತ್ತದೆ. ಬನ್ನಿ ಇದನ್ನು ಮಾಡುವುದು ಹೇಗೆ ಎಂದು ನೋಡೋಣ ಬನ್ನಿ:
Recipe By: Reena TK
Recipe Type: sweet
Serves: many
-
ಬೇಕಾಗುವ ಸಾಮಗ್ರಿ
1/4 ಕಪ್ ಮಟ್ಟಾ ರೈಸ್ (ಕೆಂಪು ಕುಚಲಕ್ಕಿ)
1/4 ಕಪ್ ತುಪ್ಪ
2 ಕಪ್ ನೀರು
1.5 ಕಪ್ ತುಪ್ಪ
2 ಚಮಚ ತೆಂಗಿನಕಾಯಿ ತುಂಡು
1/4 ಚಮಚ ಶುಂಠಿ ಪುಡಿ (ಚುಕ್ಕು)
3-4 ಹಸಿರು ಏಲಕ್ಕಿ
-
ಮಾಡುವ ವಿಧಾನ
* ಉರುಳಿ (ದಪ್ಪ ತಳವಿರುವ ತಾಮ್ರದ ಪಾತ್ರೆ) ಬಿಸಿ ಮಾಡಿ 1/4 ಕಪ್ ತುಪ್ಪ ಹಾಕಿ ಬಿಸಿ ಮಾಡಿ
* ಈಗ ಅದಕ್ಕೆ ಕತ್ತರಿಸಿದ ತೆಂಗಿನಕಾಯಿ ತುಂಡು ಹಾಕಿ ಅದರ ಬಣ್ಣ ಸ್ವಲ್ಪ ಕಂದು ಬಣ್ಣ ಬರುವವರೆಗೆ ಫ್ರೈ ಮಾಡಿ.
* ನಂತರ ಆ ತೆಂಗಿನ ಕಾಯಿ ತೆಗೆದು ಒಂದು ಬದಿಯಲ್ಲಿ ಇಡಿ
* ಈಗ ಅದೇ ತುಪ್ಪಕ್ಕೆ ಮಟ್ಟಾ ರೈಸ್ ಹಾಕಿ 5 ನಿಮಿಷ ಫ್ರೈ ಮಾಡಿ. ನಂತರ 2 ಕಪ್ ಹಾಕಿ ಬೇಯಿಸಿ.
* ಅದಕ್ಕೆ 3/4 ಕಪ್ ತುರಿದ ಬೆಲ್ಲ ಹಾಕಿ, ಬೆಲ್ಲ ಕರಗುವವರೆಗೆ ಬಿಡಿ.
* ಈಗ ಅದಕ್ಕೆ 3-4 ಜಜ್ಜಿದ ಏಲಕ್ಕಿ ಹಾಕಿ.
* ಅಕ್ಕಿಯಿಂದ ತುಪ್ಪ ಬಿಟ್ಟು ಮೇಲ್ಭಾಗದಲ್ಲಿ ತೇಲುವವರೆಗೆ ಬೇಯಿಸಿ. ಮಿಶ್ರಣ ಗಟ್ಟಿಯಾದಾಗ ಗ್ಯಾಸ್ ಆಫ್ ಮಾಡಿ.
* ನಂತರ ಫ್ರೈ ಮಾಡಿಟ್ಟ ತೆಂಗಿನಕಾಯಿ ಪೀಸ್ ಸೇರಿಸಿ, ನಂತರ ಚುಕ್ಕು ಪುಡಿ ಹಾಕಿ ಮಿಶ್ರ ಮಾಡಿ.
* ನಂತರ ದೇವರಿಗೆ ನೈವೇದ್ಯ ಅರ್ಪಿಸಿ, ಇದನ್ನು ಗಾಳಿಯಾಡದ ಡಬ್ಬದಲ್ಲಿ ಹಾಕಿಟ್ಟರೆ ತುಂಬಾ ಸಮಯದವರೆಗೆ ಬಳಸಬಹುದು.
- ಇದನ್ನು ಮಾಡಲು ನೀವು ಉರುಳಿ ಪಾತ್ರೆ ಬಳಸಬೇಕು. ಈ ಪಾತ್ರೆ ಕೇರಳದ ಮನೆಗಳಲ್ಲಿ ಇರುತ್ತದೆ, ಉರುಳಿ ಇಲ್ಲದಿದ್ದರೆ ದಪ್ಪ ತಳದ ಕಡಾಯಿ ಬಳಸಿ, ಆದರೆ ತಾಮ್ರದ ಕಡಾಯಿಯಲ್ಲಿ ಮಾಡಿದರೆ ರುಚಿ ಹೆಚ್ಚು
- ಕ್ಯಾಲೋರಿ: - 47ಕ್ಯಾ
- ಕೊಬ್ಬು: - 12 ಗ್ರಾಂ



Click it and Unblock the Notifications