Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಸತ್ಯನಾರಾಯಣನ ಪೂಜೆ, ಮಮ ಪ್ರಸಾದ ವಿನಿಯೋಗಃ
ಪೂಜೆಯೆಂದರೆ ಸತ್ಯನಾರಾಯಣ ಪೂಜೆಯಯ್ಯಾ, ರುಚಿಯೆಂದರೆ ಸಪಾದ ಭಕ್ಷ್ಯದ್ದಯ್ಯಾ...
ಸತ್ಯ ನಾರಾಯಣ ಪೂಜೆಯಲ್ಲಿ ಮಹಾ ಪೂಜೆಯಾದ ನಂತರ ಕಡ್ಡಾಯವಾಗಿ ತಿನ್ನಬೇಕು ಅಂತ ಪ್ರಸಾದ ರೂಪದಲ್ಲಿ ಒಂದಿಷ್ಟು ಸ್ವೀಟ್ ಕೊಡುತ್ತಾರಲ್ಲ. ಎಂಥ ರುಚಿ ಅಂತೀರಿ. ಬಣ್ಣವಿಲ್ಲದ ಕೇಸರೀಬಾತ್ನ ಹಾಗೆ ಕಾಣುವ ಈ ಸ್ವೀಟ್ ಯಾಕಿಷ್ಟು ರುಚಿ ಅಂತ ಕೇಳಿದರೆ, ‘ಅದು ದೇವರಿಗೆ ನೈವೇದ್ಯ ಮಾಡಿದ್ದು . ಅದಕ್ಕೇ ಅಷ್ಟೊಂದು ರುಚಿ...’ ಅಂತ ಅಮ್ಮ ಸಮಜಾಯಿಷಿ ಹೇಳುತ್ತಾಳೆ.
‘ಒಂಚೂರೇ ಕೊಡುತ್ತಾರಲ್ಲ ಅದಕ್ಕೇ ಅಷ್ಟು ರುಚಿ ಕಣೋ... ’ ಅಂತ ಸ್ನೇಹಿತ ಲಾಜಿಕಲ್ ಉತ್ತರ ಹೇಳಿದರೂ ಅಮ್ಮ ಹೇಳಿದ್ದೇ ಕೇಳಲು ಖುಷಿಯೆನಿಸುವುದು ಅಲ್ಲವೇ ? ಅಮ್ಮ ಅಂದರೆ ಹಾಗೆ.
ಸತ್ಯನಾರಾಯಣ ಪೂಜೆಯ ಸಂದರ್ಭದಲ್ಲಿ ಮಾಡುವ ಸಿಹಿ ತಿಂಡಿಯ ಹೆಸರು ಸಪಾದ ಭಕ್ಷ್ಯ. ಮನೆಯಲ್ಲಿ ಸಣ್ಣ ಸಮಾರಂಭವೆಂದರೂ ಸತ್ಯನಾರಾಯಣ ಪೂಜೆ ಇಟ್ಟುಕೊಳ್ಳುವುದು ರೂಢಿ. ಸೋ, ಈ ಸಪಾದ ತಯಾರಿಸುವುದು ಹೇಗೆಂದು ತಿಳಿಯೋಣ.
ಬೇಕಾದ ಸಾಮಾನು :
ಎರಡು ಲೋಟ ಸಕ್ಕರೆ
ಎರಡು ಲೋಟ ಮೈದಾಹಿಟ್ಟು, ಅಥವಾ ಸೋಜಿ.
ಎರಡು ಲೋಟ ನೊರೆಹಾಲು
ಮೂರು ನಾಲ್ಕು ಬಾಳೆ ಹಣ್ಣುಗಳು
ಎರಡು ಲೋಟ ತುಪ್ಪ
ಬಾಳೆಹಣ್ಣಿನ ಹೊರತಾಗಿ ಎಲ್ಲ ವಸ್ತುಗಳೂ ಸಮಪ್ರಮಾಣದಲ್ಲಿರಬೇಕು.
ಸಾಮಾನ್ಯವಾಗಿ ಸತ್ಯನಾರಾಯಣ ಪೂಜೆಗೆ ನೈವೇದ್ಯ ರೂಪದಲ್ಲಿ ಸಪಾದ ಭಕ್ಷ್ಯ ತಯಾರಿಸುವುದಿದ್ದರೆ, ಪ್ರತಿಯಾಂದು ವಸ್ತುವಿನ ಪ್ರಮಾಣ ಒಂದೂಕಾಲು ಸೇರಾಗಿರಬೇಕು ಎಂಬುದು ಪ್ರತೀತಿ. ಮತ್ತೆ ಪುರೋಹಿತರು ಹೇಳಿದ ಅಳತೆಯೇ ಅಂತಿಮ.
ವಿಧಾನ:
ಬಾಳೆ ಹಣ್ಣನ್ನು ಸುಲಿದು ಸಣ್ಣಗೆ ಹೆಚ್ಚಿಟ್ಟುಕೊಳ್ಳಬೇಕು. ಕಂಚಿನ ಬಾಣಲೆಯಲ್ಲಿ ತುಪ್ಪವನ್ನು ಸುರಿದು ಒಲೆಯ ಮೇಲಿಟ್ಟು, ಸ್ವಲ್ಪ ಹೊತ್ತು ಕಾಯಿಸಿ. ತುಪ್ಪ ಬಿಸಿಯಾದ ನಂತರ ಹೆಚ್ಚಿಟ್ಟ ಬಾಳೆ ಹಣ್ಣನ್ನು ತುಪ್ಪಕ್ಕೆ ಹಾಕಿ. ಅದು ತುಸುವೇ ಕಂದು ಬಣ್ಣಕ್ಕೆ ತಿರುಗುವ ತನಕ ಮಗುಚುತ್ತಿರಿ. ನಂತರ ಮೈದಾ ಹಿಟ್ಟು ಹಾಕಿ ಅದು ಕೆಂಪಗಾಗುವ ವರೆಗೆ ಸ್ವಲ್ಪ ಹೊತ್ತು ಮಗುಚಿ. ನೀವು ಮೈದಾ ಹಿಟ್ಟಿನ ಬದಲಿಗೆ ಸೋಜಿ( ಸಪೂರ ಸಜ್ಜಿಗೆ) ಬಳಸುತ್ತೀರಾದರೆ, ಸೋಜಿ ಬೆಂದ ಪರಿಮಳ ಬರುವವರೆಗೆ ಮಗುಚಬೇಕು. ನಂತರ ಸಕ್ಕರೆ ಹಾಕಿ ಅದು ಪೂರ್ತಿ ಕರಗುವ ತನಕ ಮಗುಚುತ್ತಿರಬೇಕು.
ನಂತರ ಉರಿ ಸಣ್ಣಗೆ ಮಾಡಿ, ಹಾಲು ಹಾಕಿ ಮತ್ತೆ ಮಗುಚಿ. ಅಗತ್ಯವಿದ್ದರೆ, ತುಪ್ಪದಲ್ಲಿ ಹುರಿದ ಗೋಡಂಬಿ, ದ್ರಾಕ್ಷಿಗಳನ್ನು ಬೆರೆಸಬಹುದು. ತಕ್ಷಣವೇ ಇಳಿಸಿ. ಒಲೆಯಿಂದ ಇಳಿಸುವಾಗ ಮಿಶ್ರಣ ಸ್ವಲ್ಪ ನೀರಾಗಿದ್ದರೂ, ತಣಿಯುತ್ತಿದ್ದ ಹಾಗೇ ದಪ್ಪಗಾಗುತ್ತದೆ. ಬಾಣಲೆ ಮೇಲೆ ಸ್ಟೌವ್ ಮೇಲಿಟ್ಟು, ಕೆಳಗಿಳಿಸುವವರೆಗೆ ಮಾತು, ಫೋನ್ ಯಾವುದಕ್ಕೂ ಅಡಿಗೆಮನೆಯಿಂದಾಚೆಗೆ ಹೋಗುವ ಹಾಗಿಲ್ಲ.



Click it and Unblock the Notifications