Latest Updates
-
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ!
ಸತ್ಯನಾರಾಯಣನ ಪೂಜೆ, ಮಮ ಪ್ರಸಾದ ವಿನಿಯೋಗಃ
ಪೂಜೆಯೆಂದರೆ ಸತ್ಯನಾರಾಯಣ ಪೂಜೆಯಯ್ಯಾ, ರುಚಿಯೆಂದರೆ ಸಪಾದ ಭಕ್ಷ್ಯದ್ದಯ್ಯಾ...
ಸತ್ಯ ನಾರಾಯಣ ಪೂಜೆಯಲ್ಲಿ ಮಹಾ ಪೂಜೆಯಾದ ನಂತರ ಕಡ್ಡಾಯವಾಗಿ ತಿನ್ನಬೇಕು ಅಂತ ಪ್ರಸಾದ ರೂಪದಲ್ಲಿ ಒಂದಿಷ್ಟು ಸ್ವೀಟ್ ಕೊಡುತ್ತಾರಲ್ಲ. ಎಂಥ ರುಚಿ ಅಂತೀರಿ. ಬಣ್ಣವಿಲ್ಲದ ಕೇಸರೀಬಾತ್ನ ಹಾಗೆ ಕಾಣುವ ಈ ಸ್ವೀಟ್ ಯಾಕಿಷ್ಟು ರುಚಿ ಅಂತ ಕೇಳಿದರೆ, ‘ಅದು ದೇವರಿಗೆ ನೈವೇದ್ಯ ಮಾಡಿದ್ದು . ಅದಕ್ಕೇ ಅಷ್ಟೊಂದು ರುಚಿ...’ ಅಂತ ಅಮ್ಮ ಸಮಜಾಯಿಷಿ ಹೇಳುತ್ತಾಳೆ.
‘ಒಂಚೂರೇ ಕೊಡುತ್ತಾರಲ್ಲ ಅದಕ್ಕೇ ಅಷ್ಟು ರುಚಿ ಕಣೋ... ’ ಅಂತ ಸ್ನೇಹಿತ ಲಾಜಿಕಲ್ ಉತ್ತರ ಹೇಳಿದರೂ ಅಮ್ಮ ಹೇಳಿದ್ದೇ ಕೇಳಲು ಖುಷಿಯೆನಿಸುವುದು ಅಲ್ಲವೇ ? ಅಮ್ಮ ಅಂದರೆ ಹಾಗೆ.
ಸತ್ಯನಾರಾಯಣ ಪೂಜೆಯ ಸಂದರ್ಭದಲ್ಲಿ ಮಾಡುವ ಸಿಹಿ ತಿಂಡಿಯ ಹೆಸರು ಸಪಾದ ಭಕ್ಷ್ಯ. ಮನೆಯಲ್ಲಿ ಸಣ್ಣ ಸಮಾರಂಭವೆಂದರೂ ಸತ್ಯನಾರಾಯಣ ಪೂಜೆ ಇಟ್ಟುಕೊಳ್ಳುವುದು ರೂಢಿ. ಸೋ, ಈ ಸಪಾದ ತಯಾರಿಸುವುದು ಹೇಗೆಂದು ತಿಳಿಯೋಣ.
ಬೇಕಾದ ಸಾಮಾನು :
ಎರಡು ಲೋಟ ಸಕ್ಕರೆ
ಎರಡು ಲೋಟ ಮೈದಾಹಿಟ್ಟು, ಅಥವಾ ಸೋಜಿ.
ಎರಡು ಲೋಟ ನೊರೆಹಾಲು
ಮೂರು ನಾಲ್ಕು ಬಾಳೆ ಹಣ್ಣುಗಳು
ಎರಡು ಲೋಟ ತುಪ್ಪ
ಬಾಳೆಹಣ್ಣಿನ ಹೊರತಾಗಿ ಎಲ್ಲ ವಸ್ತುಗಳೂ ಸಮಪ್ರಮಾಣದಲ್ಲಿರಬೇಕು.
ಸಾಮಾನ್ಯವಾಗಿ ಸತ್ಯನಾರಾಯಣ ಪೂಜೆಗೆ ನೈವೇದ್ಯ ರೂಪದಲ್ಲಿ ಸಪಾದ ಭಕ್ಷ್ಯ ತಯಾರಿಸುವುದಿದ್ದರೆ, ಪ್ರತಿಯಾಂದು ವಸ್ತುವಿನ ಪ್ರಮಾಣ ಒಂದೂಕಾಲು ಸೇರಾಗಿರಬೇಕು ಎಂಬುದು ಪ್ರತೀತಿ. ಮತ್ತೆ ಪುರೋಹಿತರು ಹೇಳಿದ ಅಳತೆಯೇ ಅಂತಿಮ.
ವಿಧಾನ:
ಬಾಳೆ ಹಣ್ಣನ್ನು ಸುಲಿದು ಸಣ್ಣಗೆ ಹೆಚ್ಚಿಟ್ಟುಕೊಳ್ಳಬೇಕು. ಕಂಚಿನ ಬಾಣಲೆಯಲ್ಲಿ ತುಪ್ಪವನ್ನು ಸುರಿದು ಒಲೆಯ ಮೇಲಿಟ್ಟು, ಸ್ವಲ್ಪ ಹೊತ್ತು ಕಾಯಿಸಿ. ತುಪ್ಪ ಬಿಸಿಯಾದ ನಂತರ ಹೆಚ್ಚಿಟ್ಟ ಬಾಳೆ ಹಣ್ಣನ್ನು ತುಪ್ಪಕ್ಕೆ ಹಾಕಿ. ಅದು ತುಸುವೇ ಕಂದು ಬಣ್ಣಕ್ಕೆ ತಿರುಗುವ ತನಕ ಮಗುಚುತ್ತಿರಿ. ನಂತರ ಮೈದಾ ಹಿಟ್ಟು ಹಾಕಿ ಅದು ಕೆಂಪಗಾಗುವ ವರೆಗೆ ಸ್ವಲ್ಪ ಹೊತ್ತು ಮಗುಚಿ. ನೀವು ಮೈದಾ ಹಿಟ್ಟಿನ ಬದಲಿಗೆ ಸೋಜಿ( ಸಪೂರ ಸಜ್ಜಿಗೆ) ಬಳಸುತ್ತೀರಾದರೆ, ಸೋಜಿ ಬೆಂದ ಪರಿಮಳ ಬರುವವರೆಗೆ ಮಗುಚಬೇಕು. ನಂತರ ಸಕ್ಕರೆ ಹಾಕಿ ಅದು ಪೂರ್ತಿ ಕರಗುವ ತನಕ ಮಗುಚುತ್ತಿರಬೇಕು.
ನಂತರ ಉರಿ ಸಣ್ಣಗೆ ಮಾಡಿ, ಹಾಲು ಹಾಕಿ ಮತ್ತೆ ಮಗುಚಿ. ಅಗತ್ಯವಿದ್ದರೆ, ತುಪ್ಪದಲ್ಲಿ ಹುರಿದ ಗೋಡಂಬಿ, ದ್ರಾಕ್ಷಿಗಳನ್ನು ಬೆರೆಸಬಹುದು. ತಕ್ಷಣವೇ ಇಳಿಸಿ. ಒಲೆಯಿಂದ ಇಳಿಸುವಾಗ ಮಿಶ್ರಣ ಸ್ವಲ್ಪ ನೀರಾಗಿದ್ದರೂ, ತಣಿಯುತ್ತಿದ್ದ ಹಾಗೇ ದಪ್ಪಗಾಗುತ್ತದೆ. ಬಾಣಲೆ ಮೇಲೆ ಸ್ಟೌವ್ ಮೇಲಿಟ್ಟು, ಕೆಳಗಿಳಿಸುವವರೆಗೆ ಮಾತು, ಫೋನ್ ಯಾವುದಕ್ಕೂ ಅಡಿಗೆಮನೆಯಿಂದಾಚೆಗೆ ಹೋಗುವ ಹಾಗಿಲ್ಲ.



Click it and Unblock the Notifications