Just In
- 2 hrs ago ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- 3 hrs ago ಮೀನ ರಾಶಿಯಲ್ಲಿ ಬುಧ ವಕ್ರೀಯ ಚಲನೆ ಮಾಡುವಾಗ ಈ 5 ರಾಶಿಯವರು ವೃತ್ತಿ ಜೀವನದ ಬಗ್ಗೆ ಜಾಗ್ರತೆ
- 3 hrs ago ದಿನ ಭವಿಷ್ಯ ಮಾರ್ಚ್ 29: ಶುಕ್ರವಾರದ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
- 3 hrs ago ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
Don't Miss
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸತ್ಯನಾರಾಯಣನ ಪೂಜೆ, ಮಮ ಪ್ರಸಾದ ವಿನಿಯೋಗಃ
ಪೂಜೆಯೆಂದರೆ ಸತ್ಯನಾರಾಯಣ ಪೂಜೆಯಯ್ಯಾ, ರುಚಿಯೆಂದರೆ ಸಪಾದ ಭಕ್ಷ್ಯದ್ದಯ್ಯಾ...
ಸತ್ಯ ನಾರಾಯಣ ಪೂಜೆಯಲ್ಲಿ ಮಹಾ ಪೂಜೆಯಾದ ನಂತರ ಕಡ್ಡಾಯವಾಗಿ ತಿನ್ನಬೇಕು ಅಂತ ಪ್ರಸಾದ ರೂಪದಲ್ಲಿ ಒಂದಿಷ್ಟು ಸ್ವೀಟ್ ಕೊಡುತ್ತಾರಲ್ಲ. ಎಂಥ ರುಚಿ ಅಂತೀರಿ. ಬಣ್ಣವಿಲ್ಲದ ಕೇಸರೀಬಾತ್ನ ಹಾಗೆ ಕಾಣುವ ಈ ಸ್ವೀಟ್ ಯಾಕಿಷ್ಟು ರುಚಿ ಅಂತ ಕೇಳಿದರೆ, ‘ಅದು ದೇವರಿಗೆ ನೈವೇದ್ಯ ಮಾಡಿದ್ದು . ಅದಕ್ಕೇ ಅಷ್ಟೊಂದು ರುಚಿ...’ ಅಂತ ಅಮ್ಮ ಸಮಜಾಯಿಷಿ ಹೇಳುತ್ತಾಳೆ.
‘ಒಂಚೂರೇ ಕೊಡುತ್ತಾರಲ್ಲ ಅದಕ್ಕೇ ಅಷ್ಟು ರುಚಿ ಕಣೋ... ’ ಅಂತ ಸ್ನೇಹಿತ ಲಾಜಿಕಲ್ ಉತ್ತರ ಹೇಳಿದರೂ ಅಮ್ಮ ಹೇಳಿದ್ದೇ ಕೇಳಲು ಖುಷಿಯೆನಿಸುವುದು ಅಲ್ಲವೇ ? ಅಮ್ಮ ಅಂದರೆ ಹಾಗೆ.
ಸತ್ಯನಾರಾಯಣ ಪೂಜೆಯ ಸಂದರ್ಭದಲ್ಲಿ ಮಾಡುವ ಸಿಹಿ ತಿಂಡಿಯ ಹೆಸರು ಸಪಾದ ಭಕ್ಷ್ಯ. ಮನೆಯಲ್ಲಿ ಸಣ್ಣ ಸಮಾರಂಭವೆಂದರೂ ಸತ್ಯನಾರಾಯಣ ಪೂಜೆ ಇಟ್ಟುಕೊಳ್ಳುವುದು ರೂಢಿ. ಸೋ, ಈ ಸಪಾದ ತಯಾರಿಸುವುದು ಹೇಗೆಂದು ತಿಳಿಯೋಣ.
ಬೇಕಾದ ಸಾಮಾನು :
ಎರಡು
ಲೋಟ
ಸಕ್ಕರೆ
ಎರಡು
ಲೋಟ
ಮೈದಾಹಿಟ್ಟು,
ಅಥವಾ
ಸೋಜಿ.
ಎರಡು
ಲೋಟ
ನೊರೆಹಾಲು
ಮೂರು
ನಾಲ್ಕು
ಬಾಳೆ
ಹಣ್ಣುಗಳು
ಎರಡು
ಲೋಟ
ತುಪ್ಪ
ಬಾಳೆಹಣ್ಣಿನ
ಹೊರತಾಗಿ
ಎಲ್ಲ
ವಸ್ತುಗಳೂ
ಸಮಪ್ರಮಾಣದಲ್ಲಿರಬೇಕು.
ಸಾಮಾನ್ಯವಾಗಿ
ಸತ್ಯನಾರಾಯಣ
ಪೂಜೆಗೆ
ನೈವೇದ್ಯ
ರೂಪದಲ್ಲಿ
ಸಪಾದ
ಭಕ್ಷ್ಯ
ತಯಾರಿಸುವುದಿದ್ದರೆ,
ಪ್ರತಿಯಾಂದು
ವಸ್ತುವಿನ
ಪ್ರಮಾಣ
ಒಂದೂಕಾಲು
ಸೇರಾಗಿರಬೇಕು
ಎಂಬುದು
ಪ್ರತೀತಿ.
ಮತ್ತೆ
ಪುರೋಹಿತರು
ಹೇಳಿದ
ಅಳತೆಯೇ
ಅಂತಿಮ.
ವಿಧಾನ:
ಬಾಳೆ ಹಣ್ಣನ್ನು ಸುಲಿದು ಸಣ್ಣಗೆ ಹೆಚ್ಚಿಟ್ಟುಕೊಳ್ಳಬೇಕು. ಕಂಚಿನ ಬಾಣಲೆಯಲ್ಲಿ ತುಪ್ಪವನ್ನು ಸುರಿದು ಒಲೆಯ ಮೇಲಿಟ್ಟು, ಸ್ವಲ್ಪ ಹೊತ್ತು ಕಾಯಿಸಿ. ತುಪ್ಪ ಬಿಸಿಯಾದ ನಂತರ ಹೆಚ್ಚಿಟ್ಟ ಬಾಳೆ ಹಣ್ಣನ್ನು ತುಪ್ಪಕ್ಕೆ ಹಾಕಿ. ಅದು ತುಸುವೇ ಕಂದು ಬಣ್ಣಕ್ಕೆ ತಿರುಗುವ ತನಕ ಮಗುಚುತ್ತಿರಿ. ನಂತರ ಮೈದಾ ಹಿಟ್ಟು ಹಾಕಿ ಅದು ಕೆಂಪಗಾಗುವ ವರೆಗೆ ಸ್ವಲ್ಪ ಹೊತ್ತು ಮಗುಚಿ. ನೀವು ಮೈದಾ ಹಿಟ್ಟಿನ ಬದಲಿಗೆ ಸೋಜಿ( ಸಪೂರ ಸಜ್ಜಿಗೆ) ಬಳಸುತ್ತೀರಾದರೆ, ಸೋಜಿ ಬೆಂದ ಪರಿಮಳ ಬರುವವರೆಗೆ ಮಗುಚಬೇಕು. ನಂತರ ಸಕ್ಕರೆ ಹಾಕಿ ಅದು ಪೂರ್ತಿ ಕರಗುವ ತನಕ ಮಗುಚುತ್ತಿರಬೇಕು.
ನಂತರ
ಉರಿ
ಸಣ್ಣಗೆ
ಮಾಡಿ,
ಹಾಲು
ಹಾಕಿ
ಮತ್ತೆ
ಮಗುಚಿ.
ಅಗತ್ಯವಿದ್ದರೆ,
ತುಪ್ಪದಲ್ಲಿ
ಹುರಿದ
ಗೋಡಂಬಿ,
ದ್ರಾಕ್ಷಿಗಳನ್ನು
ಬೆರೆಸಬಹುದು.
ತಕ್ಷಣವೇ
ಇಳಿಸಿ.
ಒಲೆಯಿಂದ
ಇಳಿಸುವಾಗ
ಮಿಶ್ರಣ
ಸ್ವಲ್ಪ
ನೀರಾಗಿದ್ದರೂ,
ತಣಿಯುತ್ತಿದ್ದ
ಹಾಗೇ
ದಪ್ಪಗಾಗುತ್ತದೆ.
ಬಾಣಲೆ
ಮೇಲೆ
ಸ್ಟೌವ್
ಮೇಲಿಟ್ಟು,
ಕೆಳಗಿಳಿಸುವವರೆಗೆ
ಮಾತು,
ಫೋನ್
ಯಾವುದಕ್ಕೂ
ಅಡಿಗೆಮನೆಯಿಂದಾಚೆಗೆ
ಹೋಗುವ
ಹಾಗಿಲ್ಲ.