Latest Updates
-
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ! -
ಡೆಂಗ್ಯೂ ಭೀತಿ: ಕೇವಲ 10 ನಿಮಿಷದಲ್ಲಿ ನಿಮ್ಮ ಮನೆಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಿರಿ
ಸಂಜೆಯ ಟೀ ಸಂಗಾತಿ ಈರುಳ್ಳಿ ನಿಪ್ಪಟ್ಟು

* ವಾಣಿ ನಾಯಿಕ, ಬೆಂಗಳೂರು
ಬೇಕಾಗುವ ಸಾಮಗ್ರಿಗಳು
ಈರುಳ್ಳಿ : 2 (ಸಣ್ಣಗೆ ಹೆಚ್ಚಿದ್ದು)
ಕಡಲೆ ಹಿಟ್ಟು : 1/2 ಕಪ್
ಅಕ್ಕಿ ಹಿಟ್ಟು : 1/2 ಕಪ್
ಚಿರೋಟಿ ರವೆ : 1/2 ಕಪ್
ಮೈದಾ ಹಿಟ್ಟು : 2 ಟೀಸ್ಪೂನ್
ಕೊತ್ತಂಬರಿಸೊಪ್ಪು : 1/4 ಕಪ್ (ಸಣ್ಣಗೆ ಹೆಚ್ಚಿದ್ದು)
ಅಚ್ಚಖಾರದ ಪುಡಿ ಅಥವಾ ಹಸಿಮೆಣಸಿನಕಾಯಿ ಪೇಸ್ಟ್ ಕೂಡ ಬಳಸಬಹುದು
ಕರಿಬೇವು, ಜೀರಿಗೆ, ಉಪ್ಪು ರುಚಿಗೆ ಬೇಕಾಗುವಷ್ಟು
ಮಾಡುವ ವಿಧಾನ
ಮೊದಲಿಗೆ ಕಡಲೆ ಹಿಟ್ಟು, ಅಕ್ಕಿ ಹಿಟ್ಟು, ಚಿರೋಟಿರವೆ ಹಿಟ್ಟು ಮತ್ತು ಮೈದಾ ಹಿಟ್ಟನ್ನು ಒಂದು ಬಾಣಲೆಯಲ್ಲಿ ಸೇರಿಸಿಕೊಂಡು ಅದಕ್ಕೆ ಉಪ್ಪು, ಖಾರದಪುಡಿ, ಜೀರಿಗೆ ಹಾಕಿ ಚೆನ್ನಾಗಿ ಕೈಯಾಡಿಸಬೇಕು. ನಂತರ ಕರಿಬೇವು, ಕೊತ್ತಂಬರಿ, ಈರುಳ್ಳಿ ಹಾಗು ಸ್ಪಲ್ಪ ಕಾದ ಎಣ್ಣೆಯನ್ನು ಮಿಶ್ರಣಮಾಡಿ ನೀರಿನಿಂದ ಹಿಟ್ಟನ್ನು ಸ್ಪಲ್ಪ ಗಟ್ಟಿಯಾಗಿ ಕಲಿಸಿಕೊಳ್ಳಬೇಕು.
ಹೀಗೆ ಕಲಿಸಿದ ಹಿಟ್ಟನ್ನು ತೆಗೆದುಕೊಂಡು ದುಂಡಾಕಾರಗೆ ಮಾಡಿ ಅಂಗೈಗೆ ಸ್ಪಲ್ಪ ಎಣ್ಣೆ ಹಚ್ಚಿಕೊಂಡು ತಟ್ಟಿ ಕಾದಎಣ್ಣೆಯಲ್ಲಿ ಕರೆಯಬೇಕು. ಕಂದುಬಣ್ಣ ಬರುವವರೆಗೆ ಕರೆದು ತೆಗೆದರೆ ಬಿಸಿಬಿಸಿಯಾದ ಈರುಳ್ಳಿ ನಿಪ್ಪಟ್ಟು ತಯಾರ್. ಈರುಳ್ಳಿ ನಿಪ್ಪಟ್ಟನ್ನು ತೆಂಗಿನಕಾಯಿ ಚಟ್ನಿಯೊಂದಿಗೆ ತಿಂದರೆ ತುಂಬಾ ರುಚಿಯಾಗಿರುತ್ತದೆ.



Click it and Unblock the Notifications
