Latest Updates
-
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಮಳೆಗಾಲದಲ್ಲಿ ಕರೆಂಟ್ ಹೋದರೆ ಫ್ರಿಜ್ ಆಹಾರ ಹಾಳಾಗುತ್ತಾ? ಸುರಕ್ಷಿತವಾಗಿಡಲು ಇಲ್ಲಿವೆ ಸರಳ ಟಿಪ್ಸ್ -
ಐಟಿಆರ್ ಸಲ್ಲಿಕೆಗೆ ಇನ್ನು 4 ದಿನ ಬಾಕಿ: ಭಾರಿ ದಂಡದಿಂದ ಪಾರಾಗಲು ಈ ಕೆಲಸಗಳನ್ನು ಇಂದೇ ಮಾಡಿ! -
IMD ಮಳೆ ಎಚ್ಚರಿಕೆ: ಹೊರಗೆ ಹೋಗಬೇಡಿ, ಮನೆಯಲ್ಲೇ ಈ 12 ನಿಮಿಷದ ವರ್ಕೌಟ್ ಮಾಡಿ ಫಿಟ್ ಆಗಿರಿ! -
ಭಾರತ-ಜಿಂಬಾಬ್ವೆ ಟಿ20 ಪಂದ್ಯದ ಮಜಾ ಸವಿಯುತ್ತಲೇ ಮನೆಯ ಜವಾಬ್ದಾರಿ ನಿಭಾಯಿಸುವುದು ಹೇಗೆ? ಸ್ಮಾರ್ಟ್ ಟಿಪ್ಸ್ ಇಲ್ಲಿದೆ! -
IMD ರೆಡ್ ಅಲರ್ಟ್: ಭಾರಿ ಮಳೆಯಿಂದ ಮನೆಯನ್ನು ರಕ್ಷಿಸಲು ಈ 5 ಮುನ್ನೆಚ್ಚರಿಕೆಗಳು ಕಡ್ಡಾಯ! -
ಗುರು ಪೂರ್ಣಿಮಾ ಉಪವಾಸ: ಮಧುಮೇಹಿಗಳು ಆರೋಗ್ಯವಾಗಿರಲು ಈ ಸಾತ್ವಿಕ ಆಹಾರ ಕ್ರಮ ಪಾಲಿಸಿ -
ಪೇಪರ್ ಸೋರಿಕೆ ಮಾಡಿದ್ರೆ 10 ವರ್ಷ ಜೈಲು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಿಗಲಿದೆ ಹೊಸ ಭದ್ರತೆ! -
ಕಾರ್ಗಿಲ್ ವಿಜಯ್ ದಿವಸ್: ದೇಶಭಕ್ತಿಯ ನಡಿಗೆಯಲ್ಲಿ ಪಾಲ್ಗೊಳ್ಳುವ ಮುನ್ನ ಈ ಆರೋಗ್ಯ ಟಿಪ್ಸ್ ಮರೆಯದಿರಿ -
ದೇವಶಯನಿ ಏಕಾದಶಿ: ದಂಪತಿಗಳ ಬಾಂಧವ್ಯ ಹೆಚ್ಚಿಸಲು ಈ ಉಪವಾಸದ ಟಿಪ್ಸ್ ಮಿಸ್ ಮಾಡ್ಬೇಡಿ!
ಸಂಜೆಯ ಟೀ ಸಂಗಾತಿ ಈರುಳ್ಳಿ ನಿಪ್ಪಟ್ಟು

* ವಾಣಿ ನಾಯಿಕ, ಬೆಂಗಳೂರು
ಬೇಕಾಗುವ ಸಾಮಗ್ರಿಗಳು
ಈರುಳ್ಳಿ : 2 (ಸಣ್ಣಗೆ ಹೆಚ್ಚಿದ್ದು)
ಕಡಲೆ ಹಿಟ್ಟು : 1/2 ಕಪ್
ಅಕ್ಕಿ ಹಿಟ್ಟು : 1/2 ಕಪ್
ಚಿರೋಟಿ ರವೆ : 1/2 ಕಪ್
ಮೈದಾ ಹಿಟ್ಟು : 2 ಟೀಸ್ಪೂನ್
ಕೊತ್ತಂಬರಿಸೊಪ್ಪು : 1/4 ಕಪ್ (ಸಣ್ಣಗೆ ಹೆಚ್ಚಿದ್ದು)
ಅಚ್ಚಖಾರದ ಪುಡಿ ಅಥವಾ ಹಸಿಮೆಣಸಿನಕಾಯಿ ಪೇಸ್ಟ್ ಕೂಡ ಬಳಸಬಹುದು
ಕರಿಬೇವು, ಜೀರಿಗೆ, ಉಪ್ಪು ರುಚಿಗೆ ಬೇಕಾಗುವಷ್ಟು
ಮಾಡುವ ವಿಧಾನ
ಮೊದಲಿಗೆ ಕಡಲೆ ಹಿಟ್ಟು, ಅಕ್ಕಿ ಹಿಟ್ಟು, ಚಿರೋಟಿರವೆ ಹಿಟ್ಟು ಮತ್ತು ಮೈದಾ ಹಿಟ್ಟನ್ನು ಒಂದು ಬಾಣಲೆಯಲ್ಲಿ ಸೇರಿಸಿಕೊಂಡು ಅದಕ್ಕೆ ಉಪ್ಪು, ಖಾರದಪುಡಿ, ಜೀರಿಗೆ ಹಾಕಿ ಚೆನ್ನಾಗಿ ಕೈಯಾಡಿಸಬೇಕು. ನಂತರ ಕರಿಬೇವು, ಕೊತ್ತಂಬರಿ, ಈರುಳ್ಳಿ ಹಾಗು ಸ್ಪಲ್ಪ ಕಾದ ಎಣ್ಣೆಯನ್ನು ಮಿಶ್ರಣಮಾಡಿ ನೀರಿನಿಂದ ಹಿಟ್ಟನ್ನು ಸ್ಪಲ್ಪ ಗಟ್ಟಿಯಾಗಿ ಕಲಿಸಿಕೊಳ್ಳಬೇಕು.
ಹೀಗೆ ಕಲಿಸಿದ ಹಿಟ್ಟನ್ನು ತೆಗೆದುಕೊಂಡು ದುಂಡಾಕಾರಗೆ ಮಾಡಿ ಅಂಗೈಗೆ ಸ್ಪಲ್ಪ ಎಣ್ಣೆ ಹಚ್ಚಿಕೊಂಡು ತಟ್ಟಿ ಕಾದಎಣ್ಣೆಯಲ್ಲಿ ಕರೆಯಬೇಕು. ಕಂದುಬಣ್ಣ ಬರುವವರೆಗೆ ಕರೆದು ತೆಗೆದರೆ ಬಿಸಿಬಿಸಿಯಾದ ಈರುಳ್ಳಿ ನಿಪ್ಪಟ್ಟು ತಯಾರ್. ಈರುಳ್ಳಿ ನಿಪ್ಪಟ್ಟನ್ನು ತೆಂಗಿನಕಾಯಿ ಚಟ್ನಿಯೊಂದಿಗೆ ತಿಂದರೆ ತುಂಬಾ ರುಚಿಯಾಗಿರುತ್ತದೆ.



Click it and Unblock the Notifications