Latest Updates
-
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ!
ಕಡ್ಲೆಬೇಳೆ ಸಬ್ಬಸಿಗೆ ಸೊಪ್ಪಿನ ಆಂಬೋಡೆ

ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೋಗುವಾಗ ಜನಶತಾಬ್ದಿ ಎಕ್ಸ್ ಪ್ರೆಸ್ ರೈಲಲ್ಲಿ ಚಹಾದ ಜೊತೆ ಈ ಕಡ್ಲೆಬೇಳೆ ಆಂಬೋಡೆಯನ್ನು ತಿಂದಿರಬಹುದು. ಮುಂಗಾರು ಮಳೆಗಾಲದಲ್ಲಿ ಹೊರಗಡೆ ಮಳೆ ಜಿಟಿಜಿಟಿ ಸುರಿಯುತ್ತಿದ್ದರೆ ಚಹಾ ಅಥವಾ ಕಾಫಿಯ ಜೋಡಿ ತಿನ್ನಲು ಬಲು ಪಸಂದಾಗಿರುತ್ತದೆ. ಮನೆಯ ಎಣ್ಣೆಯಲ್ಲಿ ಕರಿಯುವುದರಿಂದ ಗಂಟಲು ಕಟ್ಟಿಕೊಳ್ಳುವ ಅಪಾಯವೂ ಇರುವುದಿಲ್ಲ.
ಬೇಕಾಗುವ ಸಾಮಗ್ರಿಗಳು:
ಕಡ್ಲೆಬೇಳೆ - ಒಂದು ಬಟ್ಟಲು
ಹಸಿಮೆಣಸಿನಕಾಯಿ
ಒಂದು ಚೆಕ್ಕೆ, ಲವಂಗ
ಶುಂಠಿ - ಒಂದು ಇಂಚು
ಕೊತ್ತಂಬರಿ ಸೊಪ್ಪು
ಸಣ್ಣಗೆ ಹೆಚ್ಚಿದ ಈರುಳ್ಳಿ
ಹೆಚ್ಚಿದ ಸಬ್ಬಸ್ಸಿಗೆ ಸೊಪ್ಪು
ಉಪ್ಪು ರುಚಿಗೆ
ತಯಾರಿಸುವ ವಿಧಾನ:
ಮೊದಲಿಗೆ ಕಡ್ಲೆಬೇಳೆಯನ್ನು ಮೂರು ಗಂಟೆ ನೆನೆಸಿ. ನೆನೆದ ಕಡ್ಲೆಬೇಳೆಯಿಂದ ನೀರು ಸೋಸಿಕೊಂಡು ಅದನ್ನು ಹಸಿಮೆಣಸಿನಕಾಯಿ, ಚೆಕ್ಕೆ, ಲವಂಗ, ಶುಂಠಿ, ಉಪ್ಪು ಮತ್ತು ಕೊತ್ತಂಬರಿಸೊಪ್ಪು ಹಾಕಿ ಗಟ್ಟಿಯಾಗಿ ಮತ್ತು ತರಿತರಿಯಾಗಿ ರುಬ್ಬಿಕೊಳ್ಳಿ.
ಈ ರುಬ್ಬಿದ ಮಿಶ್ರಣಕ್ಕೆ ಸಣ್ಣಗೆ ಹೆಚ್ಚಿದ ಈರುಳ್ಳಿ ಮತ್ತು ಹೆಚ್ಚಿದ ಸಬ್ಬಸ್ಸಿಗೆ ಸೊಪ್ಪನ್ನು ಹಾಕಿ ಚೆನ್ನಾಗಿ ಬೆರೆಸಿ. ಕಲೆಸುವಾಗ ನೀರು ಹಾಕಬೇಡಿ. ಈರುಳ್ಳಿಯನ್ನು ಮತ್ತು ಸೊಪ್ಪಿನಲ್ಲಿ ನೀರಿನ ಅಂಶ ಇರುವುದರಿಂದ ಅದೇ ಸಾಕಾಗುತ್ತದೆ. ಎಲ್ಲವನ್ನೂ ಚೆನ್ನಾಗಿ ಹೊಂದಿಕೊಳ್ಳುವಂತೆ ಕಲೆಸಿ.
ಸಣ್ಣ ಸಣ್ಣ ಉಂಡೆ ಮಾಡಿಕೊಂಡು, ಅದನ್ನು ಅಂಗೈನಲ್ಲಿ ಸ್ವಲ್ಪ ದಪ್ಪವಾಗಿ ತಟ್ಟಿಕೊಂಡು ಕಾದಿರುವ ಎಣ್ಣೆಯಲ್ಲಿ ಒಂದೊಂದಾಗಿ ಹಾಕಿ ಕರಿಯಿರಿ. ಎಣ್ಣೆಗೆ ಹಾಕಿದ ತಕ್ಷಣ ಜಾಲರಿ ಹಾಕಿ ಅಲ್ಲಾಡಿಸಬೇಡಿ. ವಡೆಯ ಬಣ್ಣ ಸ್ವಲ್ಪ ಬದಲಾದ ನಂತರ ತಿರುವಿ ಹಾಕಿ, ಎರಡು ಬದಿ ಹೊಂಬಣ್ಣ ಬರುವವರೆಗೂ ಬೇಯಿಸಿ. ಎಣ್ಣೆಯಿಂದ ತೆಗೆದು ಪೇಪರ್ ಮೇಲೆ ಹಾಕಿ, ಎಣ್ಣೆ ಚೆನ್ನಾಗಿ ಹೀರಿಕೊಳ್ಳಲಿ.
ಇದೇ ರೀತಿ ಮಿಕ್ಕ ಎಲ್ಲಾ ವಡೆಗಳನ್ನು ತಯಾರಿಸಿ. ರುಚಿಯಾದ ಸಬ್ಬಸ್ಸಿಗೆ ಕಡ್ಲೆಬೇಳೆ ಆಂಬೋಡೆ ತಿನ್ನಲು ಸಿದ್ಧವಾಗುತ್ತದೆ. ಇದನ್ನು ಬಿಸಿಬಿಸಿಯಾಗಿದ್ದಾಗಲೇ ತಿಂದರೆ ಚೆನ್ನ. ಅದರ ಜೊತೆ ಚಟ್ನಿ/ಸಾಸ್/ಕೆಚಪ್ ಕೂಡ ಸರ್ವ್ ಮಾಡಬಹುದು. ಜೊತೆಗೆ ಏನು ಇಲ್ಲದಿದ್ದರೂ ಚೆನ್ನಾಗಿರುತ್ತೆ. ಮಳೆಗಾಲದಲ್ಲಿ ಜಬರ್ದಸ್ತ್ ತಿನಿಸು. [ಕೃಪೆ : ಅಡಿಗೆ ಸವಿರುಚಿ]



Click it and Unblock the Notifications