Latest Updates
-
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಮಳೆಗಾಲದಲ್ಲಿ ಕರೆಂಟ್ ಹೋದರೆ ಫ್ರಿಜ್ ಆಹಾರ ಹಾಳಾಗುತ್ತಾ? ಸುರಕ್ಷಿತವಾಗಿಡಲು ಇಲ್ಲಿವೆ ಸರಳ ಟಿಪ್ಸ್
ಮಾಡಿ ನೋಡಿ ಕೊತ್ತಂಬರಿ ವಡೆ!
*ಶ್ರೀರಕ್ಷಾ, ಬೆಂಗಳೂರು
ಬೇಕಾಗುವ ಪದಾರ್ಥಗಳು
ಉದ್ದಿನ ಬೇಳೆ: 2 ಕಪ್ಪು
ಹಸಿ ಮೆಣಸಿನಕಾಯಿ: 5
ಶುಂಠಿ: ಒಂದಿಂಚು
ಕೊತ್ತಂಬರಿ ಸೊಪ್ಪು: 1 ಕಟ್ಟು
ಸಣ್ಣಗೆ ಹೆಚ್ಚಿಕೊಂಡ ಈರುಳ್ಳಿ: 2
ಕರಿ ಬೇವು:ಸ್ವಲ್ಪ
ಉಪ್ಪು: ರುಚಿಗೆ ತಕ್ಕಷ್ಟು
ಎಣ್ಣೆ: ಕರಿಯಲು
ಮಾಡುವ ವಿಧಾನ: ಉದ್ದಿನ ಬೇಳೆಯನ್ನು 3 ಗಂಟೆಗಳ ಕಾಲ ನೀರಿನಲ್ಲಿ ನೆನೆಸಬೇಕು. ನಂತರ ನೀರನ್ನು ಬಸಿದು, ಹಸಿ ಮೆಣಸಿನಕಾಯಿ, ಶುಂಠಿಯ ಜೊತೆಗೆ ಒಂಚೂರು ನೀರು ಹಾಕಿ ಮಿಕ್ಸಿಯಲ್ಲಿ ಚೆನ್ನಾಗಿ ರುಬ್ಬಿಕೊಳ್ಳಬೇಕು.
ನಂತರ ಸಣ್ಣಗೆ ಹೆಚ್ಚಿಕೊಂಡ ಈರುಳ್ಳಿ, ಕೊತ್ತ್ತಂಬರಿ ಸೊಪ್ಪು, ಕರಿಬೇವು ಮತ್ತು ಉಪ್ಪನ್ನು ರುಬ್ಬಿಕೊಂಡ ಹಿಟ್ಟಿನೊಂದಿಗೆ ಚೆನ್ನಾಗಿ ಕಲಸಬೇಕು. ಬಾಣಲೆಗೆ ಎಣ್ಣೆಯನ್ನು ಹಾಕಿ ಬಿಸಿ ಮಾಡಿ. ಎರಡೂ ಕೈಗಳ ಅಂಗೈಯನ್ನು ನೀರಿನಿಂದ ಸ್ವಲ್ಪ ಒದ್ದೆ ಮಾಡಿಕೊಳ್ಳಿ(ಏಕೆಂದರೆ ಹಿಟ್ಟು ಕೈಗೆ ಅಂಟಿಕೊಳ್ಳುವುದಿಲ್ಲ), ಒಂಚೂರು ಹಿಟ್ಟನ್ನು ತೆಗೆದುಕೊಂಡು ಒತ್ತಿ ವೃತ್ತಾಕಾರ ಮಾಡಿಕೊಳ್ಳಿ, ಮಧ್ಯ ಭಾಗದಲ್ಲಿ ಒಂದು ಸಣ್ಣ ರಂಧ್ರ ಮಾಡಿ.
ಈಗ ನಿಧಾನಕ್ಕೆ ಎಣ್ಣೆಗೆ ಬಿಟ್ಟು ವಡೆ ಎರಡು ಕಡೆ ಹೊಂಬಣ್ಣಕ್ಕೆ ಬರುವವರೆಗೂ ಕರಿಯಿರಿ. ಅಷ್ಟೆ ಕೊತ್ತಂಬರಿ ವಡೆ ಸಿದ್ಧವಾದಂತೆ. ನಿಮಗಿಷ್ಟವಾದ ಚಟ್ನಿಯೊಂದಿಗೆ ಸವಿಯಬಹುದು.



Click it and Unblock the Notifications