Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಮಾಡಿ ನೋಡಿ ಕೊತ್ತಂಬರಿ ವಡೆ!
*ಶ್ರೀರಕ್ಷಾ, ಬೆಂಗಳೂರು
ಬೇಕಾಗುವ ಪದಾರ್ಥಗಳು
ಉದ್ದಿನ ಬೇಳೆ: 2 ಕಪ್ಪು
ಹಸಿ ಮೆಣಸಿನಕಾಯಿ: 5
ಶುಂಠಿ: ಒಂದಿಂಚು
ಕೊತ್ತಂಬರಿ ಸೊಪ್ಪು: 1 ಕಟ್ಟು
ಸಣ್ಣಗೆ ಹೆಚ್ಚಿಕೊಂಡ ಈರುಳ್ಳಿ: 2
ಕರಿ ಬೇವು:ಸ್ವಲ್ಪ
ಉಪ್ಪು: ರುಚಿಗೆ ತಕ್ಕಷ್ಟು
ಎಣ್ಣೆ: ಕರಿಯಲು
ಮಾಡುವ ವಿಧಾನ: ಉದ್ದಿನ ಬೇಳೆಯನ್ನು 3 ಗಂಟೆಗಳ ಕಾಲ ನೀರಿನಲ್ಲಿ ನೆನೆಸಬೇಕು. ನಂತರ ನೀರನ್ನು ಬಸಿದು, ಹಸಿ ಮೆಣಸಿನಕಾಯಿ, ಶುಂಠಿಯ ಜೊತೆಗೆ ಒಂಚೂರು ನೀರು ಹಾಕಿ ಮಿಕ್ಸಿಯಲ್ಲಿ ಚೆನ್ನಾಗಿ ರುಬ್ಬಿಕೊಳ್ಳಬೇಕು.
ನಂತರ ಸಣ್ಣಗೆ ಹೆಚ್ಚಿಕೊಂಡ ಈರುಳ್ಳಿ, ಕೊತ್ತ್ತಂಬರಿ ಸೊಪ್ಪು, ಕರಿಬೇವು ಮತ್ತು ಉಪ್ಪನ್ನು ರುಬ್ಬಿಕೊಂಡ ಹಿಟ್ಟಿನೊಂದಿಗೆ ಚೆನ್ನಾಗಿ ಕಲಸಬೇಕು. ಬಾಣಲೆಗೆ ಎಣ್ಣೆಯನ್ನು ಹಾಕಿ ಬಿಸಿ ಮಾಡಿ. ಎರಡೂ ಕೈಗಳ ಅಂಗೈಯನ್ನು ನೀರಿನಿಂದ ಸ್ವಲ್ಪ ಒದ್ದೆ ಮಾಡಿಕೊಳ್ಳಿ(ಏಕೆಂದರೆ ಹಿಟ್ಟು ಕೈಗೆ ಅಂಟಿಕೊಳ್ಳುವುದಿಲ್ಲ), ಒಂಚೂರು ಹಿಟ್ಟನ್ನು ತೆಗೆದುಕೊಂಡು ಒತ್ತಿ ವೃತ್ತಾಕಾರ ಮಾಡಿಕೊಳ್ಳಿ, ಮಧ್ಯ ಭಾಗದಲ್ಲಿ ಒಂದು ಸಣ್ಣ ರಂಧ್ರ ಮಾಡಿ.
ಈಗ ನಿಧಾನಕ್ಕೆ ಎಣ್ಣೆಗೆ ಬಿಟ್ಟು ವಡೆ ಎರಡು ಕಡೆ ಹೊಂಬಣ್ಣಕ್ಕೆ ಬರುವವರೆಗೂ ಕರಿಯಿರಿ. ಅಷ್ಟೆ ಕೊತ್ತಂಬರಿ ವಡೆ ಸಿದ್ಧವಾದಂತೆ. ನಿಮಗಿಷ್ಟವಾದ ಚಟ್ನಿಯೊಂದಿಗೆ ಸವಿಯಬಹುದು.



Click it and Unblock the Notifications
