Latest Updates
-
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ?
ಮಾಡಿ ನೋಡಿ ಕೊತ್ತಂಬರಿ ವಡೆ!
*ಶ್ರೀರಕ್ಷಾ, ಬೆಂಗಳೂರು
ಬೇಕಾಗುವ ಪದಾರ್ಥಗಳು
ಉದ್ದಿನ ಬೇಳೆ: 2 ಕಪ್ಪು
ಹಸಿ ಮೆಣಸಿನಕಾಯಿ: 5
ಶುಂಠಿ: ಒಂದಿಂಚು
ಕೊತ್ತಂಬರಿ ಸೊಪ್ಪು: 1 ಕಟ್ಟು
ಸಣ್ಣಗೆ ಹೆಚ್ಚಿಕೊಂಡ ಈರುಳ್ಳಿ: 2
ಕರಿ ಬೇವು:ಸ್ವಲ್ಪ
ಉಪ್ಪು: ರುಚಿಗೆ ತಕ್ಕಷ್ಟು
ಎಣ್ಣೆ: ಕರಿಯಲು
ಮಾಡುವ ವಿಧಾನ: ಉದ್ದಿನ ಬೇಳೆಯನ್ನು 3 ಗಂಟೆಗಳ ಕಾಲ ನೀರಿನಲ್ಲಿ ನೆನೆಸಬೇಕು. ನಂತರ ನೀರನ್ನು ಬಸಿದು, ಹಸಿ ಮೆಣಸಿನಕಾಯಿ, ಶುಂಠಿಯ ಜೊತೆಗೆ ಒಂಚೂರು ನೀರು ಹಾಕಿ ಮಿಕ್ಸಿಯಲ್ಲಿ ಚೆನ್ನಾಗಿ ರುಬ್ಬಿಕೊಳ್ಳಬೇಕು.
ನಂತರ ಸಣ್ಣಗೆ ಹೆಚ್ಚಿಕೊಂಡ ಈರುಳ್ಳಿ, ಕೊತ್ತ್ತಂಬರಿ ಸೊಪ್ಪು, ಕರಿಬೇವು ಮತ್ತು ಉಪ್ಪನ್ನು ರುಬ್ಬಿಕೊಂಡ ಹಿಟ್ಟಿನೊಂದಿಗೆ ಚೆನ್ನಾಗಿ ಕಲಸಬೇಕು. ಬಾಣಲೆಗೆ ಎಣ್ಣೆಯನ್ನು ಹಾಕಿ ಬಿಸಿ ಮಾಡಿ. ಎರಡೂ ಕೈಗಳ ಅಂಗೈಯನ್ನು ನೀರಿನಿಂದ ಸ್ವಲ್ಪ ಒದ್ದೆ ಮಾಡಿಕೊಳ್ಳಿ(ಏಕೆಂದರೆ ಹಿಟ್ಟು ಕೈಗೆ ಅಂಟಿಕೊಳ್ಳುವುದಿಲ್ಲ), ಒಂಚೂರು ಹಿಟ್ಟನ್ನು ತೆಗೆದುಕೊಂಡು ಒತ್ತಿ ವೃತ್ತಾಕಾರ ಮಾಡಿಕೊಳ್ಳಿ, ಮಧ್ಯ ಭಾಗದಲ್ಲಿ ಒಂದು ಸಣ್ಣ ರಂಧ್ರ ಮಾಡಿ.
ಈಗ ನಿಧಾನಕ್ಕೆ ಎಣ್ಣೆಗೆ ಬಿಟ್ಟು ವಡೆ ಎರಡು ಕಡೆ ಹೊಂಬಣ್ಣಕ್ಕೆ ಬರುವವರೆಗೂ ಕರಿಯಿರಿ. ಅಷ್ಟೆ ಕೊತ್ತಂಬರಿ ವಡೆ ಸಿದ್ಧವಾದಂತೆ. ನಿಮಗಿಷ್ಟವಾದ ಚಟ್ನಿಯೊಂದಿಗೆ ಸವಿಯಬಹುದು.



Click it and Unblock the Notifications