Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಮಾಡಿ ನೋಡಿ ಕೊತ್ತಂಬರಿ ವಡೆ!
*ಶ್ರೀರಕ್ಷಾ, ಬೆಂಗಳೂರು
ಬೇಕಾಗುವ ಪದಾರ್ಥಗಳು
ಉದ್ದಿನ ಬೇಳೆ: 2 ಕಪ್ಪು
ಹಸಿ ಮೆಣಸಿನಕಾಯಿ: 5
ಶುಂಠಿ: ಒಂದಿಂಚು
ಕೊತ್ತಂಬರಿ ಸೊಪ್ಪು: 1 ಕಟ್ಟು
ಸಣ್ಣಗೆ ಹೆಚ್ಚಿಕೊಂಡ ಈರುಳ್ಳಿ: 2
ಕರಿ ಬೇವು:ಸ್ವಲ್ಪ
ಉಪ್ಪು: ರುಚಿಗೆ ತಕ್ಕಷ್ಟು
ಎಣ್ಣೆ: ಕರಿಯಲು
ಮಾಡುವ ವಿಧಾನ: ಉದ್ದಿನ ಬೇಳೆಯನ್ನು 3 ಗಂಟೆಗಳ ಕಾಲ ನೀರಿನಲ್ಲಿ ನೆನೆಸಬೇಕು. ನಂತರ ನೀರನ್ನು ಬಸಿದು, ಹಸಿ ಮೆಣಸಿನಕಾಯಿ, ಶುಂಠಿಯ ಜೊತೆಗೆ ಒಂಚೂರು ನೀರು ಹಾಕಿ ಮಿಕ್ಸಿಯಲ್ಲಿ ಚೆನ್ನಾಗಿ ರುಬ್ಬಿಕೊಳ್ಳಬೇಕು.
ನಂತರ ಸಣ್ಣಗೆ ಹೆಚ್ಚಿಕೊಂಡ ಈರುಳ್ಳಿ, ಕೊತ್ತ್ತಂಬರಿ ಸೊಪ್ಪು, ಕರಿಬೇವು ಮತ್ತು ಉಪ್ಪನ್ನು ರುಬ್ಬಿಕೊಂಡ ಹಿಟ್ಟಿನೊಂದಿಗೆ ಚೆನ್ನಾಗಿ ಕಲಸಬೇಕು. ಬಾಣಲೆಗೆ ಎಣ್ಣೆಯನ್ನು ಹಾಕಿ ಬಿಸಿ ಮಾಡಿ. ಎರಡೂ ಕೈಗಳ ಅಂಗೈಯನ್ನು ನೀರಿನಿಂದ ಸ್ವಲ್ಪ ಒದ್ದೆ ಮಾಡಿಕೊಳ್ಳಿ(ಏಕೆಂದರೆ ಹಿಟ್ಟು ಕೈಗೆ ಅಂಟಿಕೊಳ್ಳುವುದಿಲ್ಲ), ಒಂಚೂರು ಹಿಟ್ಟನ್ನು ತೆಗೆದುಕೊಂಡು ಒತ್ತಿ ವೃತ್ತಾಕಾರ ಮಾಡಿಕೊಳ್ಳಿ, ಮಧ್ಯ ಭಾಗದಲ್ಲಿ ಒಂದು ಸಣ್ಣ ರಂಧ್ರ ಮಾಡಿ.
ಈಗ ನಿಧಾನಕ್ಕೆ ಎಣ್ಣೆಗೆ ಬಿಟ್ಟು ವಡೆ ಎರಡು ಕಡೆ ಹೊಂಬಣ್ಣಕ್ಕೆ ಬರುವವರೆಗೂ ಕರಿಯಿರಿ. ಅಷ್ಟೆ ಕೊತ್ತಂಬರಿ ವಡೆ ಸಿದ್ಧವಾದಂತೆ. ನಿಮಗಿಷ್ಟವಾದ ಚಟ್ನಿಯೊಂದಿಗೆ ಸವಿಯಬಹುದು.



Click it and Unblock the Notifications