Latest Updates
-
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಮದುವೆಗೂ ಮುನ್ನ ಈ 48 ಗಂಟೆಗಳ ಚೆಕ್ಲಿಸ್ಟ್ ಮರೆಯದಿರಿ
ಮಾಡಿ ನೋಡಿ ಕೊತ್ತಂಬರಿ ವಡೆ!
*ಶ್ರೀರಕ್ಷಾ, ಬೆಂಗಳೂರು
ಬೇಕಾಗುವ ಪದಾರ್ಥಗಳು
ಉದ್ದಿನ ಬೇಳೆ: 2 ಕಪ್ಪು
ಹಸಿ ಮೆಣಸಿನಕಾಯಿ: 5
ಶುಂಠಿ: ಒಂದಿಂಚು
ಕೊತ್ತಂಬರಿ ಸೊಪ್ಪು: 1 ಕಟ್ಟು
ಸಣ್ಣಗೆ ಹೆಚ್ಚಿಕೊಂಡ ಈರುಳ್ಳಿ: 2
ಕರಿ ಬೇವು:ಸ್ವಲ್ಪ
ಉಪ್ಪು: ರುಚಿಗೆ ತಕ್ಕಷ್ಟು
ಎಣ್ಣೆ: ಕರಿಯಲು
ಮಾಡುವ ವಿಧಾನ: ಉದ್ದಿನ ಬೇಳೆಯನ್ನು 3 ಗಂಟೆಗಳ ಕಾಲ ನೀರಿನಲ್ಲಿ ನೆನೆಸಬೇಕು. ನಂತರ ನೀರನ್ನು ಬಸಿದು, ಹಸಿ ಮೆಣಸಿನಕಾಯಿ, ಶುಂಠಿಯ ಜೊತೆಗೆ ಒಂಚೂರು ನೀರು ಹಾಕಿ ಮಿಕ್ಸಿಯಲ್ಲಿ ಚೆನ್ನಾಗಿ ರುಬ್ಬಿಕೊಳ್ಳಬೇಕು.
ನಂತರ ಸಣ್ಣಗೆ ಹೆಚ್ಚಿಕೊಂಡ ಈರುಳ್ಳಿ, ಕೊತ್ತ್ತಂಬರಿ ಸೊಪ್ಪು, ಕರಿಬೇವು ಮತ್ತು ಉಪ್ಪನ್ನು ರುಬ್ಬಿಕೊಂಡ ಹಿಟ್ಟಿನೊಂದಿಗೆ ಚೆನ್ನಾಗಿ ಕಲಸಬೇಕು. ಬಾಣಲೆಗೆ ಎಣ್ಣೆಯನ್ನು ಹಾಕಿ ಬಿಸಿ ಮಾಡಿ. ಎರಡೂ ಕೈಗಳ ಅಂಗೈಯನ್ನು ನೀರಿನಿಂದ ಸ್ವಲ್ಪ ಒದ್ದೆ ಮಾಡಿಕೊಳ್ಳಿ(ಏಕೆಂದರೆ ಹಿಟ್ಟು ಕೈಗೆ ಅಂಟಿಕೊಳ್ಳುವುದಿಲ್ಲ), ಒಂಚೂರು ಹಿಟ್ಟನ್ನು ತೆಗೆದುಕೊಂಡು ಒತ್ತಿ ವೃತ್ತಾಕಾರ ಮಾಡಿಕೊಳ್ಳಿ, ಮಧ್ಯ ಭಾಗದಲ್ಲಿ ಒಂದು ಸಣ್ಣ ರಂಧ್ರ ಮಾಡಿ.
ಈಗ ನಿಧಾನಕ್ಕೆ ಎಣ್ಣೆಗೆ ಬಿಟ್ಟು ವಡೆ ಎರಡು ಕಡೆ ಹೊಂಬಣ್ಣಕ್ಕೆ ಬರುವವರೆಗೂ ಕರಿಯಿರಿ. ಅಷ್ಟೆ ಕೊತ್ತಂಬರಿ ವಡೆ ಸಿದ್ಧವಾದಂತೆ. ನಿಮಗಿಷ್ಟವಾದ ಚಟ್ನಿಯೊಂದಿಗೆ ಸವಿಯಬಹುದು.



Click it and Unblock the Notifications











