Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಎನ್ಡೇನ್ಜರ್ಡ್ ಕರ್ನಾಟಕ ಸ್ವೀಟ್ ಸ್ಪೀಸೀಸ್ (ತಂಬಿಟ್ಟು)
ಅಪ್ಪಟ ಕರ್ನಾಟಕ ಶೈಲಿಯ ತಿಂಡಿ ತಿನಿಸುಗಳು ಅಳಿಯುತ್ತಿರುವ ಪ್ರಬೇಧ ಪಟ್ಟಿಯಲ್ಲಿವೆ. ಉಳಿಸಿ-ಬೆಳೆಸಿ : ಓಂ ನಮಃ ಶಿವಾಯ.
ಬೇಕಾದ ಪದಾರ್ಥ :
ಕುಚ್ಚಲು ಅಕ್ಕಿ - 1 ಕೇಜಿ
ಬೆಲ್ಲ - 1 ಕೇಜಿ
ಕೊಬ್ಬರಿ ತುರಿ- 1 ದಪ್ಪನೆ ಗಿಟುಕಿನದು
ಕಡಲೆ ಬೀಜ- 1ಪಾವು
ಹೆಚ್ಚಿನ ರುಚಿಗೆ ಹುರಿಗಡಲೆ, ಬಿಳಿ ಎಳ್ಳು ಸೇರಿಸಬಹುದು.
ಮಾಡುವ ವಿಧಾನ :
ತೊಳೆದು ನೆರಳಿನಲ್ಲಿ ಒಣಗಿಸಿದ ಅಕ್ಕಿಯನ್ನು ಹುರಿದು, ಹಿಟ್ಟು ಮಾಡಿಕೊಳ್ಳಿ. ಅಕ್ಕಿ ಹಿಟ್ಟು ಜೊತೆ ಕೊಬ್ಬರಿ ತುರಿ, ಹುರಿದು ಸಿಪ್ಪೆ ತೆರೆದ ಕಡಲೆಬೀಜ, ಹುರಿಗಡಲೆ, ಬಿಸಿ ಮಾಡಿದ ಎಳ್ಳು ಬೆರೆಸಿ. ಮಿಶ್ರಣವನ್ನು ಒಂದು ಅಗಲವಾದ ತಟ್ಟೆಯಲ್ಲಿ ಇಟ್ಟುಕೊಳ್ಳಿ. ಬೆಲ್ಲವನ್ನು ದಬರಿಗೆ ಸುರಿದು, ಅರ್ಧ ಕಪ್ ನೀರು ಸೇರಿಸಿ ಸ್ಟವ್ ಮೇಲಿಡಿ. ಹದಕ್ಕೆ ಬಂದ ಪಾಕವನ್ನು ಮಿಶ್ರಣಕ್ಕೆ ಸೇರಿಸಿ, ಉಂಡೆ ಕಟ್ಟಲು ಶುರು ಹಚ್ಚಿಕೊಳ್ಳಿ. ಪಾಕವನ್ನು ಹಿಟ್ಟಿನಲ್ಲಿ ಸ್ವಲ್ಪ ಸ್ವಲ್ಪ ಹಾಕಿಕೊಂಡು ಉಂಡೆ ಕಟ್ಟಬೇಕು. ಪಾಕವನ್ನು ಮತ್ತೆ ಬಿಸಿ ಮಾಡುವುದು, ಮತ್ತೆ ಬಗ್ಗಿಸಿಕೊಂಡು ಉಂಡೆ ಕಟ್ಟುವುದು- ಇದು ತಂಬಿಟ್ಟು ಕಟ್ಟುವ ಕ್ರಮ. ಉಂಡೆಯ ಗಾತ್ರ ನಿಮ್ಮಿಷ್ಟಕ್ಕೆ ಬಿಟ್ಟಿದ್ದು.
ಉಂಡೆ ಸ್ವಲ್ಪ ಆರಿದ ನಂತರ ಡಬ್ಬಿಯಲ್ಲಿ ಎತ್ತಿಟ್ಟುಕೊಳ್ಳಬಹುದು. ಪೌಷ್ಠಿಕಾಂಶಗಳನ್ನುಳ್ಳ ಈ ತಂಬಿಟ್ಟು ರುಚಿಗಟ್ಟೂ ಹೌದು. ಕೊಬ್ಬರಿ ತುರಿ ಚೆನ್ನಾಗಿ ಒಣಗಿದ್ದರೆ ತಂಬಿಟ್ಟು ತಿಂಗಳುಗಟ್ಟಲೆ ಹಾಳಾಗುವುದಿಲ್ಲ . ಶಿವರಾತ್ರಿ ಜಾಗರಣೆಗೆ ಮಾಡುವುದು ಇದೇ ತಂಬಿಟ್ಟನ್ನು!



Click it and Unblock the Notifications
