Latest Updates
-
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ! -
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ!
ಎನ್ಡೇನ್ಜರ್ಡ್ ಕರ್ನಾಟಕ ಸ್ವೀಟ್ ಸ್ಪೀಸೀಸ್ (ತಂಬಿಟ್ಟು)
ಅಪ್ಪಟ ಕರ್ನಾಟಕ ಶೈಲಿಯ ತಿಂಡಿ ತಿನಿಸುಗಳು ಅಳಿಯುತ್ತಿರುವ ಪ್ರಬೇಧ ಪಟ್ಟಿಯಲ್ಲಿವೆ. ಉಳಿಸಿ-ಬೆಳೆಸಿ : ಓಂ ನಮಃ ಶಿವಾಯ.
ಬೇಕಾದ ಪದಾರ್ಥ :
ಕುಚ್ಚಲು ಅಕ್ಕಿ - 1 ಕೇಜಿ
ಬೆಲ್ಲ - 1 ಕೇಜಿ
ಕೊಬ್ಬರಿ ತುರಿ- 1 ದಪ್ಪನೆ ಗಿಟುಕಿನದು
ಕಡಲೆ ಬೀಜ- 1ಪಾವು
ಹೆಚ್ಚಿನ ರುಚಿಗೆ ಹುರಿಗಡಲೆ, ಬಿಳಿ ಎಳ್ಳು ಸೇರಿಸಬಹುದು.
ಮಾಡುವ ವಿಧಾನ :
ತೊಳೆದು ನೆರಳಿನಲ್ಲಿ ಒಣಗಿಸಿದ ಅಕ್ಕಿಯನ್ನು ಹುರಿದು, ಹಿಟ್ಟು ಮಾಡಿಕೊಳ್ಳಿ. ಅಕ್ಕಿ ಹಿಟ್ಟು ಜೊತೆ ಕೊಬ್ಬರಿ ತುರಿ, ಹುರಿದು ಸಿಪ್ಪೆ ತೆರೆದ ಕಡಲೆಬೀಜ, ಹುರಿಗಡಲೆ, ಬಿಸಿ ಮಾಡಿದ ಎಳ್ಳು ಬೆರೆಸಿ. ಮಿಶ್ರಣವನ್ನು ಒಂದು ಅಗಲವಾದ ತಟ್ಟೆಯಲ್ಲಿ ಇಟ್ಟುಕೊಳ್ಳಿ. ಬೆಲ್ಲವನ್ನು ದಬರಿಗೆ ಸುರಿದು, ಅರ್ಧ ಕಪ್ ನೀರು ಸೇರಿಸಿ ಸ್ಟವ್ ಮೇಲಿಡಿ. ಹದಕ್ಕೆ ಬಂದ ಪಾಕವನ್ನು ಮಿಶ್ರಣಕ್ಕೆ ಸೇರಿಸಿ, ಉಂಡೆ ಕಟ್ಟಲು ಶುರು ಹಚ್ಚಿಕೊಳ್ಳಿ. ಪಾಕವನ್ನು ಹಿಟ್ಟಿನಲ್ಲಿ ಸ್ವಲ್ಪ ಸ್ವಲ್ಪ ಹಾಕಿಕೊಂಡು ಉಂಡೆ ಕಟ್ಟಬೇಕು. ಪಾಕವನ್ನು ಮತ್ತೆ ಬಿಸಿ ಮಾಡುವುದು, ಮತ್ತೆ ಬಗ್ಗಿಸಿಕೊಂಡು ಉಂಡೆ ಕಟ್ಟುವುದು- ಇದು ತಂಬಿಟ್ಟು ಕಟ್ಟುವ ಕ್ರಮ. ಉಂಡೆಯ ಗಾತ್ರ ನಿಮ್ಮಿಷ್ಟಕ್ಕೆ ಬಿಟ್ಟಿದ್ದು.
ಉಂಡೆ ಸ್ವಲ್ಪ ಆರಿದ ನಂತರ ಡಬ್ಬಿಯಲ್ಲಿ ಎತ್ತಿಟ್ಟುಕೊಳ್ಳಬಹುದು. ಪೌಷ್ಠಿಕಾಂಶಗಳನ್ನುಳ್ಳ ಈ ತಂಬಿಟ್ಟು ರುಚಿಗಟ್ಟೂ ಹೌದು. ಕೊಬ್ಬರಿ ತುರಿ ಚೆನ್ನಾಗಿ ಒಣಗಿದ್ದರೆ ತಂಬಿಟ್ಟು ತಿಂಗಳುಗಟ್ಟಲೆ ಹಾಳಾಗುವುದಿಲ್ಲ . ಶಿವರಾತ್ರಿ ಜಾಗರಣೆಗೆ ಮಾಡುವುದು ಇದೇ ತಂಬಿಟ್ಟನ್ನು!



Click it and Unblock the Notifications