Latest Updates
-
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ? -
ಬೇಸಿಗೆ ಬಿಸಿಲಿಗೆ ಮನೆ ತಂಪಾಗಿಡಲು ಈ ಟಿಪ್ಸ್ ಫಾಲೋ ಮಾಡಿ -
ಹೀಟ್ವೇವ್ ಎಚ್ಚರಿಕೆ: ಸುಡುವ ಬಿಸಿಲಿಗೆ ನಿಮ್ಮ ದೇಹ ತಂಪಾಗಿಸುವುದು ಹೇಗೆ? -
ಬಿಸಿಲ ಬೇಗೆಯಿಂದ ಪಾರಾಗಲು ಈ ಸ್ಮಾರ್ಟ್ ಟಿಪ್ಸ್ ಮಿಸ್ ಮಾಡ್ಬೇಡಿ -
ತೀವ್ರ ಶಾಖದ ಅಲೆ: ಬಿಸಿಲಿನಲ್ಲಿ ವ್ಯಾಯಾಮ ಮಾಡುವ ಮುನ್ನ ಎಚ್ಚರ! -
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ
ಎನ್ಡೇನ್ಜರ್ಡ್ ಕರ್ನಾಟಕ ಸ್ವೀಟ್ ಸ್ಪೀಸೀಸ್ (ತಂಬಿಟ್ಟು)
ಅಪ್ಪಟ ಕರ್ನಾಟಕ ಶೈಲಿಯ ತಿಂಡಿ ತಿನಿಸುಗಳು ಅಳಿಯುತ್ತಿರುವ ಪ್ರಬೇಧ ಪಟ್ಟಿಯಲ್ಲಿವೆ. ಉಳಿಸಿ-ಬೆಳೆಸಿ : ಓಂ ನಮಃ ಶಿವಾಯ.
ಬೇಕಾದ ಪದಾರ್ಥ :
ಕುಚ್ಚಲು ಅಕ್ಕಿ - 1 ಕೇಜಿ
ಬೆಲ್ಲ - 1 ಕೇಜಿ
ಕೊಬ್ಬರಿ ತುರಿ- 1 ದಪ್ಪನೆ ಗಿಟುಕಿನದು
ಕಡಲೆ ಬೀಜ- 1ಪಾವು
ಹೆಚ್ಚಿನ ರುಚಿಗೆ ಹುರಿಗಡಲೆ, ಬಿಳಿ ಎಳ್ಳು ಸೇರಿಸಬಹುದು.
ಮಾಡುವ ವಿಧಾನ :
ತೊಳೆದು ನೆರಳಿನಲ್ಲಿ ಒಣಗಿಸಿದ ಅಕ್ಕಿಯನ್ನು ಹುರಿದು, ಹಿಟ್ಟು ಮಾಡಿಕೊಳ್ಳಿ. ಅಕ್ಕಿ ಹಿಟ್ಟು ಜೊತೆ ಕೊಬ್ಬರಿ ತುರಿ, ಹುರಿದು ಸಿಪ್ಪೆ ತೆರೆದ ಕಡಲೆಬೀಜ, ಹುರಿಗಡಲೆ, ಬಿಸಿ ಮಾಡಿದ ಎಳ್ಳು ಬೆರೆಸಿ. ಮಿಶ್ರಣವನ್ನು ಒಂದು ಅಗಲವಾದ ತಟ್ಟೆಯಲ್ಲಿ ಇಟ್ಟುಕೊಳ್ಳಿ. ಬೆಲ್ಲವನ್ನು ದಬರಿಗೆ ಸುರಿದು, ಅರ್ಧ ಕಪ್ ನೀರು ಸೇರಿಸಿ ಸ್ಟವ್ ಮೇಲಿಡಿ. ಹದಕ್ಕೆ ಬಂದ ಪಾಕವನ್ನು ಮಿಶ್ರಣಕ್ಕೆ ಸೇರಿಸಿ, ಉಂಡೆ ಕಟ್ಟಲು ಶುರು ಹಚ್ಚಿಕೊಳ್ಳಿ. ಪಾಕವನ್ನು ಹಿಟ್ಟಿನಲ್ಲಿ ಸ್ವಲ್ಪ ಸ್ವಲ್ಪ ಹಾಕಿಕೊಂಡು ಉಂಡೆ ಕಟ್ಟಬೇಕು. ಪಾಕವನ್ನು ಮತ್ತೆ ಬಿಸಿ ಮಾಡುವುದು, ಮತ್ತೆ ಬಗ್ಗಿಸಿಕೊಂಡು ಉಂಡೆ ಕಟ್ಟುವುದು- ಇದು ತಂಬಿಟ್ಟು ಕಟ್ಟುವ ಕ್ರಮ. ಉಂಡೆಯ ಗಾತ್ರ ನಿಮ್ಮಿಷ್ಟಕ್ಕೆ ಬಿಟ್ಟಿದ್ದು.
ಉಂಡೆ ಸ್ವಲ್ಪ ಆರಿದ ನಂತರ ಡಬ್ಬಿಯಲ್ಲಿ ಎತ್ತಿಟ್ಟುಕೊಳ್ಳಬಹುದು. ಪೌಷ್ಠಿಕಾಂಶಗಳನ್ನುಳ್ಳ ಈ ತಂಬಿಟ್ಟು ರುಚಿಗಟ್ಟೂ ಹೌದು. ಕೊಬ್ಬರಿ ತುರಿ ಚೆನ್ನಾಗಿ ಒಣಗಿದ್ದರೆ ತಂಬಿಟ್ಟು ತಿಂಗಳುಗಟ್ಟಲೆ ಹಾಳಾಗುವುದಿಲ್ಲ . ಶಿವರಾತ್ರಿ ಜಾಗರಣೆಗೆ ಮಾಡುವುದು ಇದೇ ತಂಬಿಟ್ಟನ್ನು!



Click it and Unblock the Notifications











