Latest Updates
-
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ!
ಬಾಳೆಕಾಯಿ ಕಾಪು
ಎಲ್ಲಾ ರೆಸಿಪಿಗಳನ್ನು ಹೆಂಗಸರೇ ಮಾಡುತ್ತಾರೆ, ಗಂಡಸರು ಕೂತು ತಿನ್ನುವ ದಂಡಪಿಂಡಗಳು ಎಂಬುದು ನಿಮ್ಮ ಅನಿಸಿಕೆಯಾಗಿದ್ದರೆ, ಅದನ್ನ ಹಿಂತೆಗೆದುಕೊಳ್ಳಿ. ಈ ರುಚಿಕಟ್ಟಾದ ತಿಂಡಿ ಮಾಡುವುದನ್ನು ನನಗೆ ಕಲಿಸಿಕೊಟ್ಟದ್ದು ನನ್ನ ತಂದೆ!
ಪ್ರಸಾದ ನಾಯಿಕ, ಬೆಂಗಳೂರು
ಈ ತಿಂಡಿಯ ಹೆಸರನ್ನು ನೀವು ಕೇಳಿರಲಿಕ್ಕಿಲ್ಲ, ತಿಂದಿರಲಿಕ್ಕಿಲ್ಲ. ಈ ತಿಂಡಿಯನ್ನು ಮಾಡಲು ನೂರಾಎಂಟು ಪಾತ್ರೆ, ಸೌಟು ಎಂಥದೂ ಬೇಕಾಗಿಲ್ಲ. ಒಂದಿಷ್ಟು ಬಾಳೆಕಾಯಿ, ಉಪ್ಪು, ಕಾರ, ಕಡಲೆ ಹಿಟ್ಟು, ಇಂಗು, ಜೀರಿಗೆ ಜೊತೆಗೆ ಚಪಾತಿ ಮಾಡುವ ತವಾ ಇಷ್ಟಿದ್ದರೆ ಸಾಕು.
ಮಾರ್ಗಶಿರ ಮಾಸ ಪ್ರಾರಂಭವಾಗಿ ಮಾಗಿಯ ಚಳಿ ಮೈಕೊರೆಯುತ್ತಿದ್ದರೆ ನಾಲಿಗೆ ಚುರುಚುರು ಅನ್ನಿಸುವುದಕ್ಕೆ ಪ್ರಾರಂಭಿಸುತ್ತದೆ. ಪ್ರತಿದಿನ ಮನೆಗೆಲಸ ಮಾಡಿ ದುಡಿದು ಹಣ್ಣಾದ ಹೆಂಡತಿ, ತಾಯಿ, ಅಕ್ಕ-ತಂಗಿಯರನ್ನು ಅಡುಗೆಮನೆಯಿಂದ ಒಂದು ಸಾಯಂಕಾಲ ಹೊರಕ್ಕಟ್ಟಿ ಶಭಾಷ್ಗಿರಿಪಡೆಯಲು ಗಂಡಸರಿಗೆ ಇದು ಒಳ್ಳೇ ಅವಕಾಶ.
ನೆನಪಿರಲಿ, ಇದಕ್ಕೆ ತಗಲುವ ಸಮಯ ಕೂಡ ಅತಿ ಕಡಿಮೆ. ನಿಮ್ಮ ಹೆಂಡತಿ ಅಡುಗೆಮನೆಯಿಂದ ಹೊರಬಂದು ಮುಖ ತೊಳೆದು, ಕುಂಕುಮ ಇಟ್ಟು, ಹೂಮುಡಿದು ರೆಡಿಯಾಗಿ ಬರುವುದರೊಳಗಾಗಿ ಗರಿಗರಿ, ಬಿಸಿಬಿಸಿಯಾದ ಕಾಪು ರೆಡಿಯಾಗಿರುತ್ತದೆ! ಇನ್ನೊಂದು ಮಾತು ನೆನಪಿರಲಿ, ಇದು ಯಾರು ಬೇಕಾದರೂ ಮಾಡಬಹುದು.
ಬೇಕಾಗುವ ಸಾಮಗ್ರಿಗಳು :
ನಾಲ್ಕು ಬಾಳೆಕಾಯಿ
ಉಪ್ಪು, ಕಾರ, ಇಂಗು, ಕಡಲೆಹಿಟ್ಟು, ಜೀರಿಗೆ - ಎಲ್ಲ ಚಿಟಿಕೆಯಷ್ಟು
ಮಾಡುವ ವಿಧಾನ :
ಬಾಳೆಕಾಯಿಯ ಸಿಪ್ಪೆಯನ್ನು ತೆಗೆದು, ಗಾಲಿ ರೂಪದಲ್ಲಿ ಕತ್ತರಿಸಿಕೊಳ್ಳಬೇಕು. ಅವುಗಳ ಮೇಲೆ ಉಪ್ಪು, ಕಾರ, ಕಡಲೆಹಿಟ್ಟು, ಜೀರಿಗೆ ಎಲ್ಲ ಸ್ವಲ್ಪ ಪ್ರಮಾಣದಲ್ಲಿ ಉದುರಿಸಿ ಕಾಯ್ದ ತವಾದ ಮೇಲೆ ಇರಿಸಬೇಕು. ಅವುಗಳ ಮೇಲೆ ದೋಸೆಯ ಮೇಲೆ ಹುಯ್ದಂತೆ ಶೇಂಗಾಎಣ್ಣೆಯನ್ನು ಹಾಕಿ ಚೆನ್ನಾಗಿ ತಾಳಿಸಬೇಕು. ದಟ್ಸಾಲ್! ರೆಡಿ. ಇಷ್ಟೇನಾ ಅಂತ ಆಶ್ಚರ್ಯಪಡಬೇಡಿ. ನಮ್ಮಪ್ಪನಾಣೆಗೂ ಇಷ್ಟೇ.
ಮುಂದಿನ ಆದಿತ್ಯವಾರ ಮತ್ತೊಂದು ಹೊಸರುಚಿಯನ್ನು ನೋಡೋಣ, ಅಲ್ಲಿಯವರೆಗೆ ಬಾಳೆಕಾಯಿ ಕಾಪನ್ನು ಮೆಲ್ಲುತಿರೋಣ.



Click it and Unblock the Notifications