Latest Updates
-
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ!
ಬಿಸಿಬಿಸಿಯಾಗಿ ತಿನ್ನಲು ಆಲೂ ಪನ್ನೀರ್ ಟಿಕ್ಕಿ

ಬೇಕಾಗುವ ಸಾಮಾಗ್ರಿಗಳು:
* ಆಲೂಗಡ್ಡೆ 4
* ಜೋಳದ ಹಿಟ್ಟು ( ಕಾರ್ನ್ ಫ್ಲಾರ್) 1/2 ಕಪ್
* ರುಚಿಗೆ ತಕ್ಕಷ್ಟು ಉಪ್ಪು
* ಕರಿಯಲು ಎಣ್ಣೆ
ಹೂರಣಕ್ಕೆ:
* ಒಂದು ಚಮಚ ಎಣ್ಣೆ
* ಅರ್ಧ ಕಪ್ ಪನ್ನೀರ್
* ಎರಡು ದೊಡ್ಡ ಚಮಚ ನೆನಸಿದ ಕಡಲೆ ಬೇಳೆ
* ಬೆಳ್ಳುಳ್ಳಿ ಮತ್ತು ಶುಂಠಿ ಪೇಸ್ಟ್ ಒಂದೊಂದು ಚಮಚ
* ಹಸಿಮೆಣಸಿನ ಕಾಯಿ ಪೇಸ್ಟ್ ಒಂದು ಚಮಚ
ತಯಾರಿಸುವ ವಿಧಾನ:
1. ಬೇಯಿಸಿದ ಆಲೂಗಡ್ಡೆಯನ್ನು ಸಿಪ್ಪೆ ಸುಲಿದು ಅದನ್ನು ಚೆನ್ನಾಗಿ ಹಿಸುಕಿ ಅದಕ್ಕೆ ಜೋಳದ ಹಿಟ್ಟು ಮತ್ತು ಉಪ್ಪು ಸೇರಿಸಿ ಚಪಾತಿ ಹಿಟ್ಟಿನ ಹದಕ್ಕೆ( ನೀರು ಹಾಕದೇ) ಕಲೆಸಬೇಕು.
2. ನಂತರ ಬಾಣಲೆಯನ್ನು ಎಣ್ಣೆಗೆ ಬೆಳ್ಳುಳ್ಳಿ ಶುಂಠಿ ಪೇಸ್ಟ್ , ಹಸಿಮೆಣಸಿನ ಕಾಯಿ ಪೇಸ್ಟ್ ಹಾಕಿ ಕಡಲೆ ಬೇಳೆ ಹಾಕಿ ಸ್ವಲ್ಪ ಹೊತ್ತು ಹುರಿಯಬೇಕು. ನಂತರ ಪನ್ನೀರ್ ಅನ್ನು ಪುಡಿ ಮಾಡಿ ಅದಕ್ಕೆ ಸೇರಿಸಿ ಎರಡು ನಿಮಿಷದ ಬಿಸಿ ಮಾಡಿ ನಂತರ ಉರಿಯಿಂದ ತೆಗೆಯಬೇಕು. ತಣಿದ ಮೇಲೆ ಉಪ್ಪು ಸೇರಿಸಿ ಮಿಶ್ರ ಮಾಡಬೇಕು. ಹೀಗೆ ಮಾಡಿದರೆ ಹೂರಣ ರೆಡಿ.
3. ಆಲೂಗಡ್ಡೆಯ ಹಿಟ್ಟನ್ನು ಒಂದು ಪೂರಿಗಾಗುವಷ್ಟು ಕೈಯಲ್ಲಿ ತೆಗೆದುಕೊಂಡು ತಟ್ಟಿ ಅದರೊಳಗೆ ಒಂದೂವರೆ ಚಮಚ ಹೂರಣವನ್ನು ಹಾಕಿ ಉಂಡೆ ಕಟ್ಟಿ ನಂತರ ತಟ್ಟಿ ಚಪ್ಪಟೆ ಮಾಡಬೇಕು.
4. ಬಾಣಲೆಯಲ್ಲಿ ಎಣ್ಣೆ ಹಾಕಿ ಕಾಯಿಸಿ ಅದರಲ್ಲಿ ಈ ಟಿಕ್ಕಿ ಹಾಕಿ ಕಂದು ಬಣ್ಣ ಬರುವವರೆಗೆ ಕರಿದರೆ ಬಾಯಲ್ಲಿ ನೀರೂರಿಸುವ ರುಚಿಯ ಟಿಕ್ಕಿ ರೆಡಿ.
ಇದನ್ನು ಬಿಸಿಬಿಸಿಯಾಗಿ ಟೊಮೆಟೊ ಸಾಸ್ ಜೊತೆ ತಿನ್ನಲು ತುಂಬಾ ರುಚಿಯಾಗಿರುತ್ತದೆ.



Click it and Unblock the Notifications