Latest Updates
-
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ!
ಇಡ್ಲಿ ಮತ್ತು ಕ್ಯಾರೆಟ್ನ ಸ್ವಾದಿಷ್ಟಕರ ಉಪ್ಪಿಟ್ಟು

ಶಾಲೆಯಿಂದ ಮಕ್ಕಳು ಹೊಟ್ಟೆ ಹಸಿದು ಬಂದಾಗ ಈ ರೀತಿ ಮಾಡಿಕೊಟ್ಟರೆ ಹೊಟ್ಟೆಯೂ ತುಂಬುವುದು ಮತ್ತು ಇದರ ರುಚಿ ಎಲ್ಲರಿಗೆ ಇಷ್ಟವಾಗುತ್ತದೆ. ಇದನ್ನು ತಯಾರಿಸುವ ವಿಧಾನ ನೋಡಿ ಇಲ್ಲಿದೆ.
ಬೇಕಾಗುವ ಸಾಮಾಗ್ರಿಗಳು:
* 8-10 ಇಡ್ಲಿ
* 2-3 ಹಸಿಮೆಣಸಿನ ಕಾಯಿ (ಕತ್ತರಿಸಿದ್ದು)
* ಸಾಸಿವೆ
* ಒಂದು ಕತ್ತರಿಸಿದ ಈರುಳ್ಳಿ
* ಒಂದು ತುರಿದ ಕ್ಯಾರೆಟ್
* ಸ್ವಲ್ಪ ಕೊತ್ತಂಬರಿ ಸೊಪ್ಪು
* 1/4 ಚಮಚ ಅರಿಶಿಣ ಪುಡಿ
* 1/2 ಚಮಚ ಕೆಂಪು ಮೆಣಸಿನ ಪುಡಿ'
* ಚಿಟಿಕೆಯಷ್ಟು ಗರಂ ಮಸಾಲ ಪುಡಿ
* 1/4 ಚಮಚ ಮೆಂತೆ ಕಾಳು ಅಥವಾ ಸ್ವಲ್ಪ ಮೆಂತೆ ಸೊಪ್ಪು
* ಒಂದು ಟೊಮೆಟೊ (ಕತ್ತರಿಸಿದ್ದು)
* ಸ್ವಲ್ಪ ತುರಿದ ತೆಂಗಿನ ಕಾಯಿ
* ರುಚಿಗೆ ತಕ್ಕ ಉಪ್ಪು
* ಸ್ವಲ್ಪ ಕರಿಬೇವಿನ ಎಲೆ
ತಯಾರಿಸುವ ವಿಧಾನ:
1. ಇಡ್ಲಿಯನ್ನು ಕೈಯಿಂದ ಹಿಸುಕಿ ಪುಡಿಪುಡಿ ಮಾಡಬೇಕು.
2. ಈಗ ಬಾಣಲೆಯನ್ನು ಬಿಸಿಮಾಡಿ ಅದಕ್ಕೆ ಸ್ವಲ್ಪ ಎಣ್ಣೆ ಹಾಕಿ ಬಿಸಿ ಮಾಡಬೇಕು. ಅದಕ್ಕೆ ಸಾಸಿವೆ ಹಾಕಿ, ಸಾಸಿವೆ ಚಟಾಪಟ ಶಬ್ದ ಬರುವಾಗ ಕತ್ತರಿಸಿದ ಈರುಳ್ಳಿ, ಹಸಿಮೆಣಸಿನ ಕಾಯಿ ಮತ್ತು ಟೊಮೆಟೊ ಹಾಕಬೇಕು.
3. ಈರುಳ್ಳಿ ಕಂದು ಬಣ್ಣ ಬರುವವರೆಗೆ ಮತ್ತು ಟೊಮೆಟೊ ಮೆತ್ತಗಾಗುವವರೆಗೆ ಚೆನ್ನಾಗಿ ಹುರಿಯಬೇಕು. ನಂತರ ಸೌಟ್ ನಿಂದ ಕುಟ್ಟಿ ಟೊಮೆಟೊವನ್ನು ಪೇಸ್ಟ್ ರೀತಿ ಮಾಡಬೇಕು.
4. ಈಗ ಮೆಂತೆ ಕಾಳು ಅಥವಾ ಮೆಂತೆ ಸೊಪ್ಪು, ಕರಿಬೇವಿನ ಎಲೆ ಹಾಕಿ ನಂತರ , ಚಿಟಿಕೆಯಷ್ಟು ಗರಂ ಮಸಾಲ, ತುರಿದ ಕ್ಯಾರೆಟ್ ,ರುಚಿಗೆ ತಕ್ಕ ಉಪ್ಪು ಹಾಕಿ ಮಿಶ್ರ ಮಾಡಿದರೆ ಗೊಜ್ಜು ರೀತಿಯಾಗುತ್ತದೆ. ಬೇಕಿದ್ದರೆ 1/4 ಗ್ಲಾಸ್ ಸ್ವಲ್ಪ ನೀರು ಹಾಕಬಹುದು.
5. ಇದಕ್ಕೆ ಪುಡಿ ಮಾಡಿದ ಇಡ್ಲಿ ಹಾಕಿ ಹಾಕಿ ಮಿಶ್ರ ಮಾಡಿ ತೆಂಗಿನ ತುರಿ ಹಾಕಿ 3-4 ನಿಮಿಷ ಬಿಸಿ ಮಾಡಿದರೆ ರುಚಿಕರವಾದ ಇಡ್ಲಿ ಉಪ್ಪಿಟ್ಟು ರೆಡಿ. ನಂತರ ಕತ್ತರಿಸಿದ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಬೇಕು.



Click it and Unblock the Notifications