Latest Updates
-
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್! -
ಮದರ್ಸ್ ಡೇ 2026: ಅಮ್ಮ ಮತ್ತು ಅತ್ತೆಯ ನಡುವೆ ಸಿಲುಕಿದ್ದೀರಾ? ಈ ಟ್ರಿಕ್ಸ್ ಫಾಲೋ ಮಾಡಿ! -
ಬಿರುಗಾಳಿ ಅಪ್ಪಳಿಸುವ ಮುನ್ನ ಎಚ್ಚರ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ ಕೆಲಸಗಳನ್ನು ಇಂದೇ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಮದರ್ಸ್ ಡೇ 2026: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ವಿಶೇಷ ಟ್ರೆಂಡ್ಸ್ ನೀವು ಮಿಸ್ ಮಾಡ್ಬೇಡಿ! -
ಬಿಸಿಲ ಝಳದಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಸಣ್ಣ ಬದಲಾವಣೆ ಸಾಕು!
ಮೆಂತ್ಯೆ ಸೊಪ್ಪಿನ ಕಡುಬು: ಉತ್ತರ ಕರ್ನಾಟಕದ ಖಾದ್ಯ

ಬೇಕಾಗುವ ಸಾಮಾಗ್ರಿಗಳು :
1/4 ಕೆ.ಜಿ. ಗೋಧಿ ಹಿಟ್ಟು
1 ಚಮಚ ಜೀರಿಗೆ
2 ಗೆಡ್ಡೆ ಬೆಳ್ಳುಳ್ಳಿ
2 ಚಮಚ ಖಾರದ ಪುಡಿ
1/2 ಚಮಚ ಅರಿಶಿಣ ಪುಡಿ
1/2 ಬಟ್ಟಲು ತುರಿದ ಒಣ ಕೊಬ್ಬರಿ
2 ಕಟ್ಟು ಮೆಂತ್ಯೆ ಸೊಪ್ಪು
1 ಬಟ್ಟಲು ಕಡಲೆ ಕಾಯಿ ಬೀಜ
ಒಗ್ಗರಣೆಗೆ ಎಣ್ಣೆ, ರುಚಿಗೆ ತಕ್ಕಷ್ಟು ಉಪ್ಪು, ಕರಿಬೇವು, ಕೊತ್ತಂಬರಿ ಸೊಪ್ಪು
* ಮೆಂತೆ ಸೊಪ್ಪನ್ನು ಸಣ್ಣಗೆ ಕತ್ತರಿಸಿ ನೀರಿನಲ್ಲಿ ತೊಳೆಯಬೇಕು
* ಕಡಲೆಕಾಯಿ ಬೀಜವನ್ನು ಉರಿದು ಪುಡಿ ಮಾಡಿಕೊಳ್ಳಬೇಕು
* ಬೆಳ್ಳುಳ್ಳಿಯನ್ನು ಸುಲಿದು, ಸಣ್ಣಗೆ ತುಂಡುಗಳಾಗಿ ಮಾಡಿ ಕೊಳ್ಳಬೇಕು.ಒಣ ಕೊಬ್ಬರಿಯನ್ನು ತುರಿಯಬೇಕು.
ತಯಾರಿಸುವ ವಿಧಾನ:
1. ಮೊದಲಿಗೆ, ಗೋಧಿ ಹಿಟ್ಟು, ಖಾರದ ಪುಡಿ, ಆರಿಶಿಣ, ಜೀರಿಗೆ, ಸ್ವಲ್ಪ ಉಪ್ಪು ಮಿಶ್ರಣ ಮಾಡಿ, ನಂತರ ನೀರು ಸೇರಿಸಿ, ಚಪಾತಿ ಹಿಟ್ಟಿನ ಹದಕ್ಕೆ ಕಲಿಸಿಕೊಳ್ಳಬೇಕು.
2. ಕಲಿಸಿದ ಹಿಟ್ಟಿನಿಂದ ಚಿಕ್ಕ ಚಿಕ್ಕ ಉಂಡೆಗಳನ್ನು ಮಾಡಿಕೊಳ್ಳಿ. ಮಾಡಿದ ಉಂಡೆಗಳನ್ನು ಅಂಗೈಯಲ್ಲಿ ಇಟ್ಟುಕೊಂಡು, ಬಿಲ್ಲೆ ಆಕಾರ ಬರುವ ಹಾಗೆ ಒತ್ತಬೇಕು. ನಂತರ ಒಂದು ಪಾತ್ರೆಯಲ್ಲಿ ನೀರನ್ನು ಕುದಿಸಿ, ಕುದಿಯುವ ನೀರಿನಲ್ಲಿ ಹಿಟ್ಟಿನ ಬಿಲ್ಲೆಗಳನ್ನು ಹಾಕಿ, ಐದು ನಿಮಿಷಗಳ ಕಾಲ ಕುದಿಸಬೇಕು. ನಂತರ ಉಳಿದ ನೀರನ್ನು ತೆಗೆದು, ಬಿಲ್ಲೆಗಳನ್ನು ಬೇರೆ ಪಾತ್ರೆಯಲ್ಲಿ ತೆಗೆದಿಡಿ.
3. ಒಗ್ಗರಣೆಗಾಗಿ, ಒಂದು ಬಾಣಲೆಯಲ್ಲಿ ಸ್ವಲ್ಪ ಎಣ್ಣೆಯನ್ನು ಹಾಕಿ, ಸಾಸಿವೆ, ಜೀರಿಗೆ, ಕರಿಬೇವು, ಸುಲಿದ ಬೆಳ್ಳುಳ್ಳಿ ತುಂಡುಗಳು, ಸಣ್ಣಗೆ ಹೆಚ್ಚಿದ ಮೆಂತ್ಯೆ ಸೊಪ್ಪನ್ನು ಹಾಕಿ, ಹಸಿ ಹೋಗುವವರೆಗೂ ಎಣ್ಣೆಯಲ್ಲಿ ಬಾಡಿಸಬೇಕು. ನಂತರ ಬೇಯಿಸಿದ ಬಿಲ್ಲೆಗಳನ್ನು ಮತ್ತು ರುಚಿಗೆ ತಕ್ಕಷ್ಟು ಖಾರ ಮತ್ತು ಉಪ್ಪನ್ನು ಸೇರಿಸಿ.
4. ನಂತರ ಕಡಲೆಕಾಯಿ ಬೀಜದ ಪುಡಿ, ಕೊಬ್ಬರಿ ತುರಿ ಹಾಕಿ ಚೆನ್ನಾಗಿ ಕಲಿಸ ಬೇಕು. ಕೊನೆಯಲ್ಲಿ ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪನ್ನು ಹಾಕಿ ಸವಿಯಲು ಕೊಡಿ. ಬೇಕಿದ್ದರೆ, ಟೊಮೆಟೊ ಸಾಸ್ ನೊಂದಿಗೆ ಸೇವಿಸಬಹುದು. ಬಿಸಿ ಇದ್ದಾಗಲೇ ತಿನ್ನಲು ಚೆನ್ನಾಗಿರುತ್ತದೆ.



Click it and Unblock the Notifications