Latest Updates
-
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು!
ಮೆಂತ್ಯೆ ಸೊಪ್ಪಿನ ಕಡುಬು: ಉತ್ತರ ಕರ್ನಾಟಕದ ಖಾದ್ಯ

ಬೇಕಾಗುವ ಸಾಮಾಗ್ರಿಗಳು :
1/4 ಕೆ.ಜಿ. ಗೋಧಿ ಹಿಟ್ಟು
1 ಚಮಚ ಜೀರಿಗೆ
2 ಗೆಡ್ಡೆ ಬೆಳ್ಳುಳ್ಳಿ
2 ಚಮಚ ಖಾರದ ಪುಡಿ
1/2 ಚಮಚ ಅರಿಶಿಣ ಪುಡಿ
1/2 ಬಟ್ಟಲು ತುರಿದ ಒಣ ಕೊಬ್ಬರಿ
2 ಕಟ್ಟು ಮೆಂತ್ಯೆ ಸೊಪ್ಪು
1 ಬಟ್ಟಲು ಕಡಲೆ ಕಾಯಿ ಬೀಜ
ಒಗ್ಗರಣೆಗೆ ಎಣ್ಣೆ, ರುಚಿಗೆ ತಕ್ಕಷ್ಟು ಉಪ್ಪು, ಕರಿಬೇವು, ಕೊತ್ತಂಬರಿ ಸೊಪ್ಪು
* ಮೆಂತೆ ಸೊಪ್ಪನ್ನು ಸಣ್ಣಗೆ ಕತ್ತರಿಸಿ ನೀರಿನಲ್ಲಿ ತೊಳೆಯಬೇಕು
* ಕಡಲೆಕಾಯಿ ಬೀಜವನ್ನು ಉರಿದು ಪುಡಿ ಮಾಡಿಕೊಳ್ಳಬೇಕು
* ಬೆಳ್ಳುಳ್ಳಿಯನ್ನು ಸುಲಿದು, ಸಣ್ಣಗೆ ತುಂಡುಗಳಾಗಿ ಮಾಡಿ ಕೊಳ್ಳಬೇಕು.ಒಣ ಕೊಬ್ಬರಿಯನ್ನು ತುರಿಯಬೇಕು.
ತಯಾರಿಸುವ ವಿಧಾನ:
1. ಮೊದಲಿಗೆ, ಗೋಧಿ ಹಿಟ್ಟು, ಖಾರದ ಪುಡಿ, ಆರಿಶಿಣ, ಜೀರಿಗೆ, ಸ್ವಲ್ಪ ಉಪ್ಪು ಮಿಶ್ರಣ ಮಾಡಿ, ನಂತರ ನೀರು ಸೇರಿಸಿ, ಚಪಾತಿ ಹಿಟ್ಟಿನ ಹದಕ್ಕೆ ಕಲಿಸಿಕೊಳ್ಳಬೇಕು.
2. ಕಲಿಸಿದ ಹಿಟ್ಟಿನಿಂದ ಚಿಕ್ಕ ಚಿಕ್ಕ ಉಂಡೆಗಳನ್ನು ಮಾಡಿಕೊಳ್ಳಿ. ಮಾಡಿದ ಉಂಡೆಗಳನ್ನು ಅಂಗೈಯಲ್ಲಿ ಇಟ್ಟುಕೊಂಡು, ಬಿಲ್ಲೆ ಆಕಾರ ಬರುವ ಹಾಗೆ ಒತ್ತಬೇಕು. ನಂತರ ಒಂದು ಪಾತ್ರೆಯಲ್ಲಿ ನೀರನ್ನು ಕುದಿಸಿ, ಕುದಿಯುವ ನೀರಿನಲ್ಲಿ ಹಿಟ್ಟಿನ ಬಿಲ್ಲೆಗಳನ್ನು ಹಾಕಿ, ಐದು ನಿಮಿಷಗಳ ಕಾಲ ಕುದಿಸಬೇಕು. ನಂತರ ಉಳಿದ ನೀರನ್ನು ತೆಗೆದು, ಬಿಲ್ಲೆಗಳನ್ನು ಬೇರೆ ಪಾತ್ರೆಯಲ್ಲಿ ತೆಗೆದಿಡಿ.
3. ಒಗ್ಗರಣೆಗಾಗಿ, ಒಂದು ಬಾಣಲೆಯಲ್ಲಿ ಸ್ವಲ್ಪ ಎಣ್ಣೆಯನ್ನು ಹಾಕಿ, ಸಾಸಿವೆ, ಜೀರಿಗೆ, ಕರಿಬೇವು, ಸುಲಿದ ಬೆಳ್ಳುಳ್ಳಿ ತುಂಡುಗಳು, ಸಣ್ಣಗೆ ಹೆಚ್ಚಿದ ಮೆಂತ್ಯೆ ಸೊಪ್ಪನ್ನು ಹಾಕಿ, ಹಸಿ ಹೋಗುವವರೆಗೂ ಎಣ್ಣೆಯಲ್ಲಿ ಬಾಡಿಸಬೇಕು. ನಂತರ ಬೇಯಿಸಿದ ಬಿಲ್ಲೆಗಳನ್ನು ಮತ್ತು ರುಚಿಗೆ ತಕ್ಕಷ್ಟು ಖಾರ ಮತ್ತು ಉಪ್ಪನ್ನು ಸೇರಿಸಿ.
4. ನಂತರ ಕಡಲೆಕಾಯಿ ಬೀಜದ ಪುಡಿ, ಕೊಬ್ಬರಿ ತುರಿ ಹಾಕಿ ಚೆನ್ನಾಗಿ ಕಲಿಸ ಬೇಕು. ಕೊನೆಯಲ್ಲಿ ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪನ್ನು ಹಾಕಿ ಸವಿಯಲು ಕೊಡಿ. ಬೇಕಿದ್ದರೆ, ಟೊಮೆಟೊ ಸಾಸ್ ನೊಂದಿಗೆ ಸೇವಿಸಬಹುದು. ಬಿಸಿ ಇದ್ದಾಗಲೇ ತಿನ್ನಲು ಚೆನ್ನಾಗಿರುತ್ತದೆ.



Click it and Unblock the Notifications