Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಮೆಂತ್ಯೆ ಸೊಪ್ಪಿನ ಕಡುಬು: ಉತ್ತರ ಕರ್ನಾಟಕದ ಖಾದ್ಯ

ಬೇಕಾಗುವ ಸಾಮಾಗ್ರಿಗಳು :
1/4 ಕೆ.ಜಿ. ಗೋಧಿ ಹಿಟ್ಟು
1 ಚಮಚ ಜೀರಿಗೆ
2 ಗೆಡ್ಡೆ ಬೆಳ್ಳುಳ್ಳಿ
2 ಚಮಚ ಖಾರದ ಪುಡಿ
1/2 ಚಮಚ ಅರಿಶಿಣ ಪುಡಿ
1/2 ಬಟ್ಟಲು ತುರಿದ ಒಣ ಕೊಬ್ಬರಿ
2 ಕಟ್ಟು ಮೆಂತ್ಯೆ ಸೊಪ್ಪು
1 ಬಟ್ಟಲು ಕಡಲೆ ಕಾಯಿ ಬೀಜ
ಒಗ್ಗರಣೆಗೆ ಎಣ್ಣೆ, ರುಚಿಗೆ ತಕ್ಕಷ್ಟು ಉಪ್ಪು, ಕರಿಬೇವು, ಕೊತ್ತಂಬರಿ ಸೊಪ್ಪು
* ಮೆಂತೆ ಸೊಪ್ಪನ್ನು ಸಣ್ಣಗೆ ಕತ್ತರಿಸಿ ನೀರಿನಲ್ಲಿ ತೊಳೆಯಬೇಕು
* ಕಡಲೆಕಾಯಿ ಬೀಜವನ್ನು ಉರಿದು ಪುಡಿ ಮಾಡಿಕೊಳ್ಳಬೇಕು
* ಬೆಳ್ಳುಳ್ಳಿಯನ್ನು ಸುಲಿದು, ಸಣ್ಣಗೆ ತುಂಡುಗಳಾಗಿ ಮಾಡಿ ಕೊಳ್ಳಬೇಕು.ಒಣ ಕೊಬ್ಬರಿಯನ್ನು ತುರಿಯಬೇಕು.
ತಯಾರಿಸುವ ವಿಧಾನ:
1. ಮೊದಲಿಗೆ, ಗೋಧಿ ಹಿಟ್ಟು, ಖಾರದ ಪುಡಿ, ಆರಿಶಿಣ, ಜೀರಿಗೆ, ಸ್ವಲ್ಪ ಉಪ್ಪು ಮಿಶ್ರಣ ಮಾಡಿ, ನಂತರ ನೀರು ಸೇರಿಸಿ, ಚಪಾತಿ ಹಿಟ್ಟಿನ ಹದಕ್ಕೆ ಕಲಿಸಿಕೊಳ್ಳಬೇಕು.
2. ಕಲಿಸಿದ ಹಿಟ್ಟಿನಿಂದ ಚಿಕ್ಕ ಚಿಕ್ಕ ಉಂಡೆಗಳನ್ನು ಮಾಡಿಕೊಳ್ಳಿ. ಮಾಡಿದ ಉಂಡೆಗಳನ್ನು ಅಂಗೈಯಲ್ಲಿ ಇಟ್ಟುಕೊಂಡು, ಬಿಲ್ಲೆ ಆಕಾರ ಬರುವ ಹಾಗೆ ಒತ್ತಬೇಕು. ನಂತರ ಒಂದು ಪಾತ್ರೆಯಲ್ಲಿ ನೀರನ್ನು ಕುದಿಸಿ, ಕುದಿಯುವ ನೀರಿನಲ್ಲಿ ಹಿಟ್ಟಿನ ಬಿಲ್ಲೆಗಳನ್ನು ಹಾಕಿ, ಐದು ನಿಮಿಷಗಳ ಕಾಲ ಕುದಿಸಬೇಕು. ನಂತರ ಉಳಿದ ನೀರನ್ನು ತೆಗೆದು, ಬಿಲ್ಲೆಗಳನ್ನು ಬೇರೆ ಪಾತ್ರೆಯಲ್ಲಿ ತೆಗೆದಿಡಿ.
3. ಒಗ್ಗರಣೆಗಾಗಿ, ಒಂದು ಬಾಣಲೆಯಲ್ಲಿ ಸ್ವಲ್ಪ ಎಣ್ಣೆಯನ್ನು ಹಾಕಿ, ಸಾಸಿವೆ, ಜೀರಿಗೆ, ಕರಿಬೇವು, ಸುಲಿದ ಬೆಳ್ಳುಳ್ಳಿ ತುಂಡುಗಳು, ಸಣ್ಣಗೆ ಹೆಚ್ಚಿದ ಮೆಂತ್ಯೆ ಸೊಪ್ಪನ್ನು ಹಾಕಿ, ಹಸಿ ಹೋಗುವವರೆಗೂ ಎಣ್ಣೆಯಲ್ಲಿ ಬಾಡಿಸಬೇಕು. ನಂತರ ಬೇಯಿಸಿದ ಬಿಲ್ಲೆಗಳನ್ನು ಮತ್ತು ರುಚಿಗೆ ತಕ್ಕಷ್ಟು ಖಾರ ಮತ್ತು ಉಪ್ಪನ್ನು ಸೇರಿಸಿ.
4. ನಂತರ ಕಡಲೆಕಾಯಿ ಬೀಜದ ಪುಡಿ, ಕೊಬ್ಬರಿ ತುರಿ ಹಾಕಿ ಚೆನ್ನಾಗಿ ಕಲಿಸ ಬೇಕು. ಕೊನೆಯಲ್ಲಿ ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪನ್ನು ಹಾಕಿ ಸವಿಯಲು ಕೊಡಿ. ಬೇಕಿದ್ದರೆ, ಟೊಮೆಟೊ ಸಾಸ್ ನೊಂದಿಗೆ ಸೇವಿಸಬಹುದು. ಬಿಸಿ ಇದ್ದಾಗಲೇ ತಿನ್ನಲು ಚೆನ್ನಾಗಿರುತ್ತದೆ.



Click it and Unblock the Notifications