Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಹೊಟ್ಟೆ ತುಂಬಲು ಈ ವಡೆ ಒಂದು ಸಾಕು!

ತುಂಬಾ ಹೊಟ್ಟೆ ಹಸಿವು ಆದಾಗ ಈ ವಡೆ ಒಂದು ತಿಂದರೆ ಸಾಕು ಹೊಟ್ಟೆ ತುಂಬುವುದು. ಆದ್ದರಿಂದ ಸಾಯಾಂಕಾಲದ ತಿಂಡಿಗೆ ಸೂಕ್ತವಾದ ವಡೆಯಾಗಿದೆ. ಇದನ್ನು ಸುಲಭವಾಗಿ ಮಾಡಬಹುದಾಗಿದ್ದು ಮಾಡುವ ವಿಧಾನ ನೋಡಿ ಇಲ್ಲಿದೆ.
ಬೇಕಾಗುವ ಸಾಮಾಗ್ರಿಗಳು:
* 2 ಕಪ್ ಕಡಲೆ ಬೇಳೆ 1 ಕಪ್
* ಈರುಳ್ಳಿ 3
* 1/4 ಕಪ್ ಗಿಂತ ಸ್ವಲ್ಪ ಕಡಿಮೆ ಉದ್ದಿನ ಬೇಳೆ
* ಶುಂಠಿ
* ಕರಿಬೇವು
* ಕೊಬ್ಬರಿ ತೆಂಗಿನ ಕಾಯಿಯ 1/2 ದಷ್ಟು
* ಕತ್ತರಿಸಿದ ಹಸಿಮೆಣಸಿನ ಕಾಯಿ 3-4
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಕಡಲೆ ಬೇಳೆ ಸ್ವಲ್ಪವೇ ಸ್ವಲ್ಪ ಉದ್ದಿನಬೇಳೆಯನ್ನು ನೀರಿನಲ್ಲಿ ಒಂದು ಗಂಟೆಯಷ್ಟು ಕಾಲ ನೆನೆಸಿಡಬೇಕು. ಉದ್ದಿನಬೇಳೆ ಸ್ವಲ್ಪಕ್ಕಿಂತ ಜಾಸ್ತಿ ಹಾಕಬಾರದು. ನಂತರ ಮಿಕ್ಸಿಯಲ್ಲಿ ಹಾಕಿ ಗಟ್ಟಿಯಾಗಿ ನುಣ್ಣಗೆ ಅರೆಯಬೇಕು.
2. ಈಗ ಕೊಬ್ಬರಿಯನ್ನು ಚಿಕ್ಕ ತುಂಡುಗಳಾಗಿ ಕತ್ತರಿಸಿಬೇಕು.
3. ಅದಕ್ಕೆ ಶುಂಠಿ, ಕರಿಬೇವು, ಕೊಬ್ಬರಿ ತೆಂಗಿನಕಾಯಿ ತುಂಡು, ಕತ್ತರಿಸಿದ ಹಸಿ ಮೆಣಸಿನ ಕಾಯಿ ಹಾಕಿ ಇವೆಲ್ಲವೂ ಸಣ್ಣಗೆ ಕತ್ತರಿಸಿರಬೇಕು. ಆಮೇಲೆ ಉಪ್ಪು ಹಾಕಿ ಕಲೆಸಿ.
4. ಒಲೆಯ ಮೇಲೆ ಇಟ್ಟ ಎಣ್ಣೆ ಹದ ಕಾವು ಬಂದ ಕೂಡಲೇ, ಕಲಸಿಟ್ಟ ಹಿಟ್ಟನ್ನು ಸ್ವಲ್ಪ ದೊಡ್ಡ ಉಂಡೆ ಮಾಡಿ, ಕೈಯಲ್ಲಿ ತಟ್ಟಿ ಎಣ್ಣೆಗೆ ಹಾಕಬೇಕು. ವಡೆ ಕಂದು ಬಣ್ಣಕ್ಕೆ ಬರುವಾಗ ತೆಗೆಯಬೇಕು. ತುಂಬಾ ಕರಿದರೆ ಈರುಳ್ಳಿ ಕಹಿಯಾಗುವುದು.
ಸಲಹೆ:
1. ವಡೆ ಗರಿಗರಿಯಾಗಿ ಬೇಕೆಂದು ಬಯಸಿದರೆ ಈರುಳ್ಳಿ ಹಾಕದೇ ಬೇಕಾದರೇ ತಯಾರಿಸಬಹುದು. ಆದರೆ ಈರುಳ್ಳಿ ಹಾಕಿದ ವಡೆಗೆ ರುಚಿ ಜಾಸ್ತಿ.
2. ಈರುಳ್ಳಿ ಹಾಕಿದರೆ, ಮಾರನೇ ದಿನ ಇಟ್ಟ ವಡೆ ತಿನ್ನಲು ಕಷ್ಟ, ತುಂಬಾ ಗಟ್ಟಿಯಾಗಿರುತ್ತದೆ. ಈರುಳ್ಳಿ ಹಾಕದಿದ್ದರೆ ಮೂರು ದಿನ ವಡೆ ಇಟ್ಟರೂ ಹಾಳಾಗದು.
3. ಶುಂಠಿ ಹಾಕಿದರೆ ಇಂಗು ಹಾಕುವ ಅವಶ್ಯಕತೆಯಿಲ್ಲ.
4. ಕೆಲವರು ಉದ್ದಿನ ಬೇಳೆ ಹಾಕದೆ ಮಾಡುತ್ತಾರೆ, ಅದರೆ ಸ್ವಲ್ಪ ಉದ್ದಿನ ಬೇಳೆ ಹಾಕದಿದ್ದರೆ ವಡೆ ತುಂಬಾ ಗಟ್ಟಿಯಾಗುವುದು
5. ಬೇಳೆಯನ್ನು ಕನಿಷ್ಠ ಒಂದು ಗಂಟೆಯಾದರೂ ನೆನೆ ಹಾಕಿರಬೇಕು.



Click it and Unblock the Notifications