Latest Updates
-
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ!
ಹೊಟ್ಟೆ ತುಂಬಲು ಈ ವಡೆ ಒಂದು ಸಾಕು!

ತುಂಬಾ ಹೊಟ್ಟೆ ಹಸಿವು ಆದಾಗ ಈ ವಡೆ ಒಂದು ತಿಂದರೆ ಸಾಕು ಹೊಟ್ಟೆ ತುಂಬುವುದು. ಆದ್ದರಿಂದ ಸಾಯಾಂಕಾಲದ ತಿಂಡಿಗೆ ಸೂಕ್ತವಾದ ವಡೆಯಾಗಿದೆ. ಇದನ್ನು ಸುಲಭವಾಗಿ ಮಾಡಬಹುದಾಗಿದ್ದು ಮಾಡುವ ವಿಧಾನ ನೋಡಿ ಇಲ್ಲಿದೆ.
ಬೇಕಾಗುವ ಸಾಮಾಗ್ರಿಗಳು:
* 2 ಕಪ್ ಕಡಲೆ ಬೇಳೆ 1 ಕಪ್
* ಈರುಳ್ಳಿ 3
* 1/4 ಕಪ್ ಗಿಂತ ಸ್ವಲ್ಪ ಕಡಿಮೆ ಉದ್ದಿನ ಬೇಳೆ
* ಶುಂಠಿ
* ಕರಿಬೇವು
* ಕೊಬ್ಬರಿ ತೆಂಗಿನ ಕಾಯಿಯ 1/2 ದಷ್ಟು
* ಕತ್ತರಿಸಿದ ಹಸಿಮೆಣಸಿನ ಕಾಯಿ 3-4
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಕಡಲೆ ಬೇಳೆ ಸ್ವಲ್ಪವೇ ಸ್ವಲ್ಪ ಉದ್ದಿನಬೇಳೆಯನ್ನು ನೀರಿನಲ್ಲಿ ಒಂದು ಗಂಟೆಯಷ್ಟು ಕಾಲ ನೆನೆಸಿಡಬೇಕು. ಉದ್ದಿನಬೇಳೆ ಸ್ವಲ್ಪಕ್ಕಿಂತ ಜಾಸ್ತಿ ಹಾಕಬಾರದು. ನಂತರ ಮಿಕ್ಸಿಯಲ್ಲಿ ಹಾಕಿ ಗಟ್ಟಿಯಾಗಿ ನುಣ್ಣಗೆ ಅರೆಯಬೇಕು.
2. ಈಗ ಕೊಬ್ಬರಿಯನ್ನು ಚಿಕ್ಕ ತುಂಡುಗಳಾಗಿ ಕತ್ತರಿಸಿಬೇಕು.
3. ಅದಕ್ಕೆ ಶುಂಠಿ, ಕರಿಬೇವು, ಕೊಬ್ಬರಿ ತೆಂಗಿನಕಾಯಿ ತುಂಡು, ಕತ್ತರಿಸಿದ ಹಸಿ ಮೆಣಸಿನ ಕಾಯಿ ಹಾಕಿ ಇವೆಲ್ಲವೂ ಸಣ್ಣಗೆ ಕತ್ತರಿಸಿರಬೇಕು. ಆಮೇಲೆ ಉಪ್ಪು ಹಾಕಿ ಕಲೆಸಿ.
4. ಒಲೆಯ ಮೇಲೆ ಇಟ್ಟ ಎಣ್ಣೆ ಹದ ಕಾವು ಬಂದ ಕೂಡಲೇ, ಕಲಸಿಟ್ಟ ಹಿಟ್ಟನ್ನು ಸ್ವಲ್ಪ ದೊಡ್ಡ ಉಂಡೆ ಮಾಡಿ, ಕೈಯಲ್ಲಿ ತಟ್ಟಿ ಎಣ್ಣೆಗೆ ಹಾಕಬೇಕು. ವಡೆ ಕಂದು ಬಣ್ಣಕ್ಕೆ ಬರುವಾಗ ತೆಗೆಯಬೇಕು. ತುಂಬಾ ಕರಿದರೆ ಈರುಳ್ಳಿ ಕಹಿಯಾಗುವುದು.
ಸಲಹೆ:
1. ವಡೆ ಗರಿಗರಿಯಾಗಿ ಬೇಕೆಂದು ಬಯಸಿದರೆ ಈರುಳ್ಳಿ ಹಾಕದೇ ಬೇಕಾದರೇ ತಯಾರಿಸಬಹುದು. ಆದರೆ ಈರುಳ್ಳಿ ಹಾಕಿದ ವಡೆಗೆ ರುಚಿ ಜಾಸ್ತಿ.
2. ಈರುಳ್ಳಿ ಹಾಕಿದರೆ, ಮಾರನೇ ದಿನ ಇಟ್ಟ ವಡೆ ತಿನ್ನಲು ಕಷ್ಟ, ತುಂಬಾ ಗಟ್ಟಿಯಾಗಿರುತ್ತದೆ. ಈರುಳ್ಳಿ ಹಾಕದಿದ್ದರೆ ಮೂರು ದಿನ ವಡೆ ಇಟ್ಟರೂ ಹಾಳಾಗದು.
3. ಶುಂಠಿ ಹಾಕಿದರೆ ಇಂಗು ಹಾಕುವ ಅವಶ್ಯಕತೆಯಿಲ್ಲ.
4. ಕೆಲವರು ಉದ್ದಿನ ಬೇಳೆ ಹಾಕದೆ ಮಾಡುತ್ತಾರೆ, ಅದರೆ ಸ್ವಲ್ಪ ಉದ್ದಿನ ಬೇಳೆ ಹಾಕದಿದ್ದರೆ ವಡೆ ತುಂಬಾ ಗಟ್ಟಿಯಾಗುವುದು
5. ಬೇಳೆಯನ್ನು ಕನಿಷ್ಠ ಒಂದು ಗಂಟೆಯಾದರೂ ನೆನೆ ಹಾಕಿರಬೇಕು.



Click it and Unblock the Notifications