Latest Updates
-
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ!
ಹೊಟ್ಟೆ ತುಂಬಲು ಈ ವಡೆ ಒಂದು ಸಾಕು!

ತುಂಬಾ ಹೊಟ್ಟೆ ಹಸಿವು ಆದಾಗ ಈ ವಡೆ ಒಂದು ತಿಂದರೆ ಸಾಕು ಹೊಟ್ಟೆ ತುಂಬುವುದು. ಆದ್ದರಿಂದ ಸಾಯಾಂಕಾಲದ ತಿಂಡಿಗೆ ಸೂಕ್ತವಾದ ವಡೆಯಾಗಿದೆ. ಇದನ್ನು ಸುಲಭವಾಗಿ ಮಾಡಬಹುದಾಗಿದ್ದು ಮಾಡುವ ವಿಧಾನ ನೋಡಿ ಇಲ್ಲಿದೆ.
ಬೇಕಾಗುವ ಸಾಮಾಗ್ರಿಗಳು:
* 2 ಕಪ್ ಕಡಲೆ ಬೇಳೆ 1 ಕಪ್
* ಈರುಳ್ಳಿ 3
* 1/4 ಕಪ್ ಗಿಂತ ಸ್ವಲ್ಪ ಕಡಿಮೆ ಉದ್ದಿನ ಬೇಳೆ
* ಶುಂಠಿ
* ಕರಿಬೇವು
* ಕೊಬ್ಬರಿ ತೆಂಗಿನ ಕಾಯಿಯ 1/2 ದಷ್ಟು
* ಕತ್ತರಿಸಿದ ಹಸಿಮೆಣಸಿನ ಕಾಯಿ 3-4
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಕಡಲೆ ಬೇಳೆ ಸ್ವಲ್ಪವೇ ಸ್ವಲ್ಪ ಉದ್ದಿನಬೇಳೆಯನ್ನು ನೀರಿನಲ್ಲಿ ಒಂದು ಗಂಟೆಯಷ್ಟು ಕಾಲ ನೆನೆಸಿಡಬೇಕು. ಉದ್ದಿನಬೇಳೆ ಸ್ವಲ್ಪಕ್ಕಿಂತ ಜಾಸ್ತಿ ಹಾಕಬಾರದು. ನಂತರ ಮಿಕ್ಸಿಯಲ್ಲಿ ಹಾಕಿ ಗಟ್ಟಿಯಾಗಿ ನುಣ್ಣಗೆ ಅರೆಯಬೇಕು.
2. ಈಗ ಕೊಬ್ಬರಿಯನ್ನು ಚಿಕ್ಕ ತುಂಡುಗಳಾಗಿ ಕತ್ತರಿಸಿಬೇಕು.
3. ಅದಕ್ಕೆ ಶುಂಠಿ, ಕರಿಬೇವು, ಕೊಬ್ಬರಿ ತೆಂಗಿನಕಾಯಿ ತುಂಡು, ಕತ್ತರಿಸಿದ ಹಸಿ ಮೆಣಸಿನ ಕಾಯಿ ಹಾಕಿ ಇವೆಲ್ಲವೂ ಸಣ್ಣಗೆ ಕತ್ತರಿಸಿರಬೇಕು. ಆಮೇಲೆ ಉಪ್ಪು ಹಾಕಿ ಕಲೆಸಿ.
4. ಒಲೆಯ ಮೇಲೆ ಇಟ್ಟ ಎಣ್ಣೆ ಹದ ಕಾವು ಬಂದ ಕೂಡಲೇ, ಕಲಸಿಟ್ಟ ಹಿಟ್ಟನ್ನು ಸ್ವಲ್ಪ ದೊಡ್ಡ ಉಂಡೆ ಮಾಡಿ, ಕೈಯಲ್ಲಿ ತಟ್ಟಿ ಎಣ್ಣೆಗೆ ಹಾಕಬೇಕು. ವಡೆ ಕಂದು ಬಣ್ಣಕ್ಕೆ ಬರುವಾಗ ತೆಗೆಯಬೇಕು. ತುಂಬಾ ಕರಿದರೆ ಈರುಳ್ಳಿ ಕಹಿಯಾಗುವುದು.
ಸಲಹೆ:
1. ವಡೆ ಗರಿಗರಿಯಾಗಿ ಬೇಕೆಂದು ಬಯಸಿದರೆ ಈರುಳ್ಳಿ ಹಾಕದೇ ಬೇಕಾದರೇ ತಯಾರಿಸಬಹುದು. ಆದರೆ ಈರುಳ್ಳಿ ಹಾಕಿದ ವಡೆಗೆ ರುಚಿ ಜಾಸ್ತಿ.
2. ಈರುಳ್ಳಿ ಹಾಕಿದರೆ, ಮಾರನೇ ದಿನ ಇಟ್ಟ ವಡೆ ತಿನ್ನಲು ಕಷ್ಟ, ತುಂಬಾ ಗಟ್ಟಿಯಾಗಿರುತ್ತದೆ. ಈರುಳ್ಳಿ ಹಾಕದಿದ್ದರೆ ಮೂರು ದಿನ ವಡೆ ಇಟ್ಟರೂ ಹಾಳಾಗದು.
3. ಶುಂಠಿ ಹಾಕಿದರೆ ಇಂಗು ಹಾಕುವ ಅವಶ್ಯಕತೆಯಿಲ್ಲ.
4. ಕೆಲವರು ಉದ್ದಿನ ಬೇಳೆ ಹಾಕದೆ ಮಾಡುತ್ತಾರೆ, ಅದರೆ ಸ್ವಲ್ಪ ಉದ್ದಿನ ಬೇಳೆ ಹಾಕದಿದ್ದರೆ ವಡೆ ತುಂಬಾ ಗಟ್ಟಿಯಾಗುವುದು
5. ಬೇಳೆಯನ್ನು ಕನಿಷ್ಠ ಒಂದು ಗಂಟೆಯಾದರೂ ನೆನೆ ಹಾಕಿರಬೇಕು.



Click it and Unblock the Notifications