Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಹೊಟ್ಟೆ ತುಂಬಲು ಈ ವಡೆ ಒಂದು ಸಾಕು!

ತುಂಬಾ ಹೊಟ್ಟೆ ಹಸಿವು ಆದಾಗ ಈ ವಡೆ ಒಂದು ತಿಂದರೆ ಸಾಕು ಹೊಟ್ಟೆ ತುಂಬುವುದು. ಆದ್ದರಿಂದ ಸಾಯಾಂಕಾಲದ ತಿಂಡಿಗೆ ಸೂಕ್ತವಾದ ವಡೆಯಾಗಿದೆ. ಇದನ್ನು ಸುಲಭವಾಗಿ ಮಾಡಬಹುದಾಗಿದ್ದು ಮಾಡುವ ವಿಧಾನ ನೋಡಿ ಇಲ್ಲಿದೆ.
ಬೇಕಾಗುವ ಸಾಮಾಗ್ರಿಗಳು:
* 2 ಕಪ್ ಕಡಲೆ ಬೇಳೆ 1 ಕಪ್
* ಈರುಳ್ಳಿ 3
* 1/4 ಕಪ್ ಗಿಂತ ಸ್ವಲ್ಪ ಕಡಿಮೆ ಉದ್ದಿನ ಬೇಳೆ
* ಶುಂಠಿ
* ಕರಿಬೇವು
* ಕೊಬ್ಬರಿ ತೆಂಗಿನ ಕಾಯಿಯ 1/2 ದಷ್ಟು
* ಕತ್ತರಿಸಿದ ಹಸಿಮೆಣಸಿನ ಕಾಯಿ 3-4
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಕಡಲೆ ಬೇಳೆ ಸ್ವಲ್ಪವೇ ಸ್ವಲ್ಪ ಉದ್ದಿನಬೇಳೆಯನ್ನು ನೀರಿನಲ್ಲಿ ಒಂದು ಗಂಟೆಯಷ್ಟು ಕಾಲ ನೆನೆಸಿಡಬೇಕು. ಉದ್ದಿನಬೇಳೆ ಸ್ವಲ್ಪಕ್ಕಿಂತ ಜಾಸ್ತಿ ಹಾಕಬಾರದು. ನಂತರ ಮಿಕ್ಸಿಯಲ್ಲಿ ಹಾಕಿ ಗಟ್ಟಿಯಾಗಿ ನುಣ್ಣಗೆ ಅರೆಯಬೇಕು.
2. ಈಗ ಕೊಬ್ಬರಿಯನ್ನು ಚಿಕ್ಕ ತುಂಡುಗಳಾಗಿ ಕತ್ತರಿಸಿಬೇಕು.
3. ಅದಕ್ಕೆ ಶುಂಠಿ, ಕರಿಬೇವು, ಕೊಬ್ಬರಿ ತೆಂಗಿನಕಾಯಿ ತುಂಡು, ಕತ್ತರಿಸಿದ ಹಸಿ ಮೆಣಸಿನ ಕಾಯಿ ಹಾಕಿ ಇವೆಲ್ಲವೂ ಸಣ್ಣಗೆ ಕತ್ತರಿಸಿರಬೇಕು. ಆಮೇಲೆ ಉಪ್ಪು ಹಾಕಿ ಕಲೆಸಿ.
4. ಒಲೆಯ ಮೇಲೆ ಇಟ್ಟ ಎಣ್ಣೆ ಹದ ಕಾವು ಬಂದ ಕೂಡಲೇ, ಕಲಸಿಟ್ಟ ಹಿಟ್ಟನ್ನು ಸ್ವಲ್ಪ ದೊಡ್ಡ ಉಂಡೆ ಮಾಡಿ, ಕೈಯಲ್ಲಿ ತಟ್ಟಿ ಎಣ್ಣೆಗೆ ಹಾಕಬೇಕು. ವಡೆ ಕಂದು ಬಣ್ಣಕ್ಕೆ ಬರುವಾಗ ತೆಗೆಯಬೇಕು. ತುಂಬಾ ಕರಿದರೆ ಈರುಳ್ಳಿ ಕಹಿಯಾಗುವುದು.
ಸಲಹೆ:
1. ವಡೆ ಗರಿಗರಿಯಾಗಿ ಬೇಕೆಂದು ಬಯಸಿದರೆ ಈರುಳ್ಳಿ ಹಾಕದೇ ಬೇಕಾದರೇ ತಯಾರಿಸಬಹುದು. ಆದರೆ ಈರುಳ್ಳಿ ಹಾಕಿದ ವಡೆಗೆ ರುಚಿ ಜಾಸ್ತಿ.
2. ಈರುಳ್ಳಿ ಹಾಕಿದರೆ, ಮಾರನೇ ದಿನ ಇಟ್ಟ ವಡೆ ತಿನ್ನಲು ಕಷ್ಟ, ತುಂಬಾ ಗಟ್ಟಿಯಾಗಿರುತ್ತದೆ. ಈರುಳ್ಳಿ ಹಾಕದಿದ್ದರೆ ಮೂರು ದಿನ ವಡೆ ಇಟ್ಟರೂ ಹಾಳಾಗದು.
3. ಶುಂಠಿ ಹಾಕಿದರೆ ಇಂಗು ಹಾಕುವ ಅವಶ್ಯಕತೆಯಿಲ್ಲ.
4. ಕೆಲವರು ಉದ್ದಿನ ಬೇಳೆ ಹಾಕದೆ ಮಾಡುತ್ತಾರೆ, ಅದರೆ ಸ್ವಲ್ಪ ಉದ್ದಿನ ಬೇಳೆ ಹಾಕದಿದ್ದರೆ ವಡೆ ತುಂಬಾ ಗಟ್ಟಿಯಾಗುವುದು
5. ಬೇಳೆಯನ್ನು ಕನಿಷ್ಠ ಒಂದು ಗಂಟೆಯಾದರೂ ನೆನೆ ಹಾಕಿರಬೇಕು.



Click it and Unblock the Notifications











