Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಅಯ್ಯಪ್ಪಸ್ವಾಮಿ ಪೂಜೆಗೆ ಅರವಣ ಪಾಯಸ ಮಾಡುವುದು ಹೇಗೆ?
ಜನವರಿ 14ಕ್ಕೆ ಮಕರವಿಳಕ್ಕು, ಈ ದಿನ ಅಯ್ಯಪ್ಪಸ್ವಾಮಿ ತನ್ನ ಭಕ್ತರಿಗೆ ನಕ್ಷತ್ರ ರೂಪದಲ್ಲಿ ದರ್ಶನ ನೀಡುತ್ತಾನೆ ಎಂಬುವುದು ನಂಬಿಕೆ, ಅದನ್ನು ಮಕರವಿಳಕ್ಕು ಎಂದು ಕರೆಯಲಾಗುವುದು ಈ ಮಕರವಿಳಕ್ಕು ದರ್ಶನ ಪಡೆಯಲೆಂದೇ ಲಕ್ಷಾಂತರ ಭಕ್ತರು ಕಠಿಣ ವ್ರತ ನಿಯಮ ಪಾಲಿಸಿ ಕೇರಳದ ಶಬರಿಮಲೆಗೆ ಭೇಟಿ ನೀಡುತ್ತಾರೆ.
ಜನವರಿ ಮಾಸವೆಂದರೆ ಅಯ್ಯಪ್ಪಸ್ವಾಮಿ ಪೂಜೆಯ ಸಮಯ. ಭಜನೆ, ಕಟ್ಟು ತುಂಬಿಸಿ ಹೋಗುವುದು ಹೀಗೆ ಧಾರ್ಮಿಕ ಪೂಜೆಗಳು ನಡೆಯುತ್ತಿರುತ್ತದೆ. ಈ ಪೂಜೆಯಲ್ಲಿ ನೀವು ಅರವಣ ಪಾಯಸ ತಯಾರಿಸಿ ನೈವೇದ್ಯವಾಗಿ ಅರ್ಪಿಸಬಹುದು.

ಅರವಣ ಪಾಯಸವೆಂಬುವುದು ಅಯ್ಯಪ್ಪಸ್ವಾಮಿ ಕ್ಷೇತ್ರದಲ್ಲಿ ದೊರೆಯುವ ವಿಶೇಷ ಪ್ರಸಾದವಾಗಿದೆ.ಇದೇ ರುಚಿಯಲ್ಲಿ ಮನೆಯಲ್ಲಿ ನಡೆಸುವ ಅಯ್ಯಪ್ಪಸ್ವಾಮಿ ಪೂಜೆಯಲ್ಲಿಯೂ ಪಾಯಸ ತಯಾರಿಸಬಹುದಾಗಿದ್ದು ಅದರ ರೆಸಿಪಿ ನೋಡಿ ಇಲ್ಲಿದೆ:
1 ಕಪ್ ಮಟ್ಟಾರೈಸ್
1 ಕಪ್ ತುಪ್ಪ2 ಕಪ್ ನೀರು
ಸ್ವಲ್ಪ ತೆಂಗಿನಕಾಯಿ ತುಂಡು(ಒಂದು ತೆಂಗಿನಕಾಯಿಯ ತುಂಡು)
ಬೆಲ್ಲ 1 ಕಪ್
ಒಣ ಶುಂಠಿ (ಪುಡಿ ಮಾಡಿದ್ದು 1/4 ಚಮಚ)
4-5 ಏಲಕ್ಕಿ
ನೀರು 3 ಕಪ್
ಅರವಣ ಪಾಯಸ ಮಾಡುವುದು ಹೇಗೆ?
- ನೀವು ಈ ಪಾಯಸ ಮಾಡಲು ಉರುಳಿ ಬಳಸಿ (ದಪ್ಪ ತಳವಿರುವ ಪಾತ್ರೆ)
- ಈಗ ಪಾತ್ರೆ ಬಿಸಿ ಮಾಡಿ ಅದಕ್ಕೆ ತುಪ್ಪ ಹಾಕಿ ಬಿಸಿ ಮಾಡಿ, ನಂತರ ತುಪ್ಪದಲ್ಲಿ ತೆಂಗಿಕಾಯಿ ತುಂಡುಗಳನ್ನು ಹಾಕಿ ಸ್ವಲ್ಪ ಕಂದು ಬಣ್ಣಕ್ಕೆ ಬರುವವರೆಗೆ ಫ್ರೈ ಮಾಡಿ ನಂತರ ತೆಗೆದು ತಟ್ಟೆಯಲ್ಲಿ ಹಾಕಿಡಿ.
- ಈಗ ಅದೇ ತುಪ್ಪಕ್ಕೆ ಮತ್ತಷ್ಟು ತುಪ್ಪ ಸೇರಿಸಿ ಅದರಲ್ಲಿ ಮಟ್ಟಾ ರೈಸ್ ಹಾಕಿ ಫ್ರೈ ಮಾಡಿ, ನಂತರ 3 ಕಪ್ ನೀರು ಸೇರಿಸಿ ಬೇಯಿಸಿ
- ಈಗ ಬೆಲ್ಲವನ್ನು ಸೇರಿಸಿ ( ಬೆಲ್ಲ ತುರಿದು ಅಥವಾ ಪುಡಿ ಮಾಡಿ ಸೇರಿಸಿ)
- ಏಲಕ್ಕಿ ಸೇರಿಸಿ
- ತುಪ್ಪ ಮಿಶ್ರಣದ ಮೇಲ್ಭಾಗದಲ್ಲಿ ತೇಲುವಷ್ಟು ಹೊತ್ತು ಬೇಯಿಸಿ. ಹೀಗೆ ಬೇಯಿಸುವಾಗ ತಳ ಹಿಡಿಯದಿರಲು ಆಆಗ ಸೌಟ್ನಿಂದ ಆಡಿಸುತ್ತಾ ಇರಿ.
- ಪಾಯಸ ಸ್ವಲ್ಪ ಮಂದವಾಗುವಾಗ ಉರಿಯಿಂದ ಇಳಿಸಿ ದೇವರಿಗೆ ನೈವೇದ್ಯವಿಟ್ಟು ನಂತರ ಸರ್ವ್ ಮಾಡಿ.
- ತಾಮ್ರದ ಕಡಾಯಿಯಲ್ಲಿ ಮಾಡಿದರೆ ಇನ್ನೂ ರುಚಿ, ಪಾಯಸದ ಸ್ವಾದ ತುಂಬಾ ಚೆನ್ನಾಗಿರುತ್ತದೆ.



Click it and Unblock the Notifications