Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಅಯ್ಯಪ್ಪಸ್ವಾಮಿ ಪೂಜೆಗೆ ಅರವಣ ಪಾಯಸ ಮಾಡುವುದು ಹೇಗೆ?
ಜನವರಿ 14ಕ್ಕೆ ಮಕರವಿಳಕ್ಕು, ಈ ದಿನ ಅಯ್ಯಪ್ಪಸ್ವಾಮಿ ತನ್ನ ಭಕ್ತರಿಗೆ ನಕ್ಷತ್ರ ರೂಪದಲ್ಲಿ ದರ್ಶನ ನೀಡುತ್ತಾನೆ ಎಂಬುವುದು ನಂಬಿಕೆ, ಅದನ್ನು ಮಕರವಿಳಕ್ಕು ಎಂದು ಕರೆಯಲಾಗುವುದು ಈ ಮಕರವಿಳಕ್ಕು ದರ್ಶನ ಪಡೆಯಲೆಂದೇ ಲಕ್ಷಾಂತರ ಭಕ್ತರು ಕಠಿಣ ವ್ರತ ನಿಯಮ ಪಾಲಿಸಿ ಕೇರಳದ ಶಬರಿಮಲೆಗೆ ಭೇಟಿ ನೀಡುತ್ತಾರೆ.
ಜನವರಿ ಮಾಸವೆಂದರೆ ಅಯ್ಯಪ್ಪಸ್ವಾಮಿ ಪೂಜೆಯ ಸಮಯ. ಭಜನೆ, ಕಟ್ಟು ತುಂಬಿಸಿ ಹೋಗುವುದು ಹೀಗೆ ಧಾರ್ಮಿಕ ಪೂಜೆಗಳು ನಡೆಯುತ್ತಿರುತ್ತದೆ. ಈ ಪೂಜೆಯಲ್ಲಿ ನೀವು ಅರವಣ ಪಾಯಸ ತಯಾರಿಸಿ ನೈವೇದ್ಯವಾಗಿ ಅರ್ಪಿಸಬಹುದು.

ಅರವಣ ಪಾಯಸವೆಂಬುವುದು ಅಯ್ಯಪ್ಪಸ್ವಾಮಿ ಕ್ಷೇತ್ರದಲ್ಲಿ ದೊರೆಯುವ ವಿಶೇಷ ಪ್ರಸಾದವಾಗಿದೆ.ಇದೇ ರುಚಿಯಲ್ಲಿ ಮನೆಯಲ್ಲಿ ನಡೆಸುವ ಅಯ್ಯಪ್ಪಸ್ವಾಮಿ ಪೂಜೆಯಲ್ಲಿಯೂ ಪಾಯಸ ತಯಾರಿಸಬಹುದಾಗಿದ್ದು ಅದರ ರೆಸಿಪಿ ನೋಡಿ ಇಲ್ಲಿದೆ:
1 ಕಪ್ ಮಟ್ಟಾರೈಸ್
1 ಕಪ್ ತುಪ್ಪ2 ಕಪ್ ನೀರು
ಸ್ವಲ್ಪ ತೆಂಗಿನಕಾಯಿ ತುಂಡು(ಒಂದು ತೆಂಗಿನಕಾಯಿಯ ತುಂಡು)
ಬೆಲ್ಲ 1 ಕಪ್
ಒಣ ಶುಂಠಿ (ಪುಡಿ ಮಾಡಿದ್ದು 1/4 ಚಮಚ)
4-5 ಏಲಕ್ಕಿ
ನೀರು 3 ಕಪ್
ಅರವಣ ಪಾಯಸ ಮಾಡುವುದು ಹೇಗೆ?
- ನೀವು ಈ ಪಾಯಸ ಮಾಡಲು ಉರುಳಿ ಬಳಸಿ (ದಪ್ಪ ತಳವಿರುವ ಪಾತ್ರೆ)
- ಈಗ ಪಾತ್ರೆ ಬಿಸಿ ಮಾಡಿ ಅದಕ್ಕೆ ತುಪ್ಪ ಹಾಕಿ ಬಿಸಿ ಮಾಡಿ, ನಂತರ ತುಪ್ಪದಲ್ಲಿ ತೆಂಗಿಕಾಯಿ ತುಂಡುಗಳನ್ನು ಹಾಕಿ ಸ್ವಲ್ಪ ಕಂದು ಬಣ್ಣಕ್ಕೆ ಬರುವವರೆಗೆ ಫ್ರೈ ಮಾಡಿ ನಂತರ ತೆಗೆದು ತಟ್ಟೆಯಲ್ಲಿ ಹಾಕಿಡಿ.
- ಈಗ ಅದೇ ತುಪ್ಪಕ್ಕೆ ಮತ್ತಷ್ಟು ತುಪ್ಪ ಸೇರಿಸಿ ಅದರಲ್ಲಿ ಮಟ್ಟಾ ರೈಸ್ ಹಾಕಿ ಫ್ರೈ ಮಾಡಿ, ನಂತರ 3 ಕಪ್ ನೀರು ಸೇರಿಸಿ ಬೇಯಿಸಿ
- ಈಗ ಬೆಲ್ಲವನ್ನು ಸೇರಿಸಿ ( ಬೆಲ್ಲ ತುರಿದು ಅಥವಾ ಪುಡಿ ಮಾಡಿ ಸೇರಿಸಿ)
- ಏಲಕ್ಕಿ ಸೇರಿಸಿ
- ತುಪ್ಪ ಮಿಶ್ರಣದ ಮೇಲ್ಭಾಗದಲ್ಲಿ ತೇಲುವಷ್ಟು ಹೊತ್ತು ಬೇಯಿಸಿ. ಹೀಗೆ ಬೇಯಿಸುವಾಗ ತಳ ಹಿಡಿಯದಿರಲು ಆಆಗ ಸೌಟ್ನಿಂದ ಆಡಿಸುತ್ತಾ ಇರಿ.
- ಪಾಯಸ ಸ್ವಲ್ಪ ಮಂದವಾಗುವಾಗ ಉರಿಯಿಂದ ಇಳಿಸಿ ದೇವರಿಗೆ ನೈವೇದ್ಯವಿಟ್ಟು ನಂತರ ಸರ್ವ್ ಮಾಡಿ.
- ತಾಮ್ರದ ಕಡಾಯಿಯಲ್ಲಿ ಮಾಡಿದರೆ ಇನ್ನೂ ರುಚಿ, ಪಾಯಸದ ಸ್ವಾದ ತುಂಬಾ ಚೆನ್ನಾಗಿರುತ್ತದೆ.



Click it and Unblock the Notifications