Latest Updates
-
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ?
ಅಯ್ಯಪ್ಪಸ್ವಾಮಿ ಪೂಜೆಗೆ ಅರವಣ ಪಾಯಸ ಮಾಡುವುದು ಹೇಗೆ?
ಜನವರಿ 14ಕ್ಕೆ ಮಕರವಿಳಕ್ಕು, ಈ ದಿನ ಅಯ್ಯಪ್ಪಸ್ವಾಮಿ ತನ್ನ ಭಕ್ತರಿಗೆ ನಕ್ಷತ್ರ ರೂಪದಲ್ಲಿ ದರ್ಶನ ನೀಡುತ್ತಾನೆ ಎಂಬುವುದು ನಂಬಿಕೆ, ಅದನ್ನು ಮಕರವಿಳಕ್ಕು ಎಂದು ಕರೆಯಲಾಗುವುದು ಈ ಮಕರವಿಳಕ್ಕು ದರ್ಶನ ಪಡೆಯಲೆಂದೇ ಲಕ್ಷಾಂತರ ಭಕ್ತರು ಕಠಿಣ ವ್ರತ ನಿಯಮ ಪಾಲಿಸಿ ಕೇರಳದ ಶಬರಿಮಲೆಗೆ ಭೇಟಿ ನೀಡುತ್ತಾರೆ.
ಜನವರಿ ಮಾಸವೆಂದರೆ ಅಯ್ಯಪ್ಪಸ್ವಾಮಿ ಪೂಜೆಯ ಸಮಯ. ಭಜನೆ, ಕಟ್ಟು ತುಂಬಿಸಿ ಹೋಗುವುದು ಹೀಗೆ ಧಾರ್ಮಿಕ ಪೂಜೆಗಳು ನಡೆಯುತ್ತಿರುತ್ತದೆ. ಈ ಪೂಜೆಯಲ್ಲಿ ನೀವು ಅರವಣ ಪಾಯಸ ತಯಾರಿಸಿ ನೈವೇದ್ಯವಾಗಿ ಅರ್ಪಿಸಬಹುದು.

ಅರವಣ ಪಾಯಸವೆಂಬುವುದು ಅಯ್ಯಪ್ಪಸ್ವಾಮಿ ಕ್ಷೇತ್ರದಲ್ಲಿ ದೊರೆಯುವ ವಿಶೇಷ ಪ್ರಸಾದವಾಗಿದೆ.ಇದೇ ರುಚಿಯಲ್ಲಿ ಮನೆಯಲ್ಲಿ ನಡೆಸುವ ಅಯ್ಯಪ್ಪಸ್ವಾಮಿ ಪೂಜೆಯಲ್ಲಿಯೂ ಪಾಯಸ ತಯಾರಿಸಬಹುದಾಗಿದ್ದು ಅದರ ರೆಸಿಪಿ ನೋಡಿ ಇಲ್ಲಿದೆ:
1 ಕಪ್ ಮಟ್ಟಾರೈಸ್
1 ಕಪ್ ತುಪ್ಪ2 ಕಪ್ ನೀರು
ಸ್ವಲ್ಪ ತೆಂಗಿನಕಾಯಿ ತುಂಡು(ಒಂದು ತೆಂಗಿನಕಾಯಿಯ ತುಂಡು)
ಬೆಲ್ಲ 1 ಕಪ್
ಒಣ ಶುಂಠಿ (ಪುಡಿ ಮಾಡಿದ್ದು 1/4 ಚಮಚ)
4-5 ಏಲಕ್ಕಿ
ನೀರು 3 ಕಪ್
ಅರವಣ ಪಾಯಸ ಮಾಡುವುದು ಹೇಗೆ?
- ನೀವು ಈ ಪಾಯಸ ಮಾಡಲು ಉರುಳಿ ಬಳಸಿ (ದಪ್ಪ ತಳವಿರುವ ಪಾತ್ರೆ)
- ಈಗ ಪಾತ್ರೆ ಬಿಸಿ ಮಾಡಿ ಅದಕ್ಕೆ ತುಪ್ಪ ಹಾಕಿ ಬಿಸಿ ಮಾಡಿ, ನಂತರ ತುಪ್ಪದಲ್ಲಿ ತೆಂಗಿಕಾಯಿ ತುಂಡುಗಳನ್ನು ಹಾಕಿ ಸ್ವಲ್ಪ ಕಂದು ಬಣ್ಣಕ್ಕೆ ಬರುವವರೆಗೆ ಫ್ರೈ ಮಾಡಿ ನಂತರ ತೆಗೆದು ತಟ್ಟೆಯಲ್ಲಿ ಹಾಕಿಡಿ.
- ಈಗ ಅದೇ ತುಪ್ಪಕ್ಕೆ ಮತ್ತಷ್ಟು ತುಪ್ಪ ಸೇರಿಸಿ ಅದರಲ್ಲಿ ಮಟ್ಟಾ ರೈಸ್ ಹಾಕಿ ಫ್ರೈ ಮಾಡಿ, ನಂತರ 3 ಕಪ್ ನೀರು ಸೇರಿಸಿ ಬೇಯಿಸಿ
- ಈಗ ಬೆಲ್ಲವನ್ನು ಸೇರಿಸಿ ( ಬೆಲ್ಲ ತುರಿದು ಅಥವಾ ಪುಡಿ ಮಾಡಿ ಸೇರಿಸಿ)
- ಏಲಕ್ಕಿ ಸೇರಿಸಿ
- ತುಪ್ಪ ಮಿಶ್ರಣದ ಮೇಲ್ಭಾಗದಲ್ಲಿ ತೇಲುವಷ್ಟು ಹೊತ್ತು ಬೇಯಿಸಿ. ಹೀಗೆ ಬೇಯಿಸುವಾಗ ತಳ ಹಿಡಿಯದಿರಲು ಆಆಗ ಸೌಟ್ನಿಂದ ಆಡಿಸುತ್ತಾ ಇರಿ.
- ಪಾಯಸ ಸ್ವಲ್ಪ ಮಂದವಾಗುವಾಗ ಉರಿಯಿಂದ ಇಳಿಸಿ ದೇವರಿಗೆ ನೈವೇದ್ಯವಿಟ್ಟು ನಂತರ ಸರ್ವ್ ಮಾಡಿ.
- ತಾಮ್ರದ ಕಡಾಯಿಯಲ್ಲಿ ಮಾಡಿದರೆ ಇನ್ನೂ ರುಚಿ, ಪಾಯಸದ ಸ್ವಾದ ತುಂಬಾ ಚೆನ್ನಾಗಿರುತ್ತದೆ.



Click it and Unblock the Notifications