Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ರಾಗಿ ಹಾಲಿನ ರೆಸಿಪಿ: ಉರಿಮೂತ್ರ ಶಮನಕ್ಕೆ ತುಂಬಾ ಒಳ್ಳೆಯದು
ಬೇಸಿಗೆ ಕಾಲಕ್ಕೆ ಸೂಕ್ತವಾದ ಪಾನೀಯ ರೆಸಿಪಿ ಇದಾಗಿದೆ. ಈ ಪಾನೀಯ ದೇಹವನ್ನು ತಂಪಾಗಿ ಇಡುತ್ತದೆ, ದೇಹಕ್ಕೆ ಶಕ್ತಿಯನ್ನು ತುಂಬುತ್ತದೆ, ಉರಿ ಮೂತ್ರದಂಥ ಸಮಸ್ಯೆ ತಡೆಗಟ್ಟುತ್ತದೆ, ಅಲ್ಲದೆ ಈ ಪಾನೀಯವನ್ನು ಟೀ-ಕಾಫಿ ಬದಲಿಗೆ ಮಾಡಿ ಸವಿಯಬಹುದು, ರೆಸಿಪಿಯಂತೂ ತುಂಬಾ ಸುಲಭವಾಗಿದೆ. ಬನ್ನಿ ಇದನ್ನು ಮಾಡುವುದು ಹೇಗೆ ಎಂದು ನೋಡೋಣ:

ಬೇಕಾಗುವ ಸಾಮಗ್ರಿ
1 ಲೋಟ ರಾಗಿ
1 ಏಲಕ್ಕಿ
ಒಂದು ದುಂಡು ಬೆಲ್ಲ
ಚಿಟಿಕೆಯಷ್ಟು ಉಪ್ಪು
ಮಾಡುವ ವಿಧಾನ
- ಒಂದು ಲೋಟ ರಾಗಿಯನ್ನು ತೊಳೆದು ನೆನೆ ಹಾಕಿ
- ನಂತರ ರಾಗಿಗೆ ಅದೇ ನೀರು ಹಾಕಿ, 1 ಏಲಕ್ಕಿ ಹಾಕಿ ನುಣ್ಣನೆ ರುಬ್ಬಿ ಆ ರಾಗಿ ನೀರನ್ನು ಒಂದು ಪಾತ್ರೆಗೆ ಸೋಸಿ
- ನಂತರ ಸ್ವಲ್ಪ ನೀರು ಹಾಕಿ ಮಿಕ್ಸ್ ಮಾಡಿ
- ಈಗ ಈ ರಾಗಿ ಹಾಲನ್ನು ಬಿಸಿ ಮಾಡಿ
- ಚಿಟಿಕೆಯಷ್ಟು ಕಲ್ಲುಪ್ಪು ಹಾಕಿ
- ಒಂದು ತುಂಡು ಬೆಲ್ಲ ಹಾಕಿ
- ಈ ಪಾನೀಯ ಬಿಸಿಯಾಗುವಾಗ ಸೌಟ್ನಿಂದ ಆಡಿಸುತ್ತಾ ಇರಿ
- ರಾಗಿ ಬೇಯುತ್ತಾ ಬರುವಾಗ ಹಾಲನ್ನು ಹಾಕಿ
- ರಾಗಿ ಪಾನೀಯ ಬಿಸಿ ಬಿಸಿಯಾಗಿಯೂ ಕುಡಿಯಬಹುದು ಅಥವಾ ತಣ್ಣಗಾದ ಮೇಲೆ ಕೂಡ ಕುಡಿಯಬಹುದು.
- ಬೇಸಿಗೆಗೆ ಇಂಥ ಪಾನೀಯ ಕುಡಿಯಬಹುದು ತುಂಬಾ ಒಳ್ಳೆಯದು, ಕೆಲವರಿಗೆ ಬೇಸಿಗೆಯಲ್ಲಿ ತುಂಬಾನೇ ಉರಿಮೂತ್ರದ ಸಮಸ್ಯೆ ಕಂಡು ಬರುತ್ತದೆ, ಅದನ್ನು ತಡೆಗಟ್ಟಲು ಈ ಪಾನೀಯ ತುಂಬಾನೇ ಸಹಕಾರಿ.
- ಉರಿಮೂತ್ರದ ಸಮಸ್ಯೆ ಇರುವವರು ಇದನ್ನು ಪ್ರತಿನಿತ್ಯ 1-2 ಲೋಟ ಕುಡಿಯಿರಿ.
ಇನ್ನು ಸಿಹಿ ಬೇಡ, ಹಾಲು ಬೇಡ ಎನ್ನುವವರು ರಾಗಿ ಹಾಲಿಗೆ ಸ್ವಲ್ಪ ಉಪ್ಪು ಹಾಕಿ ಕಾಯಿಸಿ ಕುಡಿಯಬಹುದು, ಆದರೆ ರುಚಿಯಾಗಿ ಬೇಕೆಂದರೆ ಮೇಲೆ ಹೇಳಿದಂತೆ ಮಾಡಬೇಕು.
ರಾಗಿ ಹಾಲು ಈ ಸಮಸ್ಯೆ ಇರುವವರೆಗೆ ತುಂಬಾೇ ಒಳ್ಳೆಯದು
ಮಧುಮೇಹಿಗಳಿಗೆ ಅತ್ಯುತ್ತಮ ಆಹಾರ: ಬೆಲ್ಲ ಸೇರಿಸದೆ ಬರಿ ಉಪ್ಪು ಮಾತ್ರ ಹಾಕಿ
ಮಾಡಿದ ಪಾನೀಯ ಕುಡಿಯಿರಿ
ರಕ್ತ ಹೀನತೆ ಸಮಸ್ಯೆ ತಡೆಗಟ್ಟಲು ಸಹಕಾರಿ: ರಕ್ತಹೀನತೆ ಸಮಸ್ಯೆ ಇರುವವರು ಈ
ಪಾನೀಯ ಕುಡಿಯುವುದರಿಂದ ದೇಹದಲ್ಲಿ ಹೀಮೋಗ್ಲೋಬಿನ್ ಸಮಸ್ಯೆ ಹೆಚ್ಚಾಗುವುದು
ಬಾಣಂತಿಯರಿಗೆ ಒಳ್ಳೆಯದು: ಬಾಣಂತಿಯರಿಗೆ ಎದೆ ಹಾಲಿನ ಉತ್ಪತ್ತಿಗೆ, ದೇಹಕ್ಕೆ
ಶಕ್ತಿಗೆ ತುಂಬಾನೇ ಒಳ್ಳೆಯುದ.
ರೋಗ ನಿರೋಧಕ ಶಕ್ತಿ ಹೆಚ್ಚಿದೆ: ಇದರಲ್ಲಿ ಪೋಷಕಾಂಶ ಅಧಿಕವಿರುವುದರಿಂದ ರೋಗ
ನಿರೋಧಕ ಶಕ್ತಿ ವೃದ್ಧಿಸಲು ಸಹಕಾರಿ
ಮೂಳೆಯ ಆರೋಗ್ಯಕ್ಕೆ ತುಂಬಾ ಒಳ್ಳೆಯದು
ದೇಹದಲ್ಲಿ ನೀರಿನಂಶ ಕಾಪಾಡಲು ಸಹಕಾರಿ.



Click it and Unblock the Notifications