Latest Updates
-
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಮದುವೆಗೂ ಮುನ್ನ ಈ 48 ಗಂಟೆಗಳ ಚೆಕ್ಲಿಸ್ಟ್ ಮರೆಯದಿರಿ
ರಾಗಿ ಹಾಲಿನ ರೆಸಿಪಿ: ಉರಿಮೂತ್ರ ಶಮನಕ್ಕೆ ತುಂಬಾ ಒಳ್ಳೆಯದು
ಬೇಸಿಗೆ ಕಾಲಕ್ಕೆ ಸೂಕ್ತವಾದ ಪಾನೀಯ ರೆಸಿಪಿ ಇದಾಗಿದೆ. ಈ ಪಾನೀಯ ದೇಹವನ್ನು ತಂಪಾಗಿ ಇಡುತ್ತದೆ, ದೇಹಕ್ಕೆ ಶಕ್ತಿಯನ್ನು ತುಂಬುತ್ತದೆ, ಉರಿ ಮೂತ್ರದಂಥ ಸಮಸ್ಯೆ ತಡೆಗಟ್ಟುತ್ತದೆ, ಅಲ್ಲದೆ ಈ ಪಾನೀಯವನ್ನು ಟೀ-ಕಾಫಿ ಬದಲಿಗೆ ಮಾಡಿ ಸವಿಯಬಹುದು, ರೆಸಿಪಿಯಂತೂ ತುಂಬಾ ಸುಲಭವಾಗಿದೆ. ಬನ್ನಿ ಇದನ್ನು ಮಾಡುವುದು ಹೇಗೆ ಎಂದು ನೋಡೋಣ:

ಬೇಕಾಗುವ ಸಾಮಗ್ರಿ
1 ಲೋಟ ರಾಗಿ
1 ಏಲಕ್ಕಿ
ಒಂದು ದುಂಡು ಬೆಲ್ಲ
ಚಿಟಿಕೆಯಷ್ಟು ಉಪ್ಪು
ಮಾಡುವ ವಿಧಾನ
- ಒಂದು ಲೋಟ ರಾಗಿಯನ್ನು ತೊಳೆದು ನೆನೆ ಹಾಕಿ
- ನಂತರ ರಾಗಿಗೆ ಅದೇ ನೀರು ಹಾಕಿ, 1 ಏಲಕ್ಕಿ ಹಾಕಿ ನುಣ್ಣನೆ ರುಬ್ಬಿ ಆ ರಾಗಿ ನೀರನ್ನು ಒಂದು ಪಾತ್ರೆಗೆ ಸೋಸಿ
- ನಂತರ ಸ್ವಲ್ಪ ನೀರು ಹಾಕಿ ಮಿಕ್ಸ್ ಮಾಡಿ
- ಈಗ ಈ ರಾಗಿ ಹಾಲನ್ನು ಬಿಸಿ ಮಾಡಿ
- ಚಿಟಿಕೆಯಷ್ಟು ಕಲ್ಲುಪ್ಪು ಹಾಕಿ
- ಒಂದು ತುಂಡು ಬೆಲ್ಲ ಹಾಕಿ
- ಈ ಪಾನೀಯ ಬಿಸಿಯಾಗುವಾಗ ಸೌಟ್ನಿಂದ ಆಡಿಸುತ್ತಾ ಇರಿ
- ರಾಗಿ ಬೇಯುತ್ತಾ ಬರುವಾಗ ಹಾಲನ್ನು ಹಾಕಿ
- ರಾಗಿ ಪಾನೀಯ ಬಿಸಿ ಬಿಸಿಯಾಗಿಯೂ ಕುಡಿಯಬಹುದು ಅಥವಾ ತಣ್ಣಗಾದ ಮೇಲೆ ಕೂಡ ಕುಡಿಯಬಹುದು.
- ಬೇಸಿಗೆಗೆ ಇಂಥ ಪಾನೀಯ ಕುಡಿಯಬಹುದು ತುಂಬಾ ಒಳ್ಳೆಯದು, ಕೆಲವರಿಗೆ ಬೇಸಿಗೆಯಲ್ಲಿ ತುಂಬಾನೇ ಉರಿಮೂತ್ರದ ಸಮಸ್ಯೆ ಕಂಡು ಬರುತ್ತದೆ, ಅದನ್ನು ತಡೆಗಟ್ಟಲು ಈ ಪಾನೀಯ ತುಂಬಾನೇ ಸಹಕಾರಿ.
- ಉರಿಮೂತ್ರದ ಸಮಸ್ಯೆ ಇರುವವರು ಇದನ್ನು ಪ್ರತಿನಿತ್ಯ 1-2 ಲೋಟ ಕುಡಿಯಿರಿ.
ಇನ್ನು ಸಿಹಿ ಬೇಡ, ಹಾಲು ಬೇಡ ಎನ್ನುವವರು ರಾಗಿ ಹಾಲಿಗೆ ಸ್ವಲ್ಪ ಉಪ್ಪು ಹಾಕಿ ಕಾಯಿಸಿ ಕುಡಿಯಬಹುದು, ಆದರೆ ರುಚಿಯಾಗಿ ಬೇಕೆಂದರೆ ಮೇಲೆ ಹೇಳಿದಂತೆ ಮಾಡಬೇಕು.
ರಾಗಿ ಹಾಲು ಈ ಸಮಸ್ಯೆ ಇರುವವರೆಗೆ ತುಂಬಾೇ ಒಳ್ಳೆಯದು
ಮಧುಮೇಹಿಗಳಿಗೆ ಅತ್ಯುತ್ತಮ ಆಹಾರ: ಬೆಲ್ಲ ಸೇರಿಸದೆ ಬರಿ ಉಪ್ಪು ಮಾತ್ರ ಹಾಕಿ
ಮಾಡಿದ ಪಾನೀಯ ಕುಡಿಯಿರಿ
ರಕ್ತ ಹೀನತೆ ಸಮಸ್ಯೆ ತಡೆಗಟ್ಟಲು ಸಹಕಾರಿ: ರಕ್ತಹೀನತೆ ಸಮಸ್ಯೆ ಇರುವವರು ಈ
ಪಾನೀಯ ಕುಡಿಯುವುದರಿಂದ ದೇಹದಲ್ಲಿ ಹೀಮೋಗ್ಲೋಬಿನ್ ಸಮಸ್ಯೆ ಹೆಚ್ಚಾಗುವುದು
ಬಾಣಂತಿಯರಿಗೆ ಒಳ್ಳೆಯದು: ಬಾಣಂತಿಯರಿಗೆ ಎದೆ ಹಾಲಿನ ಉತ್ಪತ್ತಿಗೆ, ದೇಹಕ್ಕೆ
ಶಕ್ತಿಗೆ ತುಂಬಾನೇ ಒಳ್ಳೆಯುದ.
ರೋಗ ನಿರೋಧಕ ಶಕ್ತಿ ಹೆಚ್ಚಿದೆ: ಇದರಲ್ಲಿ ಪೋಷಕಾಂಶ ಅಧಿಕವಿರುವುದರಿಂದ ರೋಗ
ನಿರೋಧಕ ಶಕ್ತಿ ವೃದ್ಧಿಸಲು ಸಹಕಾರಿ
ಮೂಳೆಯ ಆರೋಗ್ಯಕ್ಕೆ ತುಂಬಾ ಒಳ್ಳೆಯದು
ದೇಹದಲ್ಲಿ ನೀರಿನಂಶ ಕಾಪಾಡಲು ಸಹಕಾರಿ.



Click it and Unblock the Notifications