Latest Updates
-
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು!
ರಾಗಿ ಹಾಲಿನ ರೆಸಿಪಿ: ಉರಿಮೂತ್ರ ಶಮನಕ್ಕೆ ತುಂಬಾ ಒಳ್ಳೆಯದು
ಬೇಸಿಗೆ ಕಾಲಕ್ಕೆ ಸೂಕ್ತವಾದ ಪಾನೀಯ ರೆಸಿಪಿ ಇದಾಗಿದೆ. ಈ ಪಾನೀಯ ದೇಹವನ್ನು ತಂಪಾಗಿ ಇಡುತ್ತದೆ, ದೇಹಕ್ಕೆ ಶಕ್ತಿಯನ್ನು ತುಂಬುತ್ತದೆ, ಉರಿ ಮೂತ್ರದಂಥ ಸಮಸ್ಯೆ ತಡೆಗಟ್ಟುತ್ತದೆ, ಅಲ್ಲದೆ ಈ ಪಾನೀಯವನ್ನು ಟೀ-ಕಾಫಿ ಬದಲಿಗೆ ಮಾಡಿ ಸವಿಯಬಹುದು, ರೆಸಿಪಿಯಂತೂ ತುಂಬಾ ಸುಲಭವಾಗಿದೆ. ಬನ್ನಿ ಇದನ್ನು ಮಾಡುವುದು ಹೇಗೆ ಎಂದು ನೋಡೋಣ:

ಬೇಕಾಗುವ ಸಾಮಗ್ರಿ
1 ಲೋಟ ರಾಗಿ
1 ಏಲಕ್ಕಿ
ಒಂದು ದುಂಡು ಬೆಲ್ಲ
ಚಿಟಿಕೆಯಷ್ಟು ಉಪ್ಪು
ಮಾಡುವ ವಿಧಾನ
- ಒಂದು ಲೋಟ ರಾಗಿಯನ್ನು ತೊಳೆದು ನೆನೆ ಹಾಕಿ
- ನಂತರ ರಾಗಿಗೆ ಅದೇ ನೀರು ಹಾಕಿ, 1 ಏಲಕ್ಕಿ ಹಾಕಿ ನುಣ್ಣನೆ ರುಬ್ಬಿ ಆ ರಾಗಿ ನೀರನ್ನು ಒಂದು ಪಾತ್ರೆಗೆ ಸೋಸಿ
- ನಂತರ ಸ್ವಲ್ಪ ನೀರು ಹಾಕಿ ಮಿಕ್ಸ್ ಮಾಡಿ
- ಈಗ ಈ ರಾಗಿ ಹಾಲನ್ನು ಬಿಸಿ ಮಾಡಿ
- ಚಿಟಿಕೆಯಷ್ಟು ಕಲ್ಲುಪ್ಪು ಹಾಕಿ
- ಒಂದು ತುಂಡು ಬೆಲ್ಲ ಹಾಕಿ
- ಈ ಪಾನೀಯ ಬಿಸಿಯಾಗುವಾಗ ಸೌಟ್ನಿಂದ ಆಡಿಸುತ್ತಾ ಇರಿ
- ರಾಗಿ ಬೇಯುತ್ತಾ ಬರುವಾಗ ಹಾಲನ್ನು ಹಾಕಿ
- ರಾಗಿ ಪಾನೀಯ ಬಿಸಿ ಬಿಸಿಯಾಗಿಯೂ ಕುಡಿಯಬಹುದು ಅಥವಾ ತಣ್ಣಗಾದ ಮೇಲೆ ಕೂಡ ಕುಡಿಯಬಹುದು.
- ಬೇಸಿಗೆಗೆ ಇಂಥ ಪಾನೀಯ ಕುಡಿಯಬಹುದು ತುಂಬಾ ಒಳ್ಳೆಯದು, ಕೆಲವರಿಗೆ ಬೇಸಿಗೆಯಲ್ಲಿ ತುಂಬಾನೇ ಉರಿಮೂತ್ರದ ಸಮಸ್ಯೆ ಕಂಡು ಬರುತ್ತದೆ, ಅದನ್ನು ತಡೆಗಟ್ಟಲು ಈ ಪಾನೀಯ ತುಂಬಾನೇ ಸಹಕಾರಿ.
- ಉರಿಮೂತ್ರದ ಸಮಸ್ಯೆ ಇರುವವರು ಇದನ್ನು ಪ್ರತಿನಿತ್ಯ 1-2 ಲೋಟ ಕುಡಿಯಿರಿ.
ಇನ್ನು ಸಿಹಿ ಬೇಡ, ಹಾಲು ಬೇಡ ಎನ್ನುವವರು ರಾಗಿ ಹಾಲಿಗೆ ಸ್ವಲ್ಪ ಉಪ್ಪು ಹಾಕಿ ಕಾಯಿಸಿ ಕುಡಿಯಬಹುದು, ಆದರೆ ರುಚಿಯಾಗಿ ಬೇಕೆಂದರೆ ಮೇಲೆ ಹೇಳಿದಂತೆ ಮಾಡಬೇಕು.
ರಾಗಿ ಹಾಲು ಈ ಸಮಸ್ಯೆ ಇರುವವರೆಗೆ ತುಂಬಾೇ ಒಳ್ಳೆಯದು
ಮಧುಮೇಹಿಗಳಿಗೆ ಅತ್ಯುತ್ತಮ ಆಹಾರ: ಬೆಲ್ಲ ಸೇರಿಸದೆ ಬರಿ ಉಪ್ಪು ಮಾತ್ರ ಹಾಕಿ
ಮಾಡಿದ ಪಾನೀಯ ಕುಡಿಯಿರಿ
ರಕ್ತ ಹೀನತೆ ಸಮಸ್ಯೆ ತಡೆಗಟ್ಟಲು ಸಹಕಾರಿ: ರಕ್ತಹೀನತೆ ಸಮಸ್ಯೆ ಇರುವವರು ಈ
ಪಾನೀಯ ಕುಡಿಯುವುದರಿಂದ ದೇಹದಲ್ಲಿ ಹೀಮೋಗ್ಲೋಬಿನ್ ಸಮಸ್ಯೆ ಹೆಚ್ಚಾಗುವುದು
ಬಾಣಂತಿಯರಿಗೆ ಒಳ್ಳೆಯದು: ಬಾಣಂತಿಯರಿಗೆ ಎದೆ ಹಾಲಿನ ಉತ್ಪತ್ತಿಗೆ, ದೇಹಕ್ಕೆ
ಶಕ್ತಿಗೆ ತುಂಬಾನೇ ಒಳ್ಳೆಯುದ.
ರೋಗ ನಿರೋಧಕ ಶಕ್ತಿ ಹೆಚ್ಚಿದೆ: ಇದರಲ್ಲಿ ಪೋಷಕಾಂಶ ಅಧಿಕವಿರುವುದರಿಂದ ರೋಗ
ನಿರೋಧಕ ಶಕ್ತಿ ವೃದ್ಧಿಸಲು ಸಹಕಾರಿ
ಮೂಳೆಯ ಆರೋಗ್ಯಕ್ಕೆ ತುಂಬಾ ಒಳ್ಳೆಯದು
ದೇಹದಲ್ಲಿ ನೀರಿನಂಶ ಕಾಪಾಡಲು ಸಹಕಾರಿ.



Click it and Unblock the Notifications