Latest Updates
-
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು!
ಯುಗಾದಿ ಗಮ್ಮತ್ತಿಗೆ ಬೇಕು ಒಬ್ಬಟ್ಟು ಸಾಥ್
ಯುಗಾದಿಗೆ ಒಬ್ಬಟ್ಟು ಇಲ್ಲ ಅಂದರೆ ಆ ಅಡುಗೆಯನ್ನು ಯುಗಾದಿ ಸ್ಪೆಷಲ್ ಅಡುಗೆ ಎನ್ನಲು ಸಾಧ್ಯವಿಲ್ಲ . ಏಕೆಂದರೆ ಈ ಹಬ್ಬದಲ್ಲಿ ಒಬ್ಬಟ್ಟು ಇರಲೇ ಬೇಕು.
ಮೊದಲೇ ಹೇಳಿದ ಹಾಗೆ ಹೊಸದಾಗಿ ಹಬ್ಬದ ಅಡುಗೆ ಮಾಡುವವರಿಗೆ ಒಬ್ಬಟ್ಟು ಅಡುಗೆ ಬರಲ್ಲ ಅಂದರೆ ಅಯ್ಯೊ ರಾಮ! ಯುಗಾದಿಗೆ ಒಬ್ಬಟ್ಟು ಇಲ್ಲ ಅಂದರೆ ಹೇಗೆ ಎಂದು ಮನೆಯವರು ನಕ್ಕಾರು. ಅಂತಹ ತೊಂದರೆ ನಿಮಗೆ ಬರದಿರಲಿ ಎಂದು ಈ ಒಬ್ಬಟ್ಟು ರೆಸಿಪಿ ನೀಡಲಾಗಿದೆ. ಈ ಕೆಳಗಿನ ರೆಸಿಪಿ ವಿಧಾನ ಸರಳ ಮತ್ತು ರುಚಿಕರವಾಗಿದೆ.
ಬೇಕಾಗುವ ಸಾಮಾಗ್ರಿಗಳು:
* ಕಡಲೆ ಬೇಳೆ 1 ಕಪ್
* ಒಂದೂವರೆ ಕಪ್ ಸಕ್ಕರೆ/ ಬೆಲ್ಲ
* ಏಲಕ್ಕಿ (8 ಇರಲಿ)
* ಅರ್ಧ ಕಪ್ ಮೈದಾ
* ಒಂದು ಕಪ್ ವನಸ್ಪತಿ
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಕಡಲೆ ಬೇಳೆಯನ್ನು ಚೆನ್ನಾಗಿ ತೊಳೆದು ಅದನ್ನು ಪ್ರೆಶರ್ ಕುಕ್ಕರಿನಲ್ಲಿ ಹಾಕಿ, ಬೇಯಲು ಸಾಕಾಗುವಷ್ಟು ನೀರು ಹಾಕಿ ಚೆನ್ನಾಗಿ ಬೇಯಿಸಬೇಕು.
2. ಮೈದಾಕ್ಕೆ ಚಿಟಿಕೆಯಷ್ಟು ಉಪ್ಪು ಹಾಕಿ, ನೀರು ಚಿಮುಕಿಸುತ್ತಾ ಕಲೆಸಬೇಕು. ಹೀಗೆ ಕಲೆಸುವಾಗ ತುಪ್ಪ ಅಥವಾ ಎಣ್ಣೆ ಸ್ವಲ್ಪ ಸೇರಿಸಿದರೆ ಮಿಶ್ರಣ ಮೃದುವಾಗುವುದು.
3. ಕಲೆಸಿದ ಮೈದಾ ಹಿಟ್ಟನ್ನು 2 ಗಂಟೆ ಕಾಲ ಇಡಬೇಕು.
4. ಈಗ ಬೇಯಿಸಿದ ಬೇಳೆಯಿಂದ ನೀರನ್ನು ಸೋಸಿ, ಬೆಲ್ಲ ಸ್ವಲ್ಪ ಉಪ್ಪು ಹಾಕಿ ಮಿಕ್ಸಿಯಲ್ಲಿ ಗಟ್ಟಿಯಾಗಿ ಅರೆಯಬೇಕು.
5. ಈಗ ಈ ಮಿಶ್ರಣ ಒಣಗುವವರೆಗೆ ಕಡಿಮೆ ಉರಿಯಲ್ಲಿ ಬಾಣಲೆಯಲ್ಲಿ ಹಾಕಿ ಬಿಸಿ ಮಾಡಬೇಕು. ಮಿಶ್ರಣ ಒಣಗಿದಾಗ (ಡ್ರೈ ಆದಾಗ) ಉರಿಯಿಂದ ತೆಗೆದು ಆರಲು ಇಡಬೇಕು. ನಂತರ ಈ ಮಿಶ್ರಣಕ್ಕೆ ಏಲಕ್ಕಿಯನ್ನು ಪುಡಿ ಮಾಡಿ ಹಾಕಿ ಮಿಶ್ರ ಮಾಡಬೇಕು.
6. ಈಗ ಮಿಶ್ರಣದಿಂದ ಚಿಕ್ಕ ಉಂಡೆಗಳನ್ನು (ಈ ಅಳತೆಯ ಪ್ರಕಾರ 10-12 ಉಂಡೆ ಆಗುತ್ತದೆ) ಮಾಡಬೇಕು.
7. ಈಗ ಮೈದಾ ಹಿಟ್ಟಿನಿಂದ ಚಪಾತಿಗೆ ಕಟ್ಟುವಾಗೆ ಉಂಡೆ ಕಟ್ಟಬೇಕು. ಅದನ್ನು ಚಪಾತಿ ತಟ್ಟುವ ಹಾಗೆ ತಟ್ಟಬೇಕು. ಹೀಗೆ ತಟ್ಟುವಾಗ ತಟ್ಟಲು ಬಳಸಿದ ವೃತ್ತಾಕಾರದ ಪಾತ್ರೆ ಅಥವಾ ಮರದ ಅಲಗೆ ಅಂಟಿ ಹಿಡಿಯದಂತೆ ಪ್ಲಾಸ್ಟಿಕ್ ಹಾಕಿ ಅದರ ಮೇಲೆ ಮೈದಾ ಉಂಡೆಯನ್ನು ಇಟ್ಟು ತಟ್ಟಿ.
8. ಈಗ ಮೈದಾ ಉಂಡೆಯನ್ನು ಚಪಾತಿಗೆ ತಟ್ಟುವ ಹಾಗೆ ತಟ್ಟಿ, ಹೀಗೆ ತಟ್ಟುವಾಗ ಮಧ್ಯ ಭಾಗದಲ್ಲಿ ದಪ್ಪವಾಗಿದ್ದು ಸುತ್ತಲೂ ತೆಳುವಾಗಿರಲಿ. ನಂತರ ಬೇಳೆ ಮತ್ತು ಬೆಲ್ಲದ ಉಂಡೆಯನ್ನು ತಟ್ಟಿದ ಮೈದಾದ ಮಧ್ಯದಲ್ಲಿ ಇಟ್ಟು ಮೈದಾದ ತುದಿಗಳನ್ನು ಮಡಚಿ ಪುನಃ ಮೊದಲಿನಂತೆ ತಟ್ಟಿ.
9. ಈಗ ತವಾವನ್ನು ಉರಿಯಲ್ಲಿಟ್ಟು ಸ್ವಲ್ಪ ಎಣ್ಣೆ ಸವರಿ ಈ ಒಬ್ಬಟ್ಟನ್ನು ತವಾದಲ್ಲಿ ಹಾಕಬೇಕು. ಅದರ ಮೇಲೆ ಕೂಡ ಸ್ವಲ್ಪ ಎಣ್ಣೆ ಹಾಕಬೇಕು. ಸ್ವಲ್ಪ ಬಿಸಿಯಾದಾಗ ಮಗುಚಿ ಹಾಕಬೇಕು. ಒಬ್ಬಟ್ಟು ಬೆಂದಿದೆ ಎಂದಾಗ ಅದನ್ನು ತೆಗೆದು ತಟ್ಟೆಯಲ್ಲಿ ಹಾಕಿ.
ಇಷ್ಟು ಸರಳ ವಿಧಾನವಿರುವಾಗ ಒಬ್ಬಟ್ಟು ಮಾಡಲು ಆತಂಕ ಏಕೆ ಅಲ್ವಾ?



Click it and Unblock the Notifications