Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಯುಗಾದಿ ಹಬ್ಬದ ಸಂಭ್ರಮ ಹೆಚ್ಚಿಸುವ ಸಜ್ಜಪ್ಪ

* ವಾಣಿ ನಾಯಿಕ, ಬೆಂಗಳೂರು
ಬೇಕಾಗುವ ಪದಾರ್ಥಗಳು
ಚಿರೋಟಿ ರವೆ 1 ಬಟ್ಟಲು
ತುಪ್ಪ 1 ಟಿಸ್ಪೂನ್
ಕಾಯಿತುರಿ 2 ಬಟ್ಟಲು
ಬೆಲ್ಲ 1 ಬಟ್ಟಲು
ಏಲಕ್ಕಿ ಪುಡಿ 1 ಟಿಸ್ಪೂನ್
ದ್ರಾಕ್ಷಿ ಮತ್ತು ಗೋಡಂಬಿ 1/4 ಬಟ್ಟಲು (ತುಪ್ಪದಲ್ಲಿ ಹುರಿದದ್ದು)
ಮಾಡುವ ವಿಧಾನ
ಮೊದಲಿಗೆ ಚಿರೋಟಿ ರವೆಯನ್ನು ಒಂದು ಪಾತ್ರೆಗೆ ಹಾಕಿಕೊಳ್ಳಿ. ಅದಕ್ಕೆ ತುಪ್ಪವನ್ನು ಸುರಿದು ಕಲಸಿಟ್ಟಿಕೊಳ್ಳಿ. ಈ ಮಿಶ್ರಣಕ್ಕೆ ನೀರನ್ನು ಹಾಕಿ ಪೂರಿ ಹಿಟ್ಟಿನ ಹದಕ್ಕೆ ಕಲಸಿ, ಚೆನ್ನಾಗಿ ನಾದಬೇಕು. ಹತ್ತರಿಂದ ಹದಿನೈದು ನಿಮಿಷದವರೆಗೆ ಹಿಟ್ಟನ್ನು ನೆನೆಯಲು ಬಿಡಿ. ಆ ಸಮಯದಲ್ಲಿ ಇನ್ನೊಂದೆಡೆ ಹೂರಣಕ್ಕೆ ಸಿದ್ಧತೆ ನಡೆಸಿ.
ಹೂರಣವನ್ನು ಮಾಡುವ ವಿಧಾನ : ಕಾಯಿತುರಿ ಹಾಗೂ ನುಣ್ಣಗೆ ಜಜ್ಜಿಕೊಂಡ ಬೆಲ್ಲವನ್ನು ಒಂದು ಬಾಣಲೆಯಲ್ಲಿ ಹಾಕಿ ಹುರಿಯಿರಿ. ನಂತರ ಏಲಕ್ಕಿ ಪುಡಿ ಮತ್ತು ತುಪ್ಪದಲ್ಲಿ ಹುರಿದ ದ್ರಾಕ್ಷಿ ಮತ್ತು ಗೋಡಂಬಿಯನ್ನು ಸೇರಿಸಿ ಸ್ಟೋವ್ನಿಂದ ಕೆಳಗಿಳಿಸಿ.
ನಂತರ ಮೊದಲೇ ಕಲಸಿಟ್ಟಿದ್ದ ಹಿಟ್ಟನ್ನು ತೆಗೆದುಕೊಂಡು, ಸಣ್ಣ ಸಣ್ಣಗೆ ದುಂಡಾಕಾರದ ಉಂಡೆಗಳನ್ನು ಮಾಡಿ. ಅದರೊಳಕ್ಕೆ ಹೂರಣವನ್ನು ತುಂಬಿ. ಆಮೇಲೆ ಹಿಟ್ಟಿನ ತುದಿಯಿಂದ ಮುಚ್ಚಿ ಎಣ್ಣೆ ಕೈಯಿಂದ ಕೈಯಲ್ಲಿ ದುಂಡಾಕಾರಕ್ಕೆ ತಟ್ಟಬೇಕು. ಹೀಗೆ ಲಟ್ಟಿಸಿದ ಪೂರಿ ಆಕಾರದ ದುಂಡಗಿನ ಸಜ್ಜಪ್ಪವನ್ನು ಎಣ್ಣೆಯಲ್ಲಿ ಕರಿಯಿರಿ.
ಕೆಂಪಗೆ ಕರಿದ ಬಿಸಿಬಿಸಿಯಾದ, ಮತ್ತು ಗರಿಗರಿಯಾದ ಸಜ್ಜಪ್ಪವನ್ನು ಮಾಡುವುದೇ ಒಂದು ಸಂಭ್ರಮ. ಅದನ್ನು ಸವಿಯುವುದು ಮತ್ತೊಂದು ಸಂಭ್ರಮ! ಓದುಗರಿಗೆಲ್ಲ ಹೊಸವರ್ಷದ ಹಾರ್ದಿಕ ಶುಭಾಶಯಗಳು.



Click it and Unblock the Notifications











