Latest Updates
-
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಮಳೆಗಾಲದಲ್ಲಿ ಕರೆಂಟ್ ಹೋದರೆ ಫ್ರಿಜ್ ಆಹಾರ ಹಾಳಾಗುತ್ತಾ? ಸುರಕ್ಷಿತವಾಗಿಡಲು ಇಲ್ಲಿವೆ ಸರಳ ಟಿಪ್ಸ್ -
ಐಟಿಆರ್ ಸಲ್ಲಿಕೆಗೆ ಇನ್ನು 4 ದಿನ ಬಾಕಿ: ಭಾರಿ ದಂಡದಿಂದ ಪಾರಾಗಲು ಈ ಕೆಲಸಗಳನ್ನು ಇಂದೇ ಮಾಡಿ! -
IMD ಮಳೆ ಎಚ್ಚರಿಕೆ: ಹೊರಗೆ ಹೋಗಬೇಡಿ, ಮನೆಯಲ್ಲೇ ಈ 12 ನಿಮಿಷದ ವರ್ಕೌಟ್ ಮಾಡಿ ಫಿಟ್ ಆಗಿರಿ!
ಯುಗಾದಿ ಹಬ್ಬದ ಸಂಭ್ರಮ ಹೆಚ್ಚಿಸುವ ಸಜ್ಜಪ್ಪ

* ವಾಣಿ ನಾಯಿಕ, ಬೆಂಗಳೂರು
ಬೇಕಾಗುವ ಪದಾರ್ಥಗಳು
ಚಿರೋಟಿ ರವೆ 1 ಬಟ್ಟಲು
ತುಪ್ಪ 1 ಟಿಸ್ಪೂನ್
ಕಾಯಿತುರಿ 2 ಬಟ್ಟಲು
ಬೆಲ್ಲ 1 ಬಟ್ಟಲು
ಏಲಕ್ಕಿ ಪುಡಿ 1 ಟಿಸ್ಪೂನ್
ದ್ರಾಕ್ಷಿ ಮತ್ತು ಗೋಡಂಬಿ 1/4 ಬಟ್ಟಲು (ತುಪ್ಪದಲ್ಲಿ ಹುರಿದದ್ದು)
ಮಾಡುವ ವಿಧಾನ
ಮೊದಲಿಗೆ ಚಿರೋಟಿ ರವೆಯನ್ನು ಒಂದು ಪಾತ್ರೆಗೆ ಹಾಕಿಕೊಳ್ಳಿ. ಅದಕ್ಕೆ ತುಪ್ಪವನ್ನು ಸುರಿದು ಕಲಸಿಟ್ಟಿಕೊಳ್ಳಿ. ಈ ಮಿಶ್ರಣಕ್ಕೆ ನೀರನ್ನು ಹಾಕಿ ಪೂರಿ ಹಿಟ್ಟಿನ ಹದಕ್ಕೆ ಕಲಸಿ, ಚೆನ್ನಾಗಿ ನಾದಬೇಕು. ಹತ್ತರಿಂದ ಹದಿನೈದು ನಿಮಿಷದವರೆಗೆ ಹಿಟ್ಟನ್ನು ನೆನೆಯಲು ಬಿಡಿ. ಆ ಸಮಯದಲ್ಲಿ ಇನ್ನೊಂದೆಡೆ ಹೂರಣಕ್ಕೆ ಸಿದ್ಧತೆ ನಡೆಸಿ.
ಹೂರಣವನ್ನು ಮಾಡುವ ವಿಧಾನ : ಕಾಯಿತುರಿ ಹಾಗೂ ನುಣ್ಣಗೆ ಜಜ್ಜಿಕೊಂಡ ಬೆಲ್ಲವನ್ನು ಒಂದು ಬಾಣಲೆಯಲ್ಲಿ ಹಾಕಿ ಹುರಿಯಿರಿ. ನಂತರ ಏಲಕ್ಕಿ ಪುಡಿ ಮತ್ತು ತುಪ್ಪದಲ್ಲಿ ಹುರಿದ ದ್ರಾಕ್ಷಿ ಮತ್ತು ಗೋಡಂಬಿಯನ್ನು ಸೇರಿಸಿ ಸ್ಟೋವ್ನಿಂದ ಕೆಳಗಿಳಿಸಿ.
ನಂತರ ಮೊದಲೇ ಕಲಸಿಟ್ಟಿದ್ದ ಹಿಟ್ಟನ್ನು ತೆಗೆದುಕೊಂಡು, ಸಣ್ಣ ಸಣ್ಣಗೆ ದುಂಡಾಕಾರದ ಉಂಡೆಗಳನ್ನು ಮಾಡಿ. ಅದರೊಳಕ್ಕೆ ಹೂರಣವನ್ನು ತುಂಬಿ. ಆಮೇಲೆ ಹಿಟ್ಟಿನ ತುದಿಯಿಂದ ಮುಚ್ಚಿ ಎಣ್ಣೆ ಕೈಯಿಂದ ಕೈಯಲ್ಲಿ ದುಂಡಾಕಾರಕ್ಕೆ ತಟ್ಟಬೇಕು. ಹೀಗೆ ಲಟ್ಟಿಸಿದ ಪೂರಿ ಆಕಾರದ ದುಂಡಗಿನ ಸಜ್ಜಪ್ಪವನ್ನು ಎಣ್ಣೆಯಲ್ಲಿ ಕರಿಯಿರಿ.
ಕೆಂಪಗೆ ಕರಿದ ಬಿಸಿಬಿಸಿಯಾದ, ಮತ್ತು ಗರಿಗರಿಯಾದ ಸಜ್ಜಪ್ಪವನ್ನು ಮಾಡುವುದೇ ಒಂದು ಸಂಭ್ರಮ. ಅದನ್ನು ಸವಿಯುವುದು ಮತ್ತೊಂದು ಸಂಭ್ರಮ! ಓದುಗರಿಗೆಲ್ಲ ಹೊಸವರ್ಷದ ಹಾರ್ದಿಕ ಶುಭಾಶಯಗಳು.



Click it and Unblock the Notifications