Latest Updates
-
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ!
ಸಿಹಿಪಾಕಶಾಲೆ:ಹೊಸಬಗೆಯ ಗಸಗಸೆ ಹಲ್ವಾ
ಸುಲಭವಾಗಿ ಮಾಡಬಹುದಾದಹಲ್ವಾಗಳಲ್ಲಿ ಗಸಗಸೆ ಹಲ್ವ ಕೂಡ ಒಂದು.ಇಲ್ಲಿ ಕೊಟ್ಟಿರುವ ವಿಧಾನದಲ್ಲಿ ಅಲ್ಪ ಸ್ವಲ್ಪ ಬದಲಾವಣೆ ಮಾಡಿಕೊಂಡು ಕಲ್ಲಂಗಡಿ ಹಣ್ಣಿನ ಬೀಜ ಹಾಗೂ ಸಿಹಿಗುಂಬಳ ಕಾಯಿ ಬೀಜಗಳ ಹಲ್ವಾವನ್ನು ತಯಾರಿಸಬಹುದು.
ಬೇಕಾಗುವ ಪದಾರ್ಥಗಳು:
ಗಸಗಸೆ:1ಕಪ್
ಸಕ್ಕರೆ:ಒಂದುಕಾಲು ಕಪ್
ತುಪ್ಪ : 2 ಟೇಬಲ್ ಚಮಚ
ಹಾಲು: ಗಸಗಸೆಯನ್ನು ರುಬ್ಬಲು ಸ್ವಲ್ಪ
ಜಾಕಾಯಿಪುಡಿ ಸ್ವಲ್ಪ
ಮಾಡುವ ವಿಧಾನ:
*ಗಸಗಸೆಯನ್ನು ಬಿಸಿ ನೀರಿನಲ್ಲಿ 4 ಅಥವಾ 5 ಗಂಟೆ ನೆನೆಸಿರಿ .
*ಅಧಿಕವಾದ ನೀರನ್ನು ಬಸಿದು, ಸ್ವಲ್ಪ ಹಾಲು ಸೇರಿಸಿ ಗಸಗಸೆಯನ್ನು ಮೃದುವಾದ ಪೇಸ್ಟ್ ನಂತೆ ರುಬ್ಬಿರಿ.
*ಈ ಪೇಸ್ಟನ್ನು ಒಂದು ಪಾತ್ರೆಯಲ್ಲಿ ಹಾಕಿ, ಕುಕ್ಕರ್ ನಲ್ಲಿಟ್ಟು ಒಂದು ವಿಷಲ್ ಬರುವವರೆಗೂ ಬೇಯಿಸಿ.
*ಇದನ್ನು ತಣ್ಣಗಾಗಿಸಿ, ಸಕ್ಕರೆ ಸೇರಿಸಿ ದಪ್ಪ ತಳದ ಬಾಣಲೆಯಲ್ಲಿ ಸತತವಾಗಿ ಕಲೆಸುತ್ತಾ ಕುದಿಸಿರಿ.
*ಇದು ಬಾಣಲೆಯ ಅಡಿಭಾಗಕ್ಕೆ ಅಂಟಿಕೊಳ್ಳುವಾಗ, ಸ್ವಲ್ಪಸ್ವಲ್ಪವಾಗಿ ತುಪ್ಪವನ್ನು ಸೇರಿಸಿ.
*ತೇವವೆಲ್ಲವೂ ಹೋಗಿ, ಹಲ್ವಾಗೆ ಹೊಳಪು ಬಂದ ನಂತರ, ಉಳಿದ ತುಪ್ಪ, ಜಾಕಾಯಿಪುಡಿ ಸೇರಿಸಿ, ಪಾತ್ರೆಯನ್ನು ಒಲೆಯ ಮೇಲಿಂದ ಇಳಿಸಿ.
ಬದಲಿ ವಿಧಾನ:
ಕಲ್ಲಂಗಡಿ ಹಣ್ಣಿನ ಬೀಜಗಳ ಹಲ್ವಾ:
ಸಿಪ್ಪೆ ಸುಲಿದ ಕಲ್ಲಂಗಡಿಹಣ್ಣಿನ ಬೀಜಗಳಿಗೆ ತಕ್ಕಷ್ಟು ನೀರು ಸೇರಿಸಿ ಚೆನ್ನಾಗಿ ರುಬ್ಬಿಕೊಳ್ಳಿ. ಇದನ್ನು ಕುಕ್ಕರಿನಲ್ಲಿ ಬೇಯಿಸಬೇಡಿ. ಈ ಮಿಶ್ರಣಕ್ಕೆ ಸಕ್ಕರೆ ಸೇರಿಸಿ. ಉಳಿದ ವಿಧಾನವನ್ನು ಮುಂದುವರೆಸಿರಿ. ಜಾಕಾಯಿಪುಡಿಯನ್ನು ಸೇರಿಸುವ ಅಗತ್ಯವಿರುವುದಿಲ್ಲ.
ಕುಂಬಳಕಾಯಿ ಬೀಜಗಳ ಹಲ್ವಾ :
ಸಿಪ್ಪೆ ಸುಲಿದಬೀಜಗಳನ್ನು 1 ಗಂಟೆ ನೀರಿನಲ್ಲಿ ನೆನೆಸಿಡಿ. ಬೀಜಗಳನ್ನು ನೀರಿನಿಂದ ಹೊರತಗೆದು, ಸ್ವಲ್ಪ ಅಕ್ಕಿ ಹಿಟ್ಟು ಸೇರಿಸಿ ಅವುಗಳನ್ನು ಒರಟಾದ ಕಲ್ಲಿನ ಮೇಲೆ ಉಜ್ಜಿರಿ. ಬೀಜಗಳ ಮೇಲಿರುವ ಬಣ್ಣ ಹಾಗು ಹೊಟ್ಟು ಹೋಗುವವರೆಗೂ ಈ ವಿಧಾನವನ್ನು ಅನುಸರಿಸಿ. ನಂತರ ಬೀಜಗಳನ್ನು ಚೆನ್ನಾಗಿ ತೊಳೆದು, ಮೇಲೆ ಹೇಳಿದ ವಿಧಾನವನ್ನು ಮುಂದುವರೆಸಿರಿ.
(ದಟ್ಸ್ ಕನ್ನಡ ಪಾಕಶಾಲೆ)



Click it and Unblock the Notifications