Latest Updates
-
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು
ಸಿಹಿಪಾಕಶಾಲೆ:ಹೊಸಬಗೆಯ ಗಸಗಸೆ ಹಲ್ವಾ
ಸುಲಭವಾಗಿ ಮಾಡಬಹುದಾದಹಲ್ವಾಗಳಲ್ಲಿ ಗಸಗಸೆ ಹಲ್ವ ಕೂಡ ಒಂದು.ಇಲ್ಲಿ ಕೊಟ್ಟಿರುವ ವಿಧಾನದಲ್ಲಿ ಅಲ್ಪ ಸ್ವಲ್ಪ ಬದಲಾವಣೆ ಮಾಡಿಕೊಂಡು ಕಲ್ಲಂಗಡಿ ಹಣ್ಣಿನ ಬೀಜ ಹಾಗೂ ಸಿಹಿಗುಂಬಳ ಕಾಯಿ ಬೀಜಗಳ ಹಲ್ವಾವನ್ನು ತಯಾರಿಸಬಹುದು.
ಬೇಕಾಗುವ ಪದಾರ್ಥಗಳು:
ಗಸಗಸೆ:1ಕಪ್
ಸಕ್ಕರೆ:ಒಂದುಕಾಲು ಕಪ್
ತುಪ್ಪ : 2 ಟೇಬಲ್ ಚಮಚ
ಹಾಲು: ಗಸಗಸೆಯನ್ನು ರುಬ್ಬಲು ಸ್ವಲ್ಪ
ಜಾಕಾಯಿಪುಡಿ ಸ್ವಲ್ಪ
ಮಾಡುವ ವಿಧಾನ:
*ಗಸಗಸೆಯನ್ನು ಬಿಸಿ ನೀರಿನಲ್ಲಿ 4 ಅಥವಾ 5 ಗಂಟೆ ನೆನೆಸಿರಿ .
*ಅಧಿಕವಾದ ನೀರನ್ನು ಬಸಿದು, ಸ್ವಲ್ಪ ಹಾಲು ಸೇರಿಸಿ ಗಸಗಸೆಯನ್ನು ಮೃದುವಾದ ಪೇಸ್ಟ್ ನಂತೆ ರುಬ್ಬಿರಿ.
*ಈ ಪೇಸ್ಟನ್ನು ಒಂದು ಪಾತ್ರೆಯಲ್ಲಿ ಹಾಕಿ, ಕುಕ್ಕರ್ ನಲ್ಲಿಟ್ಟು ಒಂದು ವಿಷಲ್ ಬರುವವರೆಗೂ ಬೇಯಿಸಿ.
*ಇದನ್ನು ತಣ್ಣಗಾಗಿಸಿ, ಸಕ್ಕರೆ ಸೇರಿಸಿ ದಪ್ಪ ತಳದ ಬಾಣಲೆಯಲ್ಲಿ ಸತತವಾಗಿ ಕಲೆಸುತ್ತಾ ಕುದಿಸಿರಿ.
*ಇದು ಬಾಣಲೆಯ ಅಡಿಭಾಗಕ್ಕೆ ಅಂಟಿಕೊಳ್ಳುವಾಗ, ಸ್ವಲ್ಪಸ್ವಲ್ಪವಾಗಿ ತುಪ್ಪವನ್ನು ಸೇರಿಸಿ.
*ತೇವವೆಲ್ಲವೂ ಹೋಗಿ, ಹಲ್ವಾಗೆ ಹೊಳಪು ಬಂದ ನಂತರ, ಉಳಿದ ತುಪ್ಪ, ಜಾಕಾಯಿಪುಡಿ ಸೇರಿಸಿ, ಪಾತ್ರೆಯನ್ನು ಒಲೆಯ ಮೇಲಿಂದ ಇಳಿಸಿ.
ಬದಲಿ ವಿಧಾನ:
ಕಲ್ಲಂಗಡಿ ಹಣ್ಣಿನ ಬೀಜಗಳ ಹಲ್ವಾ:
ಸಿಪ್ಪೆ ಸುಲಿದ ಕಲ್ಲಂಗಡಿಹಣ್ಣಿನ ಬೀಜಗಳಿಗೆ ತಕ್ಕಷ್ಟು ನೀರು ಸೇರಿಸಿ ಚೆನ್ನಾಗಿ ರುಬ್ಬಿಕೊಳ್ಳಿ. ಇದನ್ನು ಕುಕ್ಕರಿನಲ್ಲಿ ಬೇಯಿಸಬೇಡಿ. ಈ ಮಿಶ್ರಣಕ್ಕೆ ಸಕ್ಕರೆ ಸೇರಿಸಿ. ಉಳಿದ ವಿಧಾನವನ್ನು ಮುಂದುವರೆಸಿರಿ. ಜಾಕಾಯಿಪುಡಿಯನ್ನು ಸೇರಿಸುವ ಅಗತ್ಯವಿರುವುದಿಲ್ಲ.
ಕುಂಬಳಕಾಯಿ ಬೀಜಗಳ ಹಲ್ವಾ :
ಸಿಪ್ಪೆ ಸುಲಿದಬೀಜಗಳನ್ನು 1 ಗಂಟೆ ನೀರಿನಲ್ಲಿ ನೆನೆಸಿಡಿ. ಬೀಜಗಳನ್ನು ನೀರಿನಿಂದ ಹೊರತಗೆದು, ಸ್ವಲ್ಪ ಅಕ್ಕಿ ಹಿಟ್ಟು ಸೇರಿಸಿ ಅವುಗಳನ್ನು ಒರಟಾದ ಕಲ್ಲಿನ ಮೇಲೆ ಉಜ್ಜಿರಿ. ಬೀಜಗಳ ಮೇಲಿರುವ ಬಣ್ಣ ಹಾಗು ಹೊಟ್ಟು ಹೋಗುವವರೆಗೂ ಈ ವಿಧಾನವನ್ನು ಅನುಸರಿಸಿ. ನಂತರ ಬೀಜಗಳನ್ನು ಚೆನ್ನಾಗಿ ತೊಳೆದು, ಮೇಲೆ ಹೇಳಿದ ವಿಧಾನವನ್ನು ಮುಂದುವರೆಸಿರಿ.
(ದಟ್ಸ್ ಕನ್ನಡ ಪಾಕಶಾಲೆ)



Click it and Unblock the Notifications