Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಸಿಹಿ ತಿನಿಸುಗಳ ರಾಜ ಶ್ರೀಖಂಡ

ಇನ್ನು ಇದರ ರುಚಿಯೋ... ಭೇಷ್ ಭೇಷ್ ಅನ್ನುವಷ್ಟು ಸಖತ್ತಾಗಿರುತ್ತದೆ. ಈ ಸಿಹಿಯನ್ನು ಊಟದ ಜೊತೆ ಮಾತ್ರವಲ್ಲ ತಿಂಡಿಯೊಡನೆಯೂ ತಿನ್ನಬಹುದು. ಅದರಲ್ಲೂ ಪೂರಿಯೊಂದಿಗೆ ಶ್ರೀಖಂಡ ಹೇಳಿ ಮಾಡಿಸಿದ ಜೋಡಿ. ತಿಂದರೆ ಪೂರಿಗಳ ಲೆಕ್ಕ ಸಿಗಲಿಕ್ಕಿಲ್ಲ, ಬಿಟ್ಟರೆ ಶ್ರೀಖಂಡದ ರುಚಿ ದಕ್ಕಲಿಕ್ಕಿಲ್ಲ.
ಇದನ್ನು ತಯಾರಿಸುವ ಬಗೆ ತುಂಬಾ ಕ್ಲಿಷ್ಟಕರವಾಗಿರಬಹುದೆಂದೇನಾದರೂ ನೀವು ಊಹಿಸಿದ್ದರೆ, ನಿಮ್ಮ ಊಹೆಯನ್ನು ಪಕ್ಕಕ್ಕಿಡಿ. ಬೇರೆ ಯಾವುದೇ ಸಿಹಿಯನ್ನು ತಯಾರಿಸುವುದಕ್ಕಿಂತ ಸುಲಭವಾಗಿ ಇದನ್ನು ತಯಾರಿಸಬಹುದು. ಇದನ್ನು ನಂಬಲು ಒಮ್ಮೆ ಮನೆಯಲ್ಲಿಯೇ ಶ್ರೀಖಂಡ ತಯಾರಿಸಿ ನೋಡಿ.
ಬೇಕಾಗುವ ಪದಾರ್ಥಗಳು
* ಗಟ್ಟಿ ಮೊಸರು 6 ಬಟ್ಟಲು
* ಸಕ್ಕರೆ 3 ಬಟ್ಟಲು
* ಕೇಸರಿ ಬಣ್ಣ
* ಏಲಕ್ಕಿ ಪುಡಿ
* ಗೋಡಂಬಿ, ಒಣದ್ರಾಕ್ಷಿ, ಬಾದಾಮಿ
ಮಾಡುವ ವಿಧಾನ
ಉತ್ತಮ ಗುಣಮಟ್ಟದ ಹಾಲು ತಂದು ಬೆಳಿಗ್ಗೆಯೇ ಹೆಪ್ಪು ಹಾಕಿ. ಸಾಯಂಕಾಲದ ಹೊತ್ತಿಗೆ ಮೊಸರಾಗುತ್ತಿದ್ದಂತೆ ಅದನ್ನು ತೆಳ್ಳನೆಯ ಬಟ್ಟೆಯಲ್ಲಿ ಸುರಿದು ಗಂಟುಕಟ್ಟಿ ಗೂಟಕ್ಕೆ ನೇತು ಹಾಕಿ. ಬೆಳಗಿನ ಜಾವಕ್ಕೆ ನೀರೆಲ್ಲ ಬಸಿದನಂತರ ಒಂದು ಪಾತ್ರೆಗೆ ತೆಗೆದು ಸಕ್ಕರೆ ಹಾಕಿ ಚೆನ್ನಾಗಿ ಕೈಯಾಡಿಸಿ. ಜೊತೆಜೊತೆಗೇ ಏಲಕ್ಕಿ ಪುಡಿ ಮತ್ತು ಕೇಸರಿ ಬಣ್ಣ ಹಾಕಿ ಕೈಯಾಡಿಸಿ. ಮೊಸರು ಹುಳಿಯಾಗಿರುವುದರಿಂದ ರುಚಿಗೆ ತಕ್ಕಷ್ಟು ಸಕ್ಕರೇ ಸೇರಿಸಿ. ದಟ್ಸಾಲ್! ಸಿಹಿಸಿಹಿ ಶ್ರೀಖಂಡ ರೆಡಿ.
ಇದನ್ನು ಪೂರಿ ಅಥವಾ ಚಪಾತಿಯೊಂದಿಗೆ ತಾಜಾ ಇರುವಾಗಲೇ ತಿನ್ನಬಹುದು. ಅಥವಾ ಬೇಸಿಗೆಯಲ್ಲಿ ಅದನ್ನು ಫ್ರಿಜ್ಜಲ್ಲಿ ಇಟ್ಟು ತಣ್ಣಗಾದ ನಂತರ ಮೆಲ್ಲಬಹುದು.
ಮರೆತ ಮಾತು : ಕೆಲ ಓದುಗರು ತಿಳಿಸಿದಂತೆ, ಗೋಡಂಬಿ, ಒಣದ್ರಾಕ್ಷಿ, ಬಾದಾಮಿಗಳನ್ನು ಶ್ರೀಖಂಡಕ್ಕೆ ಸೇರಿದರೆ ಅದರ ರುಚಿ ಮತ್ತಷ್ಟು ಜಾಸ್ತಿಯಾಗುತ್ತದೆ.
ಇದನ್ನೂ ಓದಿರಿ



Click it and Unblock the Notifications