Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಹಲಸಿನ ಪಾಯಸದ ರುಚಿ ಮರೆಯುವಂತಿಲ್ಲ

ಹಲಸಿನಿಂದ ಬಗೆಬಗೆ ತಿನಿಸು ಮಾಡಿದರೂ, ಥಟ್ಟನೆ ನೆನಪಾಗುವುದು ಪಾಯಸ. ಮುಂಚೆಲ್ಲಾ ಮಲೆನಾಡಿನಲ್ಲಿ ಎಲ್ಲಾ ಶುಭ ಸಮಾರಂಭಕ್ಕೂ ಎಲೆ ಮೊದಲಿಗೆ ಖಾಯಂ ಆಗಿರುತ್ತಿದ್ದ ಹಲಸಿನ ಪಾಯಸದ ಸ್ಥಾನವನ್ನು ಕ್ರಮೇಣ ಗೇರುಹಣ್ಣು, ಗೋಡಂಬಿ, ಇತರೆ ಹಣ್ಣುಗಳ ಮಿಶ್ರಣ ಆಕ್ರಮಿಸಿದೆ. ಇರಲಿ, ನಾವು ಹಳೆಯದನ್ನು ಮರೆಯುವಂತಿಲ್ಲ. ಹಲಸಿನ ರುಚಿ ನೋಡದೆ ಬಿಡುವಂತಿಲ್ಲ. ಒಪ್ಪಿಸಿಕೊಳ್ಳಿ
ತಯಾರಿಗೆ ಈ ಪದಾರ್ಥಗಳು ಬೇಕು :
ಹಲಸಿನ ಹಣ್ಣಿನ ತೊಳೆಗಳು-20 ಅಥವಾ ಅಧಿಕ ಮಾಗಿದ ಹಣ್ಣು ಇರಲಿ.
ತುಪ್ಪ-ಒಂದೂವರೆ ಕಪ್
ಬೆಲ್ಲದ ತುರಿ-3/4 ಕಪ್,
ತೆಂಗಿನಕಾಯಿ ತುರಿ-1/2 ಕಪ್,
ಏಲಕ್ಕಿ ಪುಡಿ:1/4 ಟೀ ಚಮಚ
ಗೋಡಂಬಿ ಚೂರುಗಳುಬೇಕಾದಷ್ಟು,
ತಯಾರಿಸುವ ಬಗೆ ಹೀಗೆ:
*ತೆಂಗಿನಕಾಯಿತುರಿಗೆ ಸ್ವಲ್ಪ ನೀರು ಸೇರಿಸಿ ರುಬ್ಬಿಕೊಳ್ಳಿ. ಎರಡಾವರ್ತಿಕಾಯಿ ಹಾಲನ್ನು ತೆಗೆಯಿರಿ.
*ಹಲಸಿನ ತೊಳೆಗಳಲ್ಲಿರುವ ಬೀಜಗಳನ್ನು ತಗೆದು, ತೊಳೆಗಳನ್ನು ಸಣ್ಣ ಚೂರುಗಳನ್ನಾಗಿ ಕತ್ತರಿಸಿ.
* ಒಂದು ಪಾತ್ರೆಯಲ್ಲಿ ಒಂದು ಕಪ್ ನೀರನ್ನು ಬಿಸಿಮಾಡಿ. ನೀರು ಕುದಿಯಲು ಬಿಡಿ. ನೀರು ಕುದಿಯತೊಡಗಿದಾಗ ಅದಕ್ಕೆ ಹಲಸಿನ ತೊಳೆಗಳನ್ನು ಸೇರಿಸಿ, ಅವು ತೀರಾ ಮೆತ್ತಗಾಗುವವರೆಗೂ ಕುದಿಸಿ.
* ಕುದಿಯುತ್ತಿರುವ ನೀರಿಗೆ ಬೆಲ್ಲದ ತುರಿ ಹಾಗೂ ಕಾಯಿ ಹಾಲನ್ನು ಸೇರಿಸಿ.
ಕಾಯಿ ಹಾಲು ಬೆರಸುವಾಗ ಉರಿಯು ಕಡಿಮೆಯಾಗಿರಲಿ ಹಾಗೂ ಬೆಲ್ಲವು ಸಂಪೂರ್ಣವಾಗಿ ಕರಗುವಂತೆ ನೋಡಿಕೊಳ್ಳಿ.
*ಗೋಡಂಬಿಯನ್ನು ತುಪ್ಪದಲ್ಲಿ ಹುರಿದಿಟ್ಟುಕೊಳ್ಳಿ. ತುಪ್ಪವನ್ನು ಸ್ವಲ್ಪ ಬಿಸಿ ಮಾಡಿಕೊಂಡು ಸೇರಿಸಿ ನಂತರ ಪಾಯಸದೊಡನೆ ಬೆರಸಿ. ಕುದಿತದಿಂದ ಒಳ್ಳೆಯ ಸುವಾಸನೆ ಬಂದ ನಂತರ ಒಲೆಯಿಂದ ಇಳಿಸಿ.ಎಲ್ಲರಿಗೂ ಬಡಿಸಿ, ಆನಂದಿಸಿ.
ಪೂರಕ ಮಾಹಿತಿ:
ಬಹುಪಯೋಗಿ ಹಣ್ಣಿನ ಮರ - ಹಲಸು - ಕುರಿತು ರಾಷ್ಟ್ರೀಯ ಕಾರ್ಯಾಗಾರ ಮೇ. 21 ಹಾಗೂ ಮೇ.22 ರಂದು ಬೆಂಗಳೂರಿನ ಜಿಕೆವಿಕೆಯ ಕುವೆಂಪು ಸಭಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಾಗಾರದಲ್ಲಿ ಸುಮಾರು 200 ರೈತರು, 50 ವಿಜ್ಞಾನಿಗಳು ಹಾಗೂ 50 ಉದ್ದಿಮೆದಾರರು ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಭಾಗವಹಿಸಲಿದ್ದಾರೆ ಹಾಗೂ ಕಾರ್ಯಾಗಾರದಲ್ಲಿ 50ಕ್ಕೂ ಹೆಚ್ಚು ವಿಷಯಗಳ ಮಂಡನೆಯಾಗಲಿದೆ.
ಹಲಸಿನ ಹಣ್ಣಿನಲ್ಲಿ ಎ ಮತ್ತು ಸಿ ಜೀವಸತ್ವಗಳು ಹಾಗೂ ಖನಿಜ ಪದಾರ್ಥಗಳಿವೆ. ಇದರಲ್ಲಿ ಪೊಟಾಸಿಯಂ ಅಂಶ ಹೆಚ್ಚಿರುವುದರಿಂದ ರಕ್ತದೊತ್ತಡ ಇರುವವರಿಗೆ ಬಹಳ ಉಪಯುಕ್ತ. ಕೃಷಿ ವಿಶ್ವವಿದ್ಯಾನಿಲಯ ಪ್ರೊ. ರಂಗಣ್ಣ ಅವರ ನೇತೃತ್ವದಲ್ಲಿ ಮೌಲ್ಯವರ್ಧಿತ ಉತ್ಪನ್ನಗಳಾದ ಬಿಸ್ಕತ್, ವಿನೇಗರ್, ಸ್ಕ್ವಾಷ್, ಜ್ಯೂಸ್, ಹಲ್ವ, ವೈನ್, ಸೀಕರಣೆ ತಯಾರಿಸಲಾಗಿದ್ದು ಎರಡು ದಿನ ಪ್ರದರ್ಶನ ಹಾಗೂ ಮಾರಾಟವಿರುತ್ತದೆ.



Click it and Unblock the Notifications











