Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಹಲಸಿನ ಪಾಯಸದ ರುಚಿ ಮರೆಯುವಂತಿಲ್ಲ

ಹಲಸಿನಿಂದ ಬಗೆಬಗೆ ತಿನಿಸು ಮಾಡಿದರೂ, ಥಟ್ಟನೆ ನೆನಪಾಗುವುದು ಪಾಯಸ. ಮುಂಚೆಲ್ಲಾ ಮಲೆನಾಡಿನಲ್ಲಿ ಎಲ್ಲಾ ಶುಭ ಸಮಾರಂಭಕ್ಕೂ ಎಲೆ ಮೊದಲಿಗೆ ಖಾಯಂ ಆಗಿರುತ್ತಿದ್ದ ಹಲಸಿನ ಪಾಯಸದ ಸ್ಥಾನವನ್ನು ಕ್ರಮೇಣ ಗೇರುಹಣ್ಣು, ಗೋಡಂಬಿ, ಇತರೆ ಹಣ್ಣುಗಳ ಮಿಶ್ರಣ ಆಕ್ರಮಿಸಿದೆ. ಇರಲಿ, ನಾವು ಹಳೆಯದನ್ನು ಮರೆಯುವಂತಿಲ್ಲ. ಹಲಸಿನ ರುಚಿ ನೋಡದೆ ಬಿಡುವಂತಿಲ್ಲ. ಒಪ್ಪಿಸಿಕೊಳ್ಳಿ
ತಯಾರಿಗೆ ಈ ಪದಾರ್ಥಗಳು ಬೇಕು :
ಹಲಸಿನ ಹಣ್ಣಿನ ತೊಳೆಗಳು-20 ಅಥವಾ ಅಧಿಕ ಮಾಗಿದ ಹಣ್ಣು ಇರಲಿ.
ತುಪ್ಪ-ಒಂದೂವರೆ ಕಪ್
ಬೆಲ್ಲದ ತುರಿ-3/4 ಕಪ್,
ತೆಂಗಿನಕಾಯಿ ತುರಿ-1/2 ಕಪ್,
ಏಲಕ್ಕಿ ಪುಡಿ:1/4 ಟೀ ಚಮಚ
ಗೋಡಂಬಿ ಚೂರುಗಳುಬೇಕಾದಷ್ಟು,
ತಯಾರಿಸುವ ಬಗೆ ಹೀಗೆ:
*ತೆಂಗಿನಕಾಯಿತುರಿಗೆ ಸ್ವಲ್ಪ ನೀರು ಸೇರಿಸಿ ರುಬ್ಬಿಕೊಳ್ಳಿ. ಎರಡಾವರ್ತಿಕಾಯಿ ಹಾಲನ್ನು ತೆಗೆಯಿರಿ.
*ಹಲಸಿನ ತೊಳೆಗಳಲ್ಲಿರುವ ಬೀಜಗಳನ್ನು ತಗೆದು, ತೊಳೆಗಳನ್ನು ಸಣ್ಣ ಚೂರುಗಳನ್ನಾಗಿ ಕತ್ತರಿಸಿ.
* ಒಂದು ಪಾತ್ರೆಯಲ್ಲಿ ಒಂದು ಕಪ್ ನೀರನ್ನು ಬಿಸಿಮಾಡಿ. ನೀರು ಕುದಿಯಲು ಬಿಡಿ. ನೀರು ಕುದಿಯತೊಡಗಿದಾಗ ಅದಕ್ಕೆ ಹಲಸಿನ ತೊಳೆಗಳನ್ನು ಸೇರಿಸಿ, ಅವು ತೀರಾ ಮೆತ್ತಗಾಗುವವರೆಗೂ ಕುದಿಸಿ.
* ಕುದಿಯುತ್ತಿರುವ ನೀರಿಗೆ ಬೆಲ್ಲದ ತುರಿ ಹಾಗೂ ಕಾಯಿ ಹಾಲನ್ನು ಸೇರಿಸಿ.
ಕಾಯಿ ಹಾಲು ಬೆರಸುವಾಗ ಉರಿಯು ಕಡಿಮೆಯಾಗಿರಲಿ ಹಾಗೂ ಬೆಲ್ಲವು ಸಂಪೂರ್ಣವಾಗಿ ಕರಗುವಂತೆ ನೋಡಿಕೊಳ್ಳಿ.
*ಗೋಡಂಬಿಯನ್ನು ತುಪ್ಪದಲ್ಲಿ ಹುರಿದಿಟ್ಟುಕೊಳ್ಳಿ. ತುಪ್ಪವನ್ನು ಸ್ವಲ್ಪ ಬಿಸಿ ಮಾಡಿಕೊಂಡು ಸೇರಿಸಿ ನಂತರ ಪಾಯಸದೊಡನೆ ಬೆರಸಿ. ಕುದಿತದಿಂದ ಒಳ್ಳೆಯ ಸುವಾಸನೆ ಬಂದ ನಂತರ ಒಲೆಯಿಂದ ಇಳಿಸಿ.ಎಲ್ಲರಿಗೂ ಬಡಿಸಿ, ಆನಂದಿಸಿ.
ಪೂರಕ ಮಾಹಿತಿ:
ಬಹುಪಯೋಗಿ ಹಣ್ಣಿನ ಮರ - ಹಲಸು - ಕುರಿತು ರಾಷ್ಟ್ರೀಯ ಕಾರ್ಯಾಗಾರ ಮೇ. 21 ಹಾಗೂ ಮೇ.22 ರಂದು ಬೆಂಗಳೂರಿನ ಜಿಕೆವಿಕೆಯ ಕುವೆಂಪು ಸಭಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಾಗಾರದಲ್ಲಿ ಸುಮಾರು 200 ರೈತರು, 50 ವಿಜ್ಞಾನಿಗಳು ಹಾಗೂ 50 ಉದ್ದಿಮೆದಾರರು ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಭಾಗವಹಿಸಲಿದ್ದಾರೆ ಹಾಗೂ ಕಾರ್ಯಾಗಾರದಲ್ಲಿ 50ಕ್ಕೂ ಹೆಚ್ಚು ವಿಷಯಗಳ ಮಂಡನೆಯಾಗಲಿದೆ.
ಹಲಸಿನ ಹಣ್ಣಿನಲ್ಲಿ ಎ ಮತ್ತು ಸಿ ಜೀವಸತ್ವಗಳು ಹಾಗೂ ಖನಿಜ ಪದಾರ್ಥಗಳಿವೆ. ಇದರಲ್ಲಿ ಪೊಟಾಸಿಯಂ ಅಂಶ ಹೆಚ್ಚಿರುವುದರಿಂದ ರಕ್ತದೊತ್ತಡ ಇರುವವರಿಗೆ ಬಹಳ ಉಪಯುಕ್ತ. ಕೃಷಿ ವಿಶ್ವವಿದ್ಯಾನಿಲಯ ಪ್ರೊ. ರಂಗಣ್ಣ ಅವರ ನೇತೃತ್ವದಲ್ಲಿ ಮೌಲ್ಯವರ್ಧಿತ ಉತ್ಪನ್ನಗಳಾದ ಬಿಸ್ಕತ್, ವಿನೇಗರ್, ಸ್ಕ್ವಾಷ್, ಜ್ಯೂಸ್, ಹಲ್ವ, ವೈನ್, ಸೀಕರಣೆ ತಯಾರಿಸಲಾಗಿದ್ದು ಎರಡು ದಿನ ಪ್ರದರ್ಶನ ಹಾಗೂ ಮಾರಾಟವಿರುತ್ತದೆ.



Click it and Unblock the Notifications