Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಮಂಗಳಗೌರಿಗೆ ಹೆಸರು ಬೇಳೆ ಪಾಯಸದ ನೈವೇದ್ಯ

ಶ್ರಾವಣದ ಮೊದಲ ಮಂಗಳಗೌರಿ ಹಬ್ಬಕ್ಕೆ ನೈವೇದ್ಯ ಮಾಡಲೇಬೇಕು. ಹೀಗಿದ್ದ ಮೇಲೆ ಏನಾದರೂ ವಿಶೇಷವಾಗಿರುವುದನ್ನೇ ನೈವೇದ್ಯಕ್ಕೆ ಮಾಡಿದರೆ ದೇವಿಗೆ ಸಂತೃಪ್ತಿ. ಈ ರುಚಿ ರುಚಿಯಾದ ಪಾಯಸವನ್ನು ಒಮ್ಮೆ ಮಾಡಿ ನೋಡಿ.
ಬೇಕಾಗುವ ಪದಾರ್ಥಗಳು:
* ಹೆಸರು ಬೇಳೆ 1 ಕಪ್
* ಸಬ್ಬಕ್ಕಿ- 2 ಚಮಚ
* ಬೆಲ್ಲದ ಪುಡಿ 2 ಕಪ್
* ಅರ್ಧ ಚಮಚ ಏಲಕ್ಕಿ ಪುಡಿ
* ಗೋಡಂಬಿ ಮತ್ತು ದ್ರಾಕ್ಷಿ 10
* 2 ಚಮಚ ಹಾಲಿನಲ್ಲಿ ನೆನೆಸಿಟ್ಟ 2 ದಳ ಕೇಸರಿ
* ತುಪ್ಪ ಮತ್ತು ತೆಂಗಿನಕಾಯಿ 1
ಮಾಡುವ ವಿಧಾನ : ಒಂದು ತೆಂಗಿನ ಕಾಯಿಯಲ್ಲಿ ಸ್ವಲ್ಪ ಕಾಯಿ ಕತ್ತರಿಸಿಕೊಂಡು ಚಿಕ್ಕ ಚೂರುಗಳಾಗಿ ಮಾಡಿಟ್ಟುಕೊಳ್ಳಬೇಕು. ಇನ್ನೊಂದು ಸ್ವಲ್ಪ ತೆಂಗಿನ ಕಾಯಿಯನ್ನು ತುರಿದಿಟ್ಟುಕೊಂಡು ಒಂದು ಕಪ್ ನೀರು ಬೆರೆಸಿ ತೆಂಗಿನ ಹಾಲು ತೆಗೆದಿಡಬೇಕು. ಮತ್ತೆ ಅದಕ್ಕೆ ಇನ್ನೊಂದು ಕಪ್ ನೀರು ಬೆರೆಸಿ ಇದರಿಂದಲೂ ತೆಂಗಿನ ಹಾಲು ತೆಗೆದುಕೊಂಡು ಇನ್ನೊಂದು ಬಟ್ಟಲಿನಲ್ಲಿ ಎತ್ತಿಟ್ಟುಕೊಳ್ಳಬೇಕು.
ಹೆಸರು ಬೇಳೆಯನ್ನು ಚೆನ್ನಾಗಿ ಹುರಿದುಕೊಂಡು ಹೆಸರುಬೇಳೆ ಮತ್ತು ಸಬ್ಬಕ್ಕಿಯನ್ನು ಕುಕ್ಕರಿನಲ್ಲಿ ಹಾಕಿ ಬೇಯಿಸಬೇಕು. ಇಳಿಸಿದ ನಂತರ ಇವೆರಡರ ಮಿಶ್ರಣವನ್ನು ಚೆನ್ನಾಗಿ ಮಸೆಯಬೇಕು. ನಂತರ ಪಾತ್ರೆಯೊಂದಕ್ಕೆ ಬೇಳೆ ಮಿಶ್ರಣ ಮತ್ತು ಬೆಲ್ಲದ ಪಾಕವನ್ನು ಒಟ್ಟಿಗೆ ಬೆರೆಸಿಕೊಂಡು 10 ನಿಮಿಷ ಬೇಯಿಸಬೇಕು. ಈಗ ಎರಡನೇ ಬಾರಿ ಎತ್ತಿಟ್ಟಿದ್ದ ತೆಂಗಿನಹಾಲನ್ನು ಇದಕ್ಕೆ ಬೆರೆಸಬೇಕು. ಅದು ಕುದಿಯಲು ಆರಂಭಿಸಿದ ನಂತರ ಮೊದಲನೆ ಬಾರಿ ಎತ್ತಿಟ್ಟಿದ್ದ ತೆಂಗಿನ ಹಾಲನ್ನು ಬೆರೆಸಿ ಒಲೆ ಆರಿಸಬೇಕು.
ಪ್ರತ್ಯೇಕ ಬಾಣಲೆಯಲ್ಲಿ ತುಪ್ಪ ಹಾಕಿ ಬಿಸಿಯಾದ ನಂತರ ಗೋಡಂಬಿ ಚೂರು, ತೆಂಗಿನ ಚೂರು ಮತ್ತು ಒಣದ್ರಾಕ್ಷಿಯನ್ನು ಅದಕ್ಕೆ ಹಾಕಿ ಹುರಿದುಕೊಂಡು ಬೇಳೆಗೆ ಬೆರೆಸಿ, ಕೇಸರಿ ದಳ ಹಾಗೂ ಏಲಕ್ಕಿ ಪುಡಿ ಸೇರಿಸಬೇಕು. ಈಗ ರುಚಿಕಟ್ಟಾದ ಹೆಸರು ಬೇಳೆ ಪಾಯಸ ನೈವೇದ್ಯಕ್ಕೆ ತಯಾರಾಗಿದೆ.



Click it and Unblock the Notifications
