Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಮಂಗಳಗೌರಿಗೆ ಹೆಸರು ಬೇಳೆ ಪಾಯಸದ ನೈವೇದ್ಯ

ಶ್ರಾವಣದ ಮೊದಲ ಮಂಗಳಗೌರಿ ಹಬ್ಬಕ್ಕೆ ನೈವೇದ್ಯ ಮಾಡಲೇಬೇಕು. ಹೀಗಿದ್ದ ಮೇಲೆ ಏನಾದರೂ ವಿಶೇಷವಾಗಿರುವುದನ್ನೇ ನೈವೇದ್ಯಕ್ಕೆ ಮಾಡಿದರೆ ದೇವಿಗೆ ಸಂತೃಪ್ತಿ. ಈ ರುಚಿ ರುಚಿಯಾದ ಪಾಯಸವನ್ನು ಒಮ್ಮೆ ಮಾಡಿ ನೋಡಿ.
ಬೇಕಾಗುವ ಪದಾರ್ಥಗಳು:
* ಹೆಸರು ಬೇಳೆ 1 ಕಪ್
* ಸಬ್ಬಕ್ಕಿ- 2 ಚಮಚ
* ಬೆಲ್ಲದ ಪುಡಿ 2 ಕಪ್
* ಅರ್ಧ ಚಮಚ ಏಲಕ್ಕಿ ಪುಡಿ
* ಗೋಡಂಬಿ ಮತ್ತು ದ್ರಾಕ್ಷಿ 10
* 2 ಚಮಚ ಹಾಲಿನಲ್ಲಿ ನೆನೆಸಿಟ್ಟ 2 ದಳ ಕೇಸರಿ
* ತುಪ್ಪ ಮತ್ತು ತೆಂಗಿನಕಾಯಿ 1
ಮಾಡುವ ವಿಧಾನ : ಒಂದು ತೆಂಗಿನ ಕಾಯಿಯಲ್ಲಿ ಸ್ವಲ್ಪ ಕಾಯಿ ಕತ್ತರಿಸಿಕೊಂಡು ಚಿಕ್ಕ ಚೂರುಗಳಾಗಿ ಮಾಡಿಟ್ಟುಕೊಳ್ಳಬೇಕು. ಇನ್ನೊಂದು ಸ್ವಲ್ಪ ತೆಂಗಿನ ಕಾಯಿಯನ್ನು ತುರಿದಿಟ್ಟುಕೊಂಡು ಒಂದು ಕಪ್ ನೀರು ಬೆರೆಸಿ ತೆಂಗಿನ ಹಾಲು ತೆಗೆದಿಡಬೇಕು. ಮತ್ತೆ ಅದಕ್ಕೆ ಇನ್ನೊಂದು ಕಪ್ ನೀರು ಬೆರೆಸಿ ಇದರಿಂದಲೂ ತೆಂಗಿನ ಹಾಲು ತೆಗೆದುಕೊಂಡು ಇನ್ನೊಂದು ಬಟ್ಟಲಿನಲ್ಲಿ ಎತ್ತಿಟ್ಟುಕೊಳ್ಳಬೇಕು.
ಹೆಸರು ಬೇಳೆಯನ್ನು ಚೆನ್ನಾಗಿ ಹುರಿದುಕೊಂಡು ಹೆಸರುಬೇಳೆ ಮತ್ತು ಸಬ್ಬಕ್ಕಿಯನ್ನು ಕುಕ್ಕರಿನಲ್ಲಿ ಹಾಕಿ ಬೇಯಿಸಬೇಕು. ಇಳಿಸಿದ ನಂತರ ಇವೆರಡರ ಮಿಶ್ರಣವನ್ನು ಚೆನ್ನಾಗಿ ಮಸೆಯಬೇಕು. ನಂತರ ಪಾತ್ರೆಯೊಂದಕ್ಕೆ ಬೇಳೆ ಮಿಶ್ರಣ ಮತ್ತು ಬೆಲ್ಲದ ಪಾಕವನ್ನು ಒಟ್ಟಿಗೆ ಬೆರೆಸಿಕೊಂಡು 10 ನಿಮಿಷ ಬೇಯಿಸಬೇಕು. ಈಗ ಎರಡನೇ ಬಾರಿ ಎತ್ತಿಟ್ಟಿದ್ದ ತೆಂಗಿನಹಾಲನ್ನು ಇದಕ್ಕೆ ಬೆರೆಸಬೇಕು. ಅದು ಕುದಿಯಲು ಆರಂಭಿಸಿದ ನಂತರ ಮೊದಲನೆ ಬಾರಿ ಎತ್ತಿಟ್ಟಿದ್ದ ತೆಂಗಿನ ಹಾಲನ್ನು ಬೆರೆಸಿ ಒಲೆ ಆರಿಸಬೇಕು.
ಪ್ರತ್ಯೇಕ ಬಾಣಲೆಯಲ್ಲಿ ತುಪ್ಪ ಹಾಕಿ ಬಿಸಿಯಾದ ನಂತರ ಗೋಡಂಬಿ ಚೂರು, ತೆಂಗಿನ ಚೂರು ಮತ್ತು ಒಣದ್ರಾಕ್ಷಿಯನ್ನು ಅದಕ್ಕೆ ಹಾಕಿ ಹುರಿದುಕೊಂಡು ಬೇಳೆಗೆ ಬೆರೆಸಿ, ಕೇಸರಿ ದಳ ಹಾಗೂ ಏಲಕ್ಕಿ ಪುಡಿ ಸೇರಿಸಬೇಕು. ಈಗ ರುಚಿಕಟ್ಟಾದ ಹೆಸರು ಬೇಳೆ ಪಾಯಸ ನೈವೇದ್ಯಕ್ಕೆ ತಯಾರಾಗಿದೆ.



Click it and Unblock the Notifications