Latest Updates
-
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್ -
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ!
ಹಯಗ್ರೀವ ನೆನೆಯದ ನರಜನ್ಮವೇಕೆ!

* ಚಂದ್ರಿಕಾ ಗುರುರಾಜ್, ಚೆನ್ನೈ
ಕಲಿಯುಗದ ಏಕೈಕ ದೇವರು ಎಂದೇ ಖ್ಯಾತರಾಗಿರುವ ಶ್ರೀ ರಾಘವೇಂದ್ರ ಸ್ವಾಮಿಗಳು ಯಾವುದೇ ಕುಲ, ಜಾತಿ, ಅಂತಸ್ತನ್ನು ಮೀರಿದ ಯತಿವರೇಣ್ಯರು. ಅನೇಕ ರಾಯರ ಮಠಗಳಲ್ಲಿ ಮೂರುದಿನಗಳ ಕಾಲವೂ ಅನ್ನಸಂತರ್ಪಣೆ ಕಾರ್ಯಕ್ರಮವಿರುತ್ತದೆ. ಲಕ್ಷಾನುಲಕ್ಷ ಭಕ್ತರು ಮಠಗಳಿಗೆ ಬಂದು ರಾಯರಿಗೆ ಭಕ್ತಿಪೂರ್ವಕವಾಗಿ ನಮಿಸಿ ಪ್ರಸಾದ ಸ್ವೀಕರಿಸಿ ಕೃತಾರ್ಥರಾಗುತ್ತಾರೆ.
ಈ ಅನ್ನಸಂತರ್ಪಣೆಗಳಲ್ಲಿ ಮತ್ತು ಮಾಧ್ವ ಬ್ರಾಹ್ಮಣರ ಮನೆಗಳಲ್ಲಿ ಶ್ರೀ ಮಧ್ವಾಚಾರ್ಯರಿಗೆ ಅತ್ಯಂತ ಪ್ರಿಯವಾದ ಹಯಗ್ರೀವ ಸಿಹಿ ಪದಾರ್ಥವನ್ನು ತಯಾರಿಸದೆ ಆರಾಧನೆ ಪೂರ್ಣಗೊಳ್ಳುವುದಿಲ್ಲ. ತಿಂದಷ್ಟೂ ತೃಪ್ತಿಯನ್ನು ತಂದುಕೊಡುವ ಸಿಹಿ ಹಯಗ್ರೀವ. ಮಧ್ವನವಮಿಯಂದು ತಪ್ಪದೆ ತಯಾರಾಗುವ ಈ ಸಿಹಿಯನ್ನು ರಾಯರ ಆರಾಧನೆಯಂದೂ ಮಾಡುತ್ತಾರೆ.
ಪುರಾಣ ಕಾಲದಲ್ಲಿ ಶ್ರೀ ವಾದಿರಾಜರು ತಲೆಯ ಮೇಲೆ ಕಡಲೆಬೇಳೆ ಮತ್ತು ಬೆಲ್ಲದ ಹೂರಣವನ್ನು ನೈವೇದ್ಯರೂಪದಲ್ಲಿ ತಲೆಯ ಮೇಲೆ ಹೊತ್ತುಕುಳಿತಿದ್ದಾಗ ವಿಷ್ಣು ಹಯ ಅಂದರೆ ಕುದುರೆಯ ರೂಪದಲ್ಲಿ ಬಂದು ನೈವೇದ್ಯ ಸ್ವೀಕರಿಸಿ ಹೋಗುತ್ತಾರೆ. ಈ ಕಾರಣದಿಂದಲೇ ಈ ಸಿಹಿ ತಿನಿಸಿಗೆ ಹಯಗ್ರೀವ ಅಂತ ಹೆಸರು ಬಂದಿದೆ ಎಂಬುದು ಒಂದು ವಾದ. ಈ ವಿವರಣೆಯಲ್ಲಿ ತಪ್ಪಿದ್ದರೆ ಅಥವಾ ತಿದ್ದುಪಡಿಯಿದ್ದರೆ ಬಲ್ಲವರು ತಿಳಿಸಬೇಕೆಂದು ವಿನಂತಿ.
ಹಯಗ್ರೀವದ ರುಚಿಯನ್ನು ತಿಂದವನೇ ಬಲ್ಲ. ಇದನ್ನು ಯಾರು ಬೇಕಾದರೂ ಯಾವ ಸಂದರ್ಭದಲ್ಲಿಯಾದರೂ ತಯಾರಿಸಿ ತಿನ್ನಬಹುದು. ಈಗ ಈ ಸಿಹಿಯನ್ನು ಮಾಡುವ ವಿಧಾನವನ್ನು ತಿಳಿಯೋಣ.
ಬೇಕಾಗುವ ಪದಾರ್ಥಗಳು
ಕಡಲೆಬೇಳೆ 1 ಕಪ್
ಬೆಲ್ಲ 1 ಕಪ್
ಒಣ ಕೊಬ್ಬರಿ ಅರ್ಧ ಕಪ್
ಗಸಗಸೆ 5 ಚಮಚದಷ್ಟು
ಒಣ ಹಣ್ಣುಗಳಾದ ಬಾದಾಮಿ, ಗೋಡಂಬಿ, ಒಣದ್ರಾಕ್ಷಿ ಇತ್ಯಾದಿ
ತುಪ್ಪ, ಏಲಕ್ಕಿ ಪುಡಿ, ಲವಂಗ
ಮಾಡುವ ವಿಧಾನ
* ಮೊದಲಿಗೆ ಕಡಲೆಬೇಳೆಯನ್ನು ಕುಕ್ಕರಿನಲ್ಲಿ ಇಟ್ಟು ಬೇಯಿಸಿ ತೆಗೆದಿಟ್ಟುಕೊಳ್ಳಬೇಕು. ಕುಕ್ಕರು ತಣ್ಣಗಾದನಂತರ ಬೇಳೆಯಲ್ಲಿದ್ದ ನೀರನ್ನು ಬಸಿಯಬೇಕು.
* ಒಣಹಣ್ಣುಗಳನ್ನು ಒಂದು ತವಾದಲ್ಲಿ ಚಮಚದಷ್ಟು ತುಪ್ಪ ಹಾಕಿ ಹುರಿದಿಟ್ಟುಕೊಳ್ಳಬೇಕು.
* ಗಸಗಸೆಯನ್ನು ಕೂಡ ಅರ್ಧ ಚಮಚ ತುಪ್ಪ ಹಾಕಿ ಹುರಿದಿಟ್ಟುಕೊಳ್ಳಬೇಕು.
* ನಂತರ ಹೆರಿದಿಟ್ಟುಕೊಂಡಿದ್ದ ಅಥವಾ ಕುಟ್ಟಿಪುಡಿ ಮಾಡಿಟ್ಟುಕೊಂಡಿದ್ದ ಬೆಲ್ಲಕ್ಕೆ ಸ್ವಲ್ಪ ನೀರು ಸೇರಿಸಿ ಒಲೆಯ ಮೇಲಿಟ್ಟು ನೀರು ಪಾಕವಾಗುವತನಕ ಕಾಯಿಸಬೇಕು.
* ಬೆಲ್ಲದ ಪಾಕ ತಯಾರುಗಾತ್ತಿದ್ದಂತೆ ಅದಕ್ಕೆ ಬೇಯಿಸಿ ನೀರು ಬಸಿದ ಕಡಲೆಬೇಳೆಯನ್ನು ಸುರಿಯಬೇಕು. ಅದಕ್ಕೆ ತುರಿದಿಟ್ಟುಕೊಂಡು ಒಣಕೊಬ್ಬರಿ, ಗಸಗಸೆ, ಡ್ರೈ ಫ್ರುಟ್ಸ್, ಏಲಕ್ಕಿ ಪುಡಿ, ಲವಂಗಗಳನ್ನು ಸೇರಿಸಿ ಮತ್ತೆ ಬೇಯಿಸಬೇಕು. ಈ ಮಿಶ್ರಣ ಎಲ್ಲೂ ತಳಹಿಡಿಯದಂತೆ ಕೈಯಾಡಿಸುತ್ತಲೇ ಇರಬೇಕು. ಇಲ್ಲದಿದ್ದರೆ ಬೇಗನೆ ಹೊತ್ತಿ ರುಚಿಯೆಲ್ಲ ಕೆಟ್ಟುಹೋಗುತ್ತದೆ.
ಊಟ ಮಾಡುವಾಗ ರಾಯರನ್ನು ಮನದಲ್ಲೇ ನೆನೆದು ಹಯಗ್ರೀವವನ್ನು ಮೆಲ್ಲಿರಿ.



Click it and Unblock the Notifications