Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಗಣಪನಿಗೆ ಇಷ್ಟವಾದ ಕಡುಬು ನಿಮಗಿಷ್ಟ ತಾನೆ?

ಕಡುಬು ಮಾಡಲು ಏನೇನು ಬೇಕು?
* 1 ಪಾವು ಬೆಲ್ಲ
* 1 ಪಾವು ತೊಗರಿಬೇಳೆ
* 1 ಪಾವು ಚಿರೋಟಿರವೆ
* ಒಣಕೊಬ್ಬರಿ, ಗಸಗಸೆ
* ಏಲಕ್ಕಿ, ದ್ರಾಕ್ಷಿ, ಗೋಡಂಬಿ, ಪಚ್ಚಕರ್ಪೂರ
* ಚೂರು ಒಣಶುಂಠಿ
*ತುಪ್ಪ ಅಥವಾ ಎಣ್ಣೆ
ಕಡುಬು ಮಾಡುವುದು ಹೇಗೆ?
* ಹೂರಣ: ತೊಗರಿಬೇಳೆಯನ್ನು ಕುಕ್ಕರಿನಲ್ಲಿ ಬೇಯಿಸಿ ನೀರು ಬಸಿದು ತಣ್ಣಗಾದ ಮೇಲೆ ಬೆಲ್ಲದ ಜತೆಗೆ ಹೋಳಿಗೆ ಹೂರಣಕ್ಕಿಂತ ಸ್ವಲ್ಪ ಗಟ್ಟಿಯಾಗಿ ರುಬ್ಬಿಕೊಳ್ಳಬೇಕು. ತುಪ್ಪದಲ್ಲಿ ಹುರಿದ ಗಸಗಸೆ, ದ್ರಾಕ್ಷಿಗೆ ಕೊಬ್ಬರಿ ತುರಿ ಬೆರಸಿ ಹೂರಣದೊಂದಿಗೆ ಕಲಸಿ. ಕೊನೆಗೆ ಏಲಕ್ಕಿ ಪುಡಿ, ಪಚ್ಚಕರ್ಪೂರ, ಒಣಶುಂಠಿ ಬೆರೆಸಿದರೆ ಹೂರಣ ಘಮಘಮ ಎನ್ನುತ್ತದೆ.
* ಕಣಕ: ಚಿರೋಟಿ ರವೆಗೆ ಎರಡು ಚಮಚ ತುಪ್ಪ, ಸ್ವಲ್ಪ ಎಣ್ಣೆ , ಚೂರು ಉಪ್ಪು ಬೆರೆಸಿ ಪೂರಿಹಿಟ್ಟಿನ ಹದಕ್ಕೆ ಕಲಸಿಕೊಳ್ಳಬೇಕು. ಹಿಟ್ಟಿನ ಮೇಲೆ ಒದ್ದೆ ಬಟ್ಟೆ ಮುಚ್ಚಿಡಬೇಕು. ಹಿಟ್ಟು ಒಂದು ಗಂಟೆ ನೆನೆದ ನಂತರ ಪೂರಿ ತರಹ ತೆಳುವಾಗಿ ಲಟ್ಟಿಸಬೇಕು. ಹೂರಣವನ್ನು ಸಣ್ಣ ಉಂಡೆಗಳನ್ನಾಗಿ ಮಾಡಿ ಲಟ್ಟಿಸಿದ ಹಿಟ್ಟಿನ ಮೇಲಿಟ್ಟು ಕಡುಬಿನಾಕಾರಕ್ಕೆ ಮಡಿಚಿ, ಅಂಚನ್ನು ಒತ್ತಿ ಕಾದ ಎಣ್ಣೆಯಲ್ಲಿ ಅಥವಾ ತುಪ್ಪದಲ್ಲಿ ಕರಿಯಬೇಕು.
ಈಗ ಘಮ ಘಮ ಎನ್ನುವ ಗರಿಗರಿಯಾದ ಕಡುಬು ರೆಡಿಯಾಗಿದೆ. ಗಣಪನ ಮುಂದೆ ನೈವೇದ್ಯಕ್ಕೆ ಇಟ್ಟು ನಂತರ ಮನೆಗೆ ಬಂದವರೊಂದಿಗೂ ಹಂಚಿ ತಿನ್ನಿ. ನೀವು ಮಾಡಿದ ಕಡುಬನ್ನು ತಿಂದವರು ಹೊಗಳದೆ ಹಿಂದಿರುಗುವುದಿಲ್ಲ.



Click it and Unblock the Notifications











