Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಗಣಪನಿಗೆ ಇಷ್ಟವಾದ ಕಡುಬು ನಿಮಗಿಷ್ಟ ತಾನೆ?

ಕಡುಬು ಮಾಡಲು ಏನೇನು ಬೇಕು?
* 1 ಪಾವು ಬೆಲ್ಲ
* 1 ಪಾವು ತೊಗರಿಬೇಳೆ
* 1 ಪಾವು ಚಿರೋಟಿರವೆ
* ಒಣಕೊಬ್ಬರಿ, ಗಸಗಸೆ
* ಏಲಕ್ಕಿ, ದ್ರಾಕ್ಷಿ, ಗೋಡಂಬಿ, ಪಚ್ಚಕರ್ಪೂರ
* ಚೂರು ಒಣಶುಂಠಿ
*ತುಪ್ಪ ಅಥವಾ ಎಣ್ಣೆ
ಕಡುಬು ಮಾಡುವುದು ಹೇಗೆ?
* ಹೂರಣ: ತೊಗರಿಬೇಳೆಯನ್ನು ಕುಕ್ಕರಿನಲ್ಲಿ ಬೇಯಿಸಿ ನೀರು ಬಸಿದು ತಣ್ಣಗಾದ ಮೇಲೆ ಬೆಲ್ಲದ ಜತೆಗೆ ಹೋಳಿಗೆ ಹೂರಣಕ್ಕಿಂತ ಸ್ವಲ್ಪ ಗಟ್ಟಿಯಾಗಿ ರುಬ್ಬಿಕೊಳ್ಳಬೇಕು. ತುಪ್ಪದಲ್ಲಿ ಹುರಿದ ಗಸಗಸೆ, ದ್ರಾಕ್ಷಿಗೆ ಕೊಬ್ಬರಿ ತುರಿ ಬೆರಸಿ ಹೂರಣದೊಂದಿಗೆ ಕಲಸಿ. ಕೊನೆಗೆ ಏಲಕ್ಕಿ ಪುಡಿ, ಪಚ್ಚಕರ್ಪೂರ, ಒಣಶುಂಠಿ ಬೆರೆಸಿದರೆ ಹೂರಣ ಘಮಘಮ ಎನ್ನುತ್ತದೆ.
* ಕಣಕ: ಚಿರೋಟಿ ರವೆಗೆ ಎರಡು ಚಮಚ ತುಪ್ಪ, ಸ್ವಲ್ಪ ಎಣ್ಣೆ , ಚೂರು ಉಪ್ಪು ಬೆರೆಸಿ ಪೂರಿಹಿಟ್ಟಿನ ಹದಕ್ಕೆ ಕಲಸಿಕೊಳ್ಳಬೇಕು. ಹಿಟ್ಟಿನ ಮೇಲೆ ಒದ್ದೆ ಬಟ್ಟೆ ಮುಚ್ಚಿಡಬೇಕು. ಹಿಟ್ಟು ಒಂದು ಗಂಟೆ ನೆನೆದ ನಂತರ ಪೂರಿ ತರಹ ತೆಳುವಾಗಿ ಲಟ್ಟಿಸಬೇಕು. ಹೂರಣವನ್ನು ಸಣ್ಣ ಉಂಡೆಗಳನ್ನಾಗಿ ಮಾಡಿ ಲಟ್ಟಿಸಿದ ಹಿಟ್ಟಿನ ಮೇಲಿಟ್ಟು ಕಡುಬಿನಾಕಾರಕ್ಕೆ ಮಡಿಚಿ, ಅಂಚನ್ನು ಒತ್ತಿ ಕಾದ ಎಣ್ಣೆಯಲ್ಲಿ ಅಥವಾ ತುಪ್ಪದಲ್ಲಿ ಕರಿಯಬೇಕು.
ಈಗ ಘಮ ಘಮ ಎನ್ನುವ ಗರಿಗರಿಯಾದ ಕಡುಬು ರೆಡಿಯಾಗಿದೆ. ಗಣಪನ ಮುಂದೆ ನೈವೇದ್ಯಕ್ಕೆ ಇಟ್ಟು ನಂತರ ಮನೆಗೆ ಬಂದವರೊಂದಿಗೂ ಹಂಚಿ ತಿನ್ನಿ. ನೀವು ಮಾಡಿದ ಕಡುಬನ್ನು ತಿಂದವರು ಹೊಗಳದೆ ಹಿಂದಿರುಗುವುದಿಲ್ಲ.



Click it and Unblock the Notifications